Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 56:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನೆಂದರೆ, ‘ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು’” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇಸ್ರಯೇಲಿನ ಸೆರೆಹೋದ ಜನರನ್ನು ಬರಮಾಡಿಕೊಳ್ಳುವ ದೇವರಾದ ಸರ್ವೇಶ್ವರ, “ನಾನು ಕೂಡಿಸಿಕೊಂಡ ಇಸ್ರಯೇಲ ಜನರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು” ಎಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನಂದರೆ - ನಾನು ಕೂಡಿಸಿದ ಇಸ್ರಾಯೇಲ್ಯರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇದು ನನ್ನ ಒಡೆಯನಾದ ಯೆಹೋವನ ಮಾತುಗಳು. ಇಸ್ರೇಲ್ ಜನರು ತಮ್ಮ ದೇಶದಿಂದ ಹೊರಗೆ ಹಾಕಲ್ಪಟ್ಟರು. ಆದರೆ ಯೆಹೋವನು ಅವರನ್ನು ಮತ್ತೆ ಬರಮಾಡುತ್ತಾನೆ. ಆತನು, “ಈ ಜನರನ್ನು ನಾನು ಮತ್ತೆ ಒಟ್ಟುಗೂಡಿಸುತ್ತೇನೆ” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇಸ್ರಾಯೇಲಿನ ಸೆರೆಹೋದ ಜನರನ್ನು ಕೂಡಿಸುವಂಥ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: “ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 56:8
25 ತಿಳಿವುಗಳ ಹೋಲಿಕೆ  

ಇದಲ್ಲದೆ ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.


“ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾ ಕೃಪೆಯಿಂದ ಸೇರಿಸಿಕೊಳ್ಳುವೆನು.


ಕಾಲವು ಪರಿಪೂರ್ಣವಾದಾಗ, ಆತನು ಭೂಪರಲೋಕಗಳಲ್ಲಿರುವ ಸಮಸ್ತವನ್ನು ಕ್ರಿಸ್ತನಲ್ಲಿ ಒಂದುಗೂಡಿಸುವುದೇ ಆ ಸಂಕಲ್ಪವಾಗಿತ್ತು.


ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ, ದೂರ ದ್ವೀಪಗಳಲ್ಲಿ ಸಾರಿರಿ! ಇಸ್ರಾಯೇಲರನ್ನು ಚದರಿಸಿದಾತನು, ‘ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು’ ಎಂದು ಪ್ರಕಟಿಸಿರಿ. ಯೆಹೋವನು ಯಾಕೋಬ್ಯರನ್ನು ವಿಮೋಚಿಸಿದ್ದಾನಲ್ಲಾ,


ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.


ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುದಾಗಿ ಪ್ರವಾದಿಸಿದನು


ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ದೈಹಿಕವಾಗಿ ಊನವಾದ ಜನಾಂಗವನ್ನು ಒಟ್ಟುಗೂಡಿಸುವೆನು, ನಾನು ಬಾಧಿಸಿ ತಳ್ಳಿದ ಪ್ರಜೆಯನ್ನು ಸೇರಿಸುವೆನು.


ಯೆಹೂದ್ಯರು ಮತ್ತು ಇಸ್ರಾಯೇಲರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು.


ಯೆಹೋವನು ಇಂತೆನ್ನುತ್ತಾನೆ, “ಇಗೋ, ‘ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರ’ ಎಂದು ಜನರು ಹೇಳಿ, ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ, ನಿನ್ನನ್ನು ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.”


ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಜನಾಂಗಗಳಿಗೆ ಕೈಸನ್ನೆಮಾಡಿ ದೇಶಾಂತರಗಳಿಗೆ ನನ್ನ ಧ್ವಜವನ್ನು ಎತ್ತುವೆನು. ಅವರು ನಿನ್ನ ಕುಮಾರರನ್ನು ಎದೆಗಪ್ಪಿಕೊಂಡು ಬರುವರು. ನಿನ್ನ ಕುಮಾರ್ತೆಯರನ್ನು ಹೆಗಲ ಮೇಲೆ ಕರೆದುತರುವರು.


ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಲಿಂದ ಮತ್ತು ಪಡವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.


‘ಅವರನ್ನು ಒಪ್ಪಿಸಿಬಿಡು’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ’ ಎಂದು ದಕ್ಷಿಣಕ್ಕೂ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ,


ಯೆಹೋವನು ಯೆರೂಸಲೇಮನ್ನು ಕಟ್ಟಿಸುತ್ತಿದ್ದಾನೆ, ಚದರಿಹೋಗಿದ್ದ ಇಸ್ರಾಯೇಲರನ್ನು ಕೂಡಿಸುತ್ತಿದ್ದಾನೆ,


ಯೆಹೋವನೇ, ನಮ್ಮ ದೇವರೇ, ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು. ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು.


ಅದಕ್ಕೆ ಯೆಹೂದ್ಯರು “ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿದ್ದಾನೆ? ಗ್ರೀಕರ ನಡುವೆ ಚದುರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಬೋಧನೆ ಮಾಡಬೇಕೆಂದಿರುವನೋ?


ಮಂದೆಯ ಕುರುಬನು ಸುತ್ತುಮುತ್ತಲು ಚದುರಿ ಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ, ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚದುರಿಹೋದ ಎಲ್ಲಾ ಸ್ಥಳಗಳಿಂದ ಅವುಗಳನ್ನು ರಕ್ಷಿಸುವೆನು.


ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು