Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾದುವು, ನಿಮ್ಮ ಬೆರಳುಗಳು ಅಕ್ರಮದಿಂದ ಮಲಿನವಾಗಿವೆ, ನಿಮ್ಮ ತುಟಿಗಳು ಸುಳ್ಳು ನುಡಿಯುತ್ತವೆ. ನಿಮ್ಮ ನಾಲಿಗೆ ಕೆಡುಕನ್ನು ಗೊಣಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿಮ್ಮ ಕೈಗಳು ಮಲಿನವಾಗಿವೆ; ಅವು ರಕ್ತಮಯವಾಗಿವೆ. ನಿಮ್ಮ ಬೆರಳುಗಳು ಅಪರಾಧಗಳಿಂದ ಅಶುದ್ಧವಾಗಿವೆ. ನಿಮ್ಮ ಬಾಯಿಗಳಿಂದ ನೀವು ಸುಳ್ಳಾಡುತ್ತೀರಿ. ನಿಮ್ಮ ನಾಲಿಗೆಯು ಕೆಟ್ಟ ಮಾತುಗಳನ್ನಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ನಿಮ್ಮ ಕೈಗಳು ರಕ್ತದಿಂದಲೂ, ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ. ನಿಮ್ಮ ತುಟಿಗಳು ಸುಳ್ಳನ್ನು ಆಡುತ್ತವೆ. ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:3
31 ತಿಳಿವುಗಳ ಹೋಲಿಕೆ  

ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


“ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀವು ವ್ಯರ್ಥವಾದದ್ದನ್ನು ನುಡಿದು, ಸುಳ್ಳಾದ ದರ್ಶನವನ್ನು ಕಂಡಿದ್ದರಿಂದ ಇಗೋ, ನಿಮಗೆ ವಿರುದ್ಧವಾಗಿದ್ದೇನೆ’ ಇದು ಕರ್ತನಾದ ಯೆಹೋವನೆಂಬ ನನ್ನ ನುಡಿ.


ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು.


ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”


ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ.


ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ. ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರೂ ರಕ್ತಸುರಿಸಬೇಕೆಂದು ಹೊಂಚುಹಾಕುತ್ತಾರೆ. ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.


ಪಟ್ಟಣದ ಧನಿಕರು ತುಂಬಾ ಬಲಾತ್ಕಾರಿಗಳು. ಅದರ ನಿವಾಸಿಗಳು ಸುಳ್ಳುಗಾರರು. ಅವರ ಬಾಯನಾಲಿಗೆಯು ಮೋಸಕರ.


ಅವರು ನನ್ನಿಂದ ಅಗಲಿ ಹೋಗಿದ್ದಾರೆ, ಹಾಳಾಗಲಿ! ನನಗೆ ದ್ರೋಹಮಾಡಿದ್ದಾರೆ, ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದು ಇರುವಾಗಲೂ ನನ್ನ ವಿಷಯವಾಗಿ ಸುಳ್ಳಾಡಿದ್ದಾರೆ, ಅವರನ್ನು ಹೇಗೆ ಉದ್ಧರಿಸಲಿ!


ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ನಡೆಯುತ್ತಿವೆ, ದೇಶವೆಲ್ಲಾ ರಕ್ತಮಯವಾಗಿದೆ.


ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು, ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದಕಾರಣ ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು’” ಇದು ಕರ್ತನಾದ ಯೆಹೋವನ ನುಡಿ.


ಆತನು ನನಗೆ, “ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡುವುದಿಲ್ಲ’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದಾರೆ.


ಒಂದು ಸರಪಣಿಯನ್ನು ಮಾಡು; ಏಕೆಂದರೆ ದೇಶವು ನರಹತ್ಯಭರಿತವಾಗಿದೆ, ಪಟ್ಟಣವು ಹಿಂಸೆಯಿಂದ ತುಂಬಿಹೋಗಿದೆ.


ಆಹಾ, ನೀವು ನಿಷ್ಪ್ರಯೋಜಕವಾದ ಸುಳ್ಳುಮಾತುಗಳಲ್ಲಿ ಭರವಸವಿಟ್ಟಿದ್ದೀರಿ.


ಕಪಟದಿಂದ ಸುಳ್ಳಾಡುವವರು, ಸ್ವಂತ ಮನಸ್ಸಾಕ್ಷಿಯ ಮೇಲೆ ಬರೆಹಾಕಲ್ಪಟ್ಟವರಾಗಿದ್ದು,


“ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು.


ತಮ್ಮ ಕೆಟ್ಟತನದಿಂದ ರಾಜನನ್ನು ಆನಂದಗೊಳಿಸುತ್ತಾರೆ, ಸುಳ್ಳುಗಳಿಂದ ಮುಖಂಡರನ್ನು ಸಂತೋಷಪಡಿಸುತ್ತಾರೆ.


“ನರಪುತ್ರನೇ, ರಕ್ತಮಯವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೋ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು,


ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.


ಏಕೆಂದರೆ ಯೆರೂಸಲೇಮ್ ಹಾಳಾಯಿತು. ಯೆಹೂದವು ಬಿದ್ದುಹೋಯಿತು. ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತದಲ್ಲವೇ?


ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,


ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು.


ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ.


ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರು.


ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, “ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ” ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.


ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ. ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.


ಅವು ಯಾವುವೆಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷಿಗಳ ರಕ್ತವನ್ನು ಸುರಿಸುವ ಕೈ,


ಆಹಾ! ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೆಯದು! ಆಗ ನಾನು ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ವ್ಯಭಿಚಾರಿಗಳ, ದ್ರೋಹಿಗಳ ಗುಂಪೇ.


ಹೀಗಿರಲು ಸೇನಾಧೀಶ್ವರನಾದ ಯೆಹೋವನು, “ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು.


ಇಷ್ಟೆಲ್ಲಾ ನಡೆಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು. ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕ ಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು