Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ನೀತಿಯನ್ನು ವಜ್ರಕವಚವನ್ನಾಗಿ ಹಾಕಿಕೊಂಡು, ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು, ಸೇಡನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರು ನ್ಯಾಯನೀತಿಯನ್ನು ವಜ್ರಕವಚವನ್ನಾಗಿ ತೊಟ್ಟುಕೊಳ್ಳುವರು. ರಕ್ಷಣೆ ಎಂಬ ಶಿರಸ್ತ್ರಾಣವನ್ನು ಧರಿಸಕೊಳ್ಳುವರು. ಪ್ರತೀಕಾರವೆಂಬ ಉಡುಪನ್ನು ಉಟ್ಟುಕೊಳ್ಳುವರು. ಆಗ್ರಹ ಎಂಬ ನಿಲುವಂಗಿಯನ್ನು ಹಾಕಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಧರ್ಮವನ್ನು ವಜ್ರ ಕವಚವನ್ನಾಗಿ ತೊಟ್ಟು ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು ಆಗ್ರಹವನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನು ಯುದ್ಧ ಸನ್ನದ್ಧನಾದನು. ಆತನು ಒಳ್ಳೆಯತನವೆಂಬ ಕವಚ, ರಕ್ಷಣೆಯೆಂಬ ಶಿರಸ್ತ್ರಾಣ, ಶಿಕ್ಷೆಯೆಂಬ ಬಟ್ಟೆ ಮತ್ತು ಗಾಢವಾದ ಪ್ರೇಮವೆಂಬ ಮೇಲ್ಹೊದಿಕೆಯನ್ನು ಧರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು. ಪ್ರತೀಕಾರದ ವಸ್ತ್ರಗಳನ್ನು ಹೊದಿಕೆಯಾಗಿ ಹೊದ್ದುಕೊಂಡು, ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:17
24 ತಿಳಿವುಗಳ ಹೋಲಿಕೆ  

ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ.


ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು,


ನಾವಾದರೋ ಹಗಲಿನವರಾಗಿರಲಾಗಿ ನಂಬಿಕೆ ಪ್ರೀತಿಗಳೆಂಬ ಎದೆಕವಚವನ್ನೂ, ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.


ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.


“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ.


ಆಗ “ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು.


ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?


ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.


ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.


ನಾನು ಧರ್ಮವನ್ನು ಧರಿಸಿಕೊಂಡೆನು, ಧರ್ಮವು ನನ್ನನ್ನು ಧರಿಸಿತು. ನನ್ನ ನ್ಯಾಯವೇ ನನಗೆ ನಿಲುವಂಗಿಯೂ, ಕಿರೀಟವೂ ಆಗಿತ್ತು.


ಸತ್ಯವಾಕ್ಯ, ದೇವರ ಮಹತ್ವ ಇವುಗಳಿಂದ ಕೂಡಿದವರಾಗಿ, ಎಡಬಲಗೈಗಳಲ್ಲಿ ನೀತಿಯೆಂಬ ಆಯುಧಗಳನ್ನು ಧರಿಸಿಕೊಂಡಿದ್ದೇವೆ.


ನಿನ್ನ ಆಲಯದ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ.


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.


ಆಗ ಆ ದೂತನು ನನಗೆ ಈ ಅಪ್ಪಣೆ ಮಾಡಿದನು, “ನೀನು ಹೀಗೆ ಸಾರಿ ಹೇಳಬೇಕು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಯೆರೂಸಲೇಮಿಗೂ, ಚೀಯೋನಿಗೂ ಅವಮಾನವಾಯಿತಲ್ಲಾ’ ಎಂದು ಬಹಳವಾಗಿ ಅಸಮಾಧಾನಗೊಂಡಿದ್ದೇನೆ.


ಆಕಾಶದಿಂದ ನೋಡು, ಪರಿಶುದ್ಧವೂ, ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಉತ್ಸಾಹವೆಲ್ಲಿ, ನಿನ್ನ ಸಾಹಸ ಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ, ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿ ಹಿಡಿದಿದ್ದಿ.


ನಾನೊಬ್ಬನೇ ದ್ರಾಕ್ಷಿಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ. ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ತುಳಿದುಹಾಕಿದೆನು; ಅವರ ಜೀವಸತ್ವ ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಲಿನ ಮಾಡಿಕೊಂಡೆನು.


ಯೆಹೋವನೇ, ಮುಯ್ಯಿತೀರಿಸುವ ದೇವರೇ, ಮುಯ್ಯಿತೀರಿಸುವ ದೇವರೇ, ಕೋಪವನ್ನು ತೋರ್ಪಡಿಸು.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.


ಯೆರೂಸಲೇಮಿನಲ್ಲಿ ಉಳಿದವರು ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿಹೊಂದುವರು; ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.


ಯೆಹೋವನು ಶೂರನಂತೆ ಹೊರಟು, ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು. ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.


ನಿನ್ನ ಉಡುಪು ಏಕೆ ಕೆಂಪಾಗಿದೆ, ನಿನ್ನ ವಸ್ತ್ರಗಳು ದ್ರಾಕ್ಷಿಯನ್ನು ತುಳಿಯುವವನ ಬಟ್ಟೆಯ ಹಾಗಿರುವುದು ಏಕೆ?


“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು