Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರೆಯಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸತ್ಯವು ಅದೃಶ್ಯವಾಗಿದೆ. ಕೇಡನ್ನು ಕೈಬಿಟ್ಟವನೇ ಖೂನಿಗೆ ಗುರಿಯಾಗುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರೆಯಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸತ್ಯವು ಹೊರಟುಹೋಯಿತು. ಒಳ್ಳೆಯದನ್ನು ಮಾಡುವವರು ಲೂಟಿಗೆ ಗುರಿಯಾಗಿದ್ದಾರೆ. ಒಳ್ಳೆಯವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಬೇಸರಗೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಬೇಟೆಯಾಗುತ್ತಾನೆ. ಯೆಹೋವ ದೇವರು ಇದನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:15
35 ತಿಳಿವುಗಳ ಹೋಲಿಕೆ  

ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ. ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರೂ ರಕ್ತಸುರಿಸಬೇಕೆಂದು ಹೊಂಚುಹಾಕುತ್ತಾರೆ. ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.


“ದೇವರೇ ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗುತ್ತಿದ್ದೇವೆ. ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಎಣಿಸಿದರು.” ಎಂಬುದಾಗಿ ಬರೆದಿರುವಂತೆ ಆಗುತ್ತದಲ್ಲಾ.


ಅನೇಕ ದಿನಗಳು ಕಳೆದ ಮೇಲೆ, ಯೆಹೂದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.


ಸೌಲನು ಇನ್ನೂ ಕರ್ತನ ಶಿಷ್ಯರ ಮೇಲೆ ಕೋಪವುಳ್ಳನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಲೋಚಿಸುತ್ತಾ ಮಹಾಯಾಜಕನ ಬಳಿಗೆ ಹೋಗಿ;


ನಮಗೆ ಬುದ್ಧಿಭ್ರಮಣೆಯಾಗಿದ್ದರೆ ಅದು ದೇವರ ಮಹಿಮೆಗಾಗಿಯೇ; ಹಾಗೂ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ಪ್ರಯೋಜನಕ್ಕಾಗಿಯೇ.


ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಹಾಶಬ್ದದಿಂದ; “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಹೇಳಿದನು.


ಇದನ್ನು ಕೇಳಿ ಆತನ ಬಂಧುಗಳು “ಅವನಿಗೆ ಹುಚ್ಚುಹಿಡಿದಿದೆ” ಎಂದು ಹೇಳಿ ಆತನನ್ನು ಹಿಡಿಯುವುದಕ್ಕೆ ಹೊರಟರು.


ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ.


“ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.


ಆದಕಾರಣ ನೀನು ಅವರಿಗೆ, ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ, ಶಿಕ್ಷಿತರಾಗದೆ ಇರುವ ಜನಾಂಗ ಇದುವೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ” ಎಂದು ಹೇಳು.


ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ. ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ.


ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತನಾಡಿದರೂ, ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ.


ಆದರೂ ಯೆಹೋವನು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ” ಎಂದು ಒಡಂಬಡಿಕೆ ಮಾಡಿ ಹೇಳಿದ್ದರಿಂದ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.


ದುಃಖಕಾಲವು ತೀರಿದ ನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ, ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕೃತ್ಯಗಳು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದೂ, ಅನೀತಿಯೂ ಆಗಿತ್ತು.


ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲಾ?


ಯೇಹುವು ತಿರುಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು, “ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಯೇಹುವು, “ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೇ ಗೊತ್ತಿದೆಯಲ್ಲಾ” ಎಂದು ಉತ್ತರಕೊಟ್ಟನು.


ಈ ನಡತೆ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದುದರಿಂದ ಆತನು ಅವನನ್ನೂ ಸಾಯಿಸಿದನು.


ಅವರಲ್ಲಿ ಅನೇಕರು ಆತನಿಗೆ, “ದೆವ್ವ ಹಿಡಿದಿದೆ, ಹುಚ್ಚನಾಗಿದ್ದಾನೆ, ನೀವು ಏಕೆ ಆತನ ಮಾತುಗಳನ್ನು ಕೇಳುತ್ತೀರಿ?” ಎಂದರು.


ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ.


ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ, ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನು ಹೇಳಲಿ!


ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ, ದಿಕ್ಕಿಲ್ಲದವರಿಗೆ ನ್ಯಾಯವನ್ನು ತಪ್ಪಿಸಿ, ಅನಾಥರನ್ನು ಕೊಳ್ಳೆಹೊಡೆದು, ವಿಧವೆಯರನ್ನು ಸೂರೆಮಾಡಬೇಕೆಂದಿದ್ದಾರೆ.


ಸುಳ್ಳುಸಾಕ್ಷಿಯಿಂದ ತಪ್ಪು ಹೊರಿಸುವವರೂ, ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ, ನ್ಯಾಯವಂತನ ನ್ಯಾಯವನ್ನು ಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲರೂ ನಿರ್ಮೂಲವಾಗುವರು.


ಮೋಸಗಾರನ ಆಯುಧಗಳು ಕೆಟ್ಟವುಗಳೇ, ದೀನದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವರನ್ನು ಸುಳ್ಳುಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.


ಇವರಲ್ಲಿ ಯಾರೂ ನ್ಯಾಯಸ್ಥಾನಕ್ಕೆ ನ್ಯಾಯವಾಗಿ ಹೋಗುವುದಿಲ್ಲ, ಯಾರೂ ಸತ್ಯವಾಗಿ ವಾದಿಸುವುದಿಲ್ಲ; ಇವರು ಶೂನ್ಯವಾಗಿರುವುದನ್ನು ನಂಬಿಕೊಂಡು ಸುಳ್ಳನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.


ಕಂಡ ದೋಷವನ್ನು ಚಾವಡಿಯಲ್ಲಿ ಖಂಡಿಸುವವನ ಮೇಲೆ ಹಗೆತೋರಿಸುತ್ತೀರಿ, ಯಥಾರ್ಥರನ್ನು ದ್ವೇಷಿಸುತ್ತೀರಿ.


ಕಠಿಣ ಹೃದಯದವರೇ, ನೀತಿಗೆ ದೂರವಾದವರೇ, ನನ್ನ ಮಾತಿಗೆ ಕಿವಿಗೊಡಿರಿ.


ನೀವೆಲ್ಲರೂ ಕತ್ತಿಗೆ ಬೀಳುವಿರಿ, ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ, ಏಕೆಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಿದರೂ ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ, ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡಿರಿ.”


ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು; ಏಕೆಂದರೆ ನಾನು ಕೂಗಿದಾಗ ಯಾರೂ ಉತ್ತರಕೊಡಲಿಲ್ಲ, ನಾನು ಹೇಳಿದಾಗ ಇವರು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡರು.”


ವ್ಯಾಜ್ಯವನ್ನು ಅನ್ಯಾಯವಾಗಿ ತೀರಿಸುವುದೂ, ಇವುಗಳನ್ನು ಕರ್ತನು ಲಕ್ಷ್ಯಕ್ಕೆ ತಾರನೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು