Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 58:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ, “ಇಗೋ, ಇದ್ದೇನೆ” ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನು, ಇನ್ನೊಬ್ಬರನ್ನು ದೂಷಣೆಗೆ ಗುರಿಮಾಡಿ ತೋರುವ ಬೆರಳನ್ನು, ಕೆಡುಕಿನ ನುಡಿಯನ್ನು ಬಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ನೀವು ಪ್ರಾರ್ಥಿಸಿದರೆ, ಆ ಸ್ವಾಮಿ ನಿಮಗೆ ಉತ್ತರಿಸುವರು; ಮೊರೆಯಿಟ್ಟು ಕರೆದರೆ ‘ಇಗೋ ಆಲಿಸುತ್ತಿದ್ದೇನೆ’ ಎನ್ನುವರು. ನೀವು ದಬ್ಬಾಳಿಕೆ ನಡೆಸುವುದನ್ನೂ ಇತರರನ್ನು ಜರೆಯುವುದನ್ನೂ ಕೇಡನ್ನು ನುಡಿಯುವುದನ್ನೂ ನಿಮ್ಮ ನಡುವೆಯಿಂದ ತೊಲಗಿಸಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ ಇಗೋ, ಇದ್ದೇನೆ, ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನೂ ಬೆರಳಸನ್ನೆಯನ್ನೂ ಕೆಡುಕಿನ ನುಡಿಯನ್ನೂ ಹೋಗಲಾಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ನೀವು ಯೆಹೋವನನ್ನು ಕರೆದಾಗ ಆತನು ನಿಮಗೆ ಉತ್ತರಿಸುವನು. ನೀವು ಆತನನ್ನು ಕೂಗಿದಾಗ, “ಇಗೋ, ನಾನಿದ್ದೇನೆ” ಎಂದು ಅನ್ನುವನು. ನೀವು ಜನರಿಗೆ ಕಷ್ಟಕೊಡುವದನ್ನೂ ಅವರಿಗೆ ಭಾರ ಹೊರಿಸುವದನ್ನೂ ನಿಲ್ಲಿಸಬೇಕು. ಜನರಿಗೆ ಕಟುವಾಗಿ ಮಾತನಾಡಿ ಅವರನ್ನು ಬಯ್ಯುವದನ್ನು ನಿಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ನೀನು ಕರೆದರೆ ಯೆಹೋವ ದೇವರು ಉತ್ತರಕೊಡುವರು. ನೀನು ಕೂಗುವೆ, ಆಗ ಅವರು, ‘ನಾನು ಇಲ್ಲಿ ಇದ್ದೇನೆ,’ ಅನ್ನುವರು. “ನೀನು ನಿನ್ನ ಮಧ್ಯದೊಳಗಿಂದ ದಬ್ಬಾಳಿಕೆಯ ನೊಗವನ್ನೂ, ಬೆರಳ ಸನ್ನೆಯನ್ನೂ, ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 58:9
31 ತಿಳಿವುಗಳ ಹೋಲಿಕೆ  

ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.


ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;


ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ಕಣ್ಣನ್ನು ಮಿಟಕಿಸುತ್ತಾನೆ, ಕಾಲಿನಿಂದ ಕೆರೆಯುತ್ತಾನೆ, ಬೆರಳ ಸನ್ನೆಮಾಡುತ್ತಾನೆ.


ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು.


ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.


ನೀನು ಯೆಹೋವನಲ್ಲಿ ಸಂತೋಷಿಸು; ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.


ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು,


ಯಾರನ್ನು ಗೇಲಿಮಾಡಿ ವಿನೋದಪಡುತ್ತೀರಿ? ಯಾರನ್ನು ನೋಡಿ ಬಾಯಿದೆರೆದು ನಾಲಿಗೆಯನ್ನು ಚಾಚುತ್ತೀರಿ?


ವಿಗ್ರಹಗಳು ನುಡಿಯುವುದು ಸುಳ್ಳು; ಕಣಿಹೇಳುವವರು ದರ್ಶನವನ್ನು ಕಾಣುವುದು ಸುಳ್ಳು, ತಿಳಿಸುವ ಕನಸುಗಳು ಮೋಸವಾದವುಗಳು, ಹೇಳುವ ಸಮಾಧಾನವು ವ್ಯರ್ಥ. ಆದುದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.


ಅವನು ತಂದೆಯ ಬಳಿಗೆ ಹೋಗಿ, “ಅಪ್ಪಾ” ಎಂದು ಕರೆಯಲು, ತಂದೆಯು, “ಏನು ಮಗನೇ, ನೀನು ಯಾರು?” ಎಂದು ಕೇಳಿದನು.


“ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀವು ವ್ಯರ್ಥವಾದದ್ದನ್ನು ನುಡಿದು, ಸುಳ್ಳಾದ ದರ್ಶನವನ್ನು ಕಂಡಿದ್ದರಿಂದ ಇಗೋ, ನಿಮಗೆ ವಿರುದ್ಧವಾಗಿದ್ದೇನೆ’ ಇದು ಕರ್ತನಾದ ಯೆಹೋವನೆಂಬ ನನ್ನ ನುಡಿ.


ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ. ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.


ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ, ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.


ನೀನು ಪ್ರಾರ್ಥಿಸುವಿ, ಆತನು ಲಾಲಿಸುವನು, ಆತನಿಗೆ ಹರಕೆಗಳನ್ನು ಒಪ್ಪಿಸುವಿ.


ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. ಆತನು ತನ್ನ ಪವಿತ್ರ ಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು, ತನ್ನ ಭುಜಬಲದಿಂದ ಅವನಿಗೆ ವಿಜಯವನ್ನು ಉಂಟುಮಾಡುವನು.


ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.


ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತಹ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.


ನಾನು ಬಾಯಿಬಿಟ್ಟು ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲರ ಪಾಪವನ್ನು ಅರಿಕೆ ಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿದೆನು.


“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”


ಬೇರೆ ಯಾವುದರ ವಿಷಯದಲ್ಲಿ ಅವನು ಸುಳ್ಳಾಣೆಯಿಟ್ಟನೋ ಅದನ್ನು ಪೂರ್ತಿಯಾಗಿ ತಂದುಕೊಡಬೇಕಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಕೊಡಬೇಕು. ಅವನು ಪ್ರಾಯಶ್ಚಿತ್ತಯಜ್ಞವನ್ನು ಮಾಡುವ ದಿನದಲ್ಲೇ ಅದನ್ನು ನ್ಯಾಯವಾದ ಅದರ ಒಡೆಯನಿಗೆ ಹಿಂದಕ್ಕೆ ಕೊಡಬೇಕು.


ಯೆಹೋವನಿಗೆ ಮೊರೆಯಿಡುವವರು, ಯಥಾರ್ಥವಾಗಿ ಮೊರೆಯಿಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.


ನಾನು ನಿನ್ನನ್ನು ಕೂಗಿಕೊಂಡಾಗ ನನ್ನ ಸಮೀಪಕ್ಕೆ ಬಂದು “ಭಯಪಡಬೇಡ” ಎಂದು ಅಭಯವಚನ ನೀಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು