Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನನ್ನು ಆರಾಧಿಸದ ಜನಾಂಗ ಮತ್ತು ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳಾಗಿ ಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾಶವಾಗುವುವು ನಿನ್ನ ಸೇವೆಮಾಡಲೊಲ್ಲದ ರಾಜ್ಯಗಳು, ಜನಾಂಗಗಳು; ಹೌದು, ಸಂಪೂರ್ಣವಾಗಿ ಹಾಳಾಗುವುವು ಆ ಜನಾಂಗಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನ್ನನ್ನು ಸೇವಿಸಲೊಲ್ಲದ ಜನಾಂಗ ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳೇ ಹಾಳಾಗಿ ಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿನ್ನ ಸೇವೆಮಾಡದ ಯಾವ ರಾಜ್ಯವಾಗಲಿ ನಾಶಮಾಡಲ್ಪಡುವದು. ಹೌದು, ಆ ರಾಜ್ಯಗಳು ಸರ್ವನಾಶವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿನ್ನನ್ನು ಸೇವಿಸದ ಜನಾಂಗವೂ, ರಾಜ್ಯವೂ ನಾಶವಾಗುವುದು. ಆ ಜನಾಂಗಗಳು ಸಂಪೂರ್ಣವಾಗಿ ಹಾಳಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:12
18 ತಿಳಿವುಗಳ ಹೋಲಿಕೆ  

ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ ಅದು ನನ್ನ ಅಪ್ಪಣೆಯಿಂದ ಅಲ್ಲ; ಯಾರು ನಿನ್ನ ಮೇಲೆ ವ್ಯಾಜ್ಯವಾಡುತ್ತಾರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು.


ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.


ಆಹಾ, ನಿನ್ನ ಮೇಲೆ ಕಿಡಿಕಿಡಿಯಾದವರು ಆಶಾಭಂಗಪಟ್ಟು ಅವಮಾನಹೊಂದುವರು, ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು.


ಜನಾಂಗದವರು ಅವರನ್ನು ಕರೆದು ತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡು ಹೆಣ್ಣಾಳುಗಳನ್ನಾಗಿ, ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡೆಸುವರು.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.


ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ” ಅಂದನು.


ಈ ಕಲ್ಲಿನ ಮೇಲೆ ಬೀಳುವವನು ತುಂಡು ತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅದು ಅವನನ್ನು ಪುಡಿಪುಡಿ ಮಾಡುವುದು” ಎಂದು ಹೇಳಿದನು.


ಜನಗಳು ನಿನ್ನನ್ನು ಆರಾಧಿಸಲಿ, ಜನಾಂಗಗಳು ನಿನಗೆ ಅಧೀನವಾಗಲಿ. ನಿನ್ನ ಅಣ್ಣತಮ್ಮಂದಿರಿಗೆ ನೀನು ದೊರೆಯಾಗಿರು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ, ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ” ಎಂದನು.


ದೇವರಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.


ಆದರೆ ಯಾವ ಜನಾಂಗವು ಕೇಳುವುದಿಲ್ಲವೋ ಅದನ್ನು ನಾನು ಕಿತ್ತುಹಾಕುವೆನು, ಹೌದು, ಕಿತ್ತುಹಾಕಿ ನಾಶ ಮಾಡುವೆನು ಎಂಬುದು ಯೆಹೋವನ ನುಡಿ” ಎಂದು ಹೇಳುತ್ತಾನೆ.


“ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು.


ಆದರೆ ರಾಜ್ಯವು ಪರಾತ್ಪರನಾದ ದೇವರ ಭಕ್ತರಿಗೆ ಲಭಿಸುವುದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು’ ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.


ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.


ನಾನು ಎಫ್ರಾಯೀಮಿನ ರಥಬಲವನ್ನೂ, ಯೆರೂಸಲೇಮಿನ ಅಶ್ವಬಲವನ್ನೂ ನಿಶ್ಶೇಷಮಾಡುವೆನು; ಯುದ್ಧದ ಬಿಲ್ಲು ಇಲ್ಲವಾಗುವುದು; ಆತನು ಕೊಡುವ ಅಪ್ಪಣೆಯು ಜನಾಂಗಗಳಿಗೆ ಸಮಾಧಾನಕರವಾಗಿರುವುದು; ಆತನ ಆಳ್ವಿಕೆಯು ಸಮುದ್ರದಿಂದ ಸಮುದ್ರದವರೆಗೂ ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಹರಡಿಕೊಂಡಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು