Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “ಒಬ್ಬ ವಿಮೋಚಕನು ಚೀಯೋನಿಗೂ, ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ಬರುವನು”, ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸರ್ವೇಶ್ವರ ಸ್ವಾಮಿ ಜನರಿಗೆ ಹೀಗೆನ್ನುತ್ತಾರೆ : “ಸಿಯೋನಿಗೆ ಹಾಗೂ ಪಾಪವನ್ನು ತೊರೆದುಬಿಟ್ಟ ಯಕೋಬ್ಯರ ಬಳಿಗೆ ನಾನು ಉದ್ಧಾರಕನಾಗಿ ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ಚೀಯೋನಿಗೂ ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ವಿಮೋಚಕನಾಗಿ ಬರುವನು. ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ಒಬ್ಬ ರಕ್ಷಕನು ಚೀಯೋನಿಗೆ ಬರುವನು. ಜನರು ಪಾಪಮಾಡಿದ್ದರೂ ದೇವರ ಬಳಿಗೆ ಹಿಂತಿರುಗಿ ಬಂದ ಯಾಕೋಬನ ಜನರ ಬಳಿಗೆ ಆತನು ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ವಿಮೋಚಕನು ಚೀಯೋನಿಗೂ ಯಾಕೋಬಿನಲ್ಲಿ ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಡುವವರಿಗಾಗಿಯೂ ಬರುವನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:20
18 ತಿಳಿವುಗಳ ಹೋಲಿಕೆ  

ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.


ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ


ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.”


ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ” ಎಂದು ಹೇಳಿದನು.


ಮೋಶೆಯ ಧರ್ಮನಿಯಮಗಳಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.


ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು!


ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.


ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು.


ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾಕ್ರಮಿಯಾದ ದೇವರ ಕಡೆಗೆ ತಿರುಗಿಕೊಳ್ಳುವರು.


ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದವರು ಮಾತ್ರ ತಿರುಗಿಕೊಳ್ಳುವರು. ನಾಶವಾಗುವುದಕ್ಕೆ ವಿಧಿಸಲ್ಪಟ್ಟದ್ದು, ನ್ಯಾಯನೀತಿಯಿಂದ ತುಂಬಿ ತುಳುಕುವುದು.


“ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ” ಎಂಬುದಾಗಿ ಯೆಹೋವನು ಭೂಮಿಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು