Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು ನಿನ್ನ ದೇಶದಲಿ ನಾಶವಿನಾಶಗಳ ವಾರ್ತೆಯೇ ಕೇಳಿಬರದು ನಿನ್ನ ಪ್ರಾಂತ್ಯಗಳಲಿ. ಆಗ ಹೆಸರಿಡುವೆ ನಿನ್ನ ಪೌಳಿಗೋಡೆಗೆ ‘ದೈವಮುಕ್ತಿ’ ಎಂದು ನಿನ್ನೀ ಪುರದ್ವಾರಗಳಿಗೆ “ದೈವಸ್ತುತಿ’ ಎಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಬರುವದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇನ್ನು ಮುಂದೆ ಮತ್ತೆ ಹಿಂಸಾಚಾರದ ವರ್ತಮಾನವು ನಿನ್ನಲ್ಲಿರುವದಿಲ್ಲ. ಜನರು ಇನ್ನೆಂದಿಗೂ ನಿನ್ನ ಮೇಲೆರಗಿ ನಿನ್ನನ್ನು ದೋಚುವದಿಲ್ಲ. ನಿನ್ನ ಗೋಡೆಗಳಿಗೆ ‘ರಕ್ಷಣೆ’ ಎಂದೂ ದ್ವಾರಗಳಿಗೆ ‘ಸ್ತೋತ್ರ’ವೆಂದೂ ಹೆಸರಿಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಬಲಾತ್ಕಾರವೂ, ನಿನ್ನ ದೇಶದೊಳಗೆ ಹಾಳಾದದ್ದೂ, ನಾಶವೂ, ನಿನ್ನ ಮೇರೆಗಳಲ್ಲಿ ಕೇಳಿಬರುವುದಿಲ್ಲ. ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ, ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:18
23 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು, “ನಮಗೆ ಬಲವಾದ ಪಟ್ಟಣವಿದೆ. ಯೆಹೋವನು ತನ್ನ ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.


ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವುದು.


ಯಾರೂ ಹಾದುಹೋಗದಂತೆ ನನ್ನ ಆಲಯದ ಸುತ್ತಲು ಪಾಳೆಯನ್ನು ಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ದಾಳಿಮಾಡುವುದಿಲ್ಲ; ಏಕೆಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ.


ಆತನು ದೇಶದೇಶಗಳ ವ್ಯಾಜ್ಯವನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ ಆಯುಧಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನು ನೇಗಿಲ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರುದ್ಧವಾಗಿ ಜನಾಂಗವು ಕತ್ತಿಯನ್ನೆತ್ತದು. ಇನ್ನು ಮೇಲೆ ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.


ಆತನು ಬಹು ರಾಷ್ಟ್ರದವರ ವ್ಯಾಜ್ಯಗಳನ್ನು ವಿಚಾರಿಸುವನು, ಪ್ರಬಲ ಜನಾಂಗಗಳಿಗೆ ನ್ಯಾಯತೀರಿಸುವನು. ಅವರೋ ತಮ್ಮ ಕತ್ತಿಗಳನ್ನು ಕುಲುಮೆಗೆ ಹಾಕಿ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು. ಇನ್ನು ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.


ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು, ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವು ಇಲ್ಲದೆ ಅಲ್ಲಿ ವಾಸಿಸುವರು.


ಆತನು ನಿನ್ನ ಪ್ರಾಂತ್ಯದೊಳಗೆ ಸೌಭಾಗ್ಯವನ್ನು ಉಂಟುಮಾಡುತ್ತಾನೆ, ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ.


ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಗೊಳ್ಳುವ ಜನಾಂಗವು ಒಳಗೆ ಪ್ರವೇಶಿಸಲಿ!


ನಿನಗೆ ಈ ಎರಡು ಬಾಧೆಗಳು ಬಂದಿವೆ, ನಿನಗೋಸ್ಕರ ಸಂತಾಪವನ್ನು ತೋರಿಸುವವರು ಯಾರಿದ್ದಾರೆ? ನಾಶವೋ, ಸಂಹಾರವೋ, ಕ್ಷಾಮವೋ, ಶಕ್ತಿಯೋ. ನಾನು ನಿನ್ನನ್ನು ಹೇಗೆ ಸಂತೈಸಲಿ?


ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವುದಿಲ್ಲ, ನಾಶನವು ದೂರವಾಗಿರುವುದು, ನಿನ್ನ ಹತ್ತಿರಕ್ಕೆ ಬಾರದು.


ಹಿಡಿದುಕೊಂಡಿರುವ ಮಂಗಳಮುಖಿಯರಿಗೆ ನನ್ನ ಪ್ರಾಕಾರಗಳೊಳಗೆ ನನ್ನ ಆಲಯದಲ್ಲಿ ಅವರ ಜ್ಞಾಪಕಾರ್ಥವಾಗಿ ಶಿಲೆಯನ್ನಿಟ್ಟು ಹೆಣ್ಣುಗಂಡು ಮಕ್ಕಳಿಗಿಂತ ಮೇಲಾದ ಹೆಸರನ್ನು ದಯಪಾಲಿಸುವೆನು; ಹೌದು, ಎಂದಿಗೂ ಅಳಿಯದ ಶಾಶ್ವತನಾಮವನ್ನು ಅನುಗ್ರಹಿಸುವೆನು.


ಜನಾಂಗಗಳ ಐಶ್ವರ್ಯವನ್ನು ನಿನ್ನಲ್ಲಿಗೆ ತರುತ್ತಿರುವರು. ಅವುಗಳ ಅರಸರು ಮೆರವಣಿಗೆಯಾಗಿ ಬರುತ್ತಿರುವರು; ಇದರಿಂದ ನಿನ್ನ ಬಾಗಿಲುಗಳು ಹಗಲಿರುಳೂ ಮುಚ್ಚದೆ ಸದಾ ತೆರೆದಿರುವವು.


ತಾಮ್ರಕ್ಕೆ ಬದಲಾಗಿ ಚಿನ್ನವನ್ನು, ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನ್ನು, ಮರವಿದ್ದಲ್ಲಿ ತಾಮ್ರವನ್ನು, ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನ್ನು ಒದಗಿಸುವೆನು; ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ, ಧರ್ಮವನ್ನು ನಿನಗೆ ಅಧಿಕಾರಿಯನ್ನಾಗಿ ನೇಮಿಸುವೆನು.


ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು.


ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.


ಆತನು ಯೆರೂಸಲೇಮನ್ನು ಭದ್ರಪಡಿಸಿ, ಲೋಕಪ್ರಸಿದ್ಧಿಗೆ ತರುವ ತನಕ ನಿಮಗೂ ವಿರಾಮ ಇಲ್ಲದಿರಲಿ, ಅತನಿಗೂ ವಿರಾಮ ಇಲ್ಲದಿರಲಿ.


ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಸರಿಪಡಿಸಿರಿ. ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಲ್ಲಿ ಧ್ವಜವನ್ನೆತ್ತಿರಿ!


ಆಲಯವನ್ನು ನಾಲ್ಕು ಕಡೆಗಳಲ್ಲಿಯೂ ಅಳೆದನು. ಪವಿತ್ರವಾದ ಮತ್ತು ಅಪವಿತ್ರವಾದ ಪ್ರದೇಶಗಳನ್ನು ವಿಂಗಡಿಸುವುದಕ್ಕೆ ಐನೂರು ಕೋಲು ಉದ್ದವಾದ ಮತ್ತು ಐನೂರು ಕೋಲು ಅಗಲವಾದ ಗೋಡೆ ಇತ್ತು.


ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ರಕ್ಷಿಸುವೆನು, ಚದರಿ ಹೋದವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರ ಕೀರ್ತನೆಗಳನ್ನು ಉಂಟುಮಾಡುವೆನು.


ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ, ಅದರೊಳಗೆ ವೈಭವವೂ ಆಗಿರುವೆನು’” ಎಂಬುದು ಯೆಹೋವನ ನುಡಿ.


“ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು” ಎಂದು ಹೇಳುತ್ತಾನೆ. ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬುದು ನಿಮಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು