Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇವರಲ್ಲಿ ಯಾರೂ ನ್ಯಾಯಸ್ಥಾನಕ್ಕೆ ನ್ಯಾಯವಾಗಿ ಹೋಗುವುದಿಲ್ಲ, ಯಾರೂ ಸತ್ಯವಾಗಿ ವಾದಿಸುವುದಿಲ್ಲ; ಇವರು ಶೂನ್ಯವಾಗಿರುವುದನ್ನು ನಂಬಿಕೊಂಡು ಸುಳ್ಳನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನ್ಯಾಯಸ್ಥಾನದಲ್ಲಿ ನ್ಯಾಯಾನುಸಾರ ವಾದಿಸುವವನು ಯಾರೂ ಇಲ್ಲ; ಸತ್ಯಾನುಸಾರ ತೀರ್ಪುಕೊಡುವವನು ಯಾರೂ ಇಲ್ಲ; ನೀವು ಶೂನ್ಯವಾದುದ್ದನ್ನೇ ನಂಬುತ್ತೀರಿ, ಅಬದ್ಧವಾದುದನ್ನೇ ಆಡುತ್ತೀರಿ, ಕೇಡನ್ನು ಬಸಿರಿಸಿ ಅಕ್ರಮವನ್ನು ಹೆರುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 [ಇವರಲ್ಲಿ] ಯಾರೂ ನ್ಯಾಯವಾಗಿ ನ್ಯಾಯಾಸ್ಥಾನಕ್ಕೆ ಹೋಗುವದಿಲ್ಲ, ಯಾರೂ ಸತ್ಯವಾಗಿ ವಾದಿಸುವದಿಲ್ಲ; ಇವರು ಶೂನ್ಯವಾಗಿರುವದನ್ನು ನಂಬಿಕೊಂಡು ಅಬದ್ಧವನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೆರೆಯವನ ಬಗ್ಗೆ ಯಾರೂ ಸತ್ಯವನ್ನಾಡುವದಿಲ್ಲ. ಜನರು ನ್ಯಾಯಾಲಯಗಳಲ್ಲಿ ಪರಸ್ಪರ ವ್ಯಾಜ್ಯ ಮಾಡುವರು. ತಾವು ಗೆಲ್ಲಬೇಕೆಂಬ ಉದ್ದೇಶದಿಂದ ಸುಳ್ಳುಸಾಕ್ಷಿಯ ಮೇಲೆ ಅವಲಂಬಿಸುವರು. ಅವರು ಒಬ್ಬರ ಮೇಲೊಬ್ಬರು ಸುಳ್ಳು ಹೇಳುತ್ತಾರೆ; ಅವರು ಕೇಡಿನಿಂದ ತುಂಬಿದವರಾಗಿದ್ದು ಕೇಡನ್ನೇ ಹೆರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀತಿಗೋಸ್ಕರ ಕರೆಯುವವನು ಯಾವನೂ ಇಲ್ಲ, ಸತ್ಯಕ್ಕೋಸ್ಕರ ನ್ಯಾಯ ವಿಚಾರಿಸುವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡುತ್ತಾರೆ. ಸುಳ್ಳನ್ನು ಮಾತನಾಡುತ್ತಾರೆ. ಕೇಡನ್ನು ಗರ್ಭಧರಿಸಿ, ಅಕ್ರಮವನ್ನು ಹೆರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:4
36 ತಿಳಿವುಗಳ ಹೋಲಿಕೆ  

ಅವರು ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುವರು, ಅವರ ಹೊಟ್ಟೆಯು ವಂಚನೆಯಿಂದ ತುಂಬಿರುವುದು.”


ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ.


ಆಹಾ, ನೀವು ನಿಷ್ಪ್ರಯೋಜಕವಾದ ಸುಳ್ಳುಮಾತುಗಳಲ್ಲಿ ಭರವಸವಿಟ್ಟಿದ್ದೀರಿ.


‘ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ’ ಎಂಬ ಸುಳ್ಳು ಮಾತುಗಳ ಮೇಲೆ ಭರವಸವಿಡಬೇಡಿರಿ.


ತಮ್ಮ ಹಾಸಿಗೆಯಲ್ಲಿ ಮಲಗಿರುವಾಗಲೇ ಅನ್ಯಾಯವನ್ನು ಯೋಚಿಸಿ, ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ. ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೇ.


ಆದುದರಿಂದ ಇಸ್ರಾಯೇಲರ ಸದಮಲಸ್ವಾಮಿಯು ಹೀಗೆನ್ನುತ್ತಾನೆ, “ನೀವು ಈ ನನ್ನ ಮಾತನ್ನು ಅಸಡ್ಡೆಮಾಡಿ, ಬಲಾತ್ಕಾರ ಕುಯುಕ್ತಿಗಳನ್ನು ನಂಬಿ,


ಕೇಡುಮಾಡದಿದ್ದರೆ ಅವರಿಗೆ ನಿದ್ರೆಬಾರದು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವುದು.


ಯೆಹೋವನು ಇವುಗಳನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು; ಉದ್ಧಾರಕನಾದ ಯಾವ ಪುರುಷನೂ ಇಲ್ಲವೆಂದು ಕಂಡು ಸ್ತಬ್ಧನಾದನು; ಆಗ ಆತನ ಸ್ವಹಸ್ತವೇ ಆತನಿಗೆ ರಕ್ಷಣಾ ಸಾಧನವಾಯಿತು, ಆತನ ಧರ್ಮವೇ ಆತನಿಗೆ ಆಧಾರವಾಯಿತು.


ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ.


ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.


ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನು ಅನುಸರಿಸುವ ಒಬ್ಬನಾದರೂ ಇದ್ದಾನೋ? ಇಂತಹ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬುದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷಮಿಸುವೆನು.


ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ. ಸುಳ್ಳಾಡುವುದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. ಸೆಲಾ


ಅವನು ಭ್ರಮೆಗೊಂಡು ಶೂನ್ಯವಾದದ್ದರ ಮೇಲೆ ನಂಬಿಕೆಯಿಡದಿರಲಿ, ಇಟ್ಟರೆ ಅವನಿಗಾಗುವ ಪ್ರತಿಫಲವು ಶೂನ್ಯವೇ,


ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.


ಅಯ್ಯೋ, ವ್ಯರ್ಥವಾದ ಹಗ್ಗಗಳಿಂದ ಅಪರಾಧ ದಂಡನೆಯನ್ನು, ರಥವನ್ನು ಹಗ್ಗಗಳಿಂದಲೋ ಎಂಬಂತೆ ಪಾಪವನ್ನು ಎಳೆದುಕೊಳ್ಳುತ್ತಾ,


ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು.


ಅಯ್ಯೋ, ಅನ್ಯಾಯವಾದ ತೀರ್ಪುಗಳನ್ನು ತೀರಿಸಿ, ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ.


ನಾವು ಗರ್ಭಧರಿಸಿ, ವೇದನೆಪಟ್ಟು ಗಾಳಿಯನ್ನು ಹಡೆದಂತಾಯಿತು, ದೇಶಕ್ಕೆ ನಮ್ಮಿಂದ ಯಾವ ಉದ್ಧಾರವೂ ಆಗಲಿಲ್ಲ, ನಮ್ಮೊಳಗೆ ಯಾವ ಭೂನಿವಾಸಿಗಳೂ ಹುಟ್ಟಲಿಲ್ಲ.


ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ.


ಏಕೆಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು.


ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರು.


ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರುವಿರಿ. ನಿಮ್ಮ ಉಸಿರೇ ನಿಮ್ಮನ್ನು ನುಂಗುವ ಜ್ವಾಲೆಯಾಗುವುದು.


ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, “ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ” ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.


ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು, “ನನ್ನನ್ನು ಯಾರೂ ನೋಡರು?” ಎಂದುಕೊಂಡಿದ್ದಿ. ನನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಎಂದು ಯೋಚಿಸಿಕೊಂಡಿದ್ದಿ.


ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರೆಯಾಗುತ್ತಾನೆ.


ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.


ನೀನು ನಿನ್ನ ಕೆಲಸಗಳಲ್ಲಿಯೂ, ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ; ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.


ಇಸ್ರಾಯೇಲರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದ ಹಾಕಿದ್ದಾನೆ. ಏಕೆಂದರೆ ಪ್ರೀತಿ, ಸತ್ಯ, ದೇವಜ್ಞಾನಗಳು ದೇಶದಲ್ಲಿಲ್ಲ.


ಅವನು ಅಗೆದು ಅಗೆದು ಗುಂಡಿಯನ್ನು ತೋಡಿ, ಅದರೊಳಗೆ ತಾನೇ ಬಿದ್ದುಹೋದನಲ್ಲಾ.


ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ.


ಆಗ ಯೆಹೂದ್ಯರು ಈ ಸಂಗತಿಗಳು ನಿಜವಾಗಿವೆ ಎಂದು ಹೇಳಿ ತಾವೂ ಆ ದೋಷಾರೋಪಣೆ ಮಾಡುವವರೊಂದಿಗೆ ಸೇರಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು