Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ನಿನ್ನ ಜನರೆಲ್ಲಾ ನೀತಿಯಲ್ಲಿ ಜೀವಿಸುವರು. ಅವರು ಭೂಮಿಗೆ ಶಾಶ್ವತವಾದ ಬಾಧ್ಯಸ್ತರಾಗುವರು. ಆ ಜನರನ್ನು ನಾನೇ ನಿರ್ಮಿಸಿದೆನು. ನಾನು ನನ್ನ ಸ್ವಂತ ಕೈಗಳಿಂದ ನಿರ್ಮಿಸಿದ ಆಶ್ಚರ್ಯಕರವಾದ ಸಸಿಗಳಂತೆ ಅವರಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿನ್ನ ಜನರೆಲ್ಲರೂ ನೀತಿವಂತರಾಗಿರುವರು. ದೇಶವನ್ನು ಸದಾಕಾಲಕ್ಕೆ ಸ್ವಾಧೀನಮಾಡಿಕೊಳ್ಳುವರು. ನಾನು ಮಹಿಮೆ ಹೊಂದುವುದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ, ನನ್ನ ಕೈ ಸೃಷ್ಟಿಯೂ ಆಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:21
51 ತಿಳಿವುಗಳ ಹೋಲಿಕೆ  

ಅದಕ್ಕೆ ಆತನು “ಪರಲೋಕದ ನನ್ನ ತಂದೆಯು ನೆಡದೆ ಇರುವ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು.


ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು.


ಆದರೆ ದೀನರು ದೇಶವನ್ನು ಅನುಭವಿಸುವರು; ಅವರು ಮಹಾಸೌಖ್ಯದಿಂದ ಆನಂದಿಸುವರು.


ಯಾಕೋಬ ವಂಶದವರು ತಮ್ಮ ಮಧ್ಯದಲ್ಲಿ ನಾನು ನಡೆಸುವ ಕೆಲಸವನ್ನು ನೋಡಿ, ನನ್ನ ನಾಮವೇ ಆರಾಧನೆಗೆ ಅರ್ಹವೆಂದು ಪ್ರತಿಷ್ಠಿಸುವರು; ಹೌದು, ಯಾಕೋಬ್ಯರ ಸದಮಲಸ್ವಾಮಿಯನ್ನು ಪ್ರತಿಷ್ಠೆಪಡಿಸಿ ಇಸ್ರಾಯೇಲರ ದೇವರಿಗೆ ನಡುಗುವರು.


ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.


ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.


ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.


ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.


ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.


ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು.


ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.


ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವತ್ತಿನಲ್ಲಿ ಹಿಗ್ಗುವರು; ಹೀಗೆ ತಮ್ಮ ದೇಶದಲ್ಲಿ ಎರಡರಷ್ಟನ್ನು ಅನುಭವಿಸುವರು; ಇವರಿಗೆ ಶಾಶ್ವತ ಸಂತೋಷವಾಗುವುದು.


ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ವಿಗ್ರಹಗಳು ನಿನ್ನನ್ನುದ್ಧರಿಸಲಿ. ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವುದು, ಉಸಿರು ಅದನ್ನು ಒಯ್ಯುವುದು. ನನ್ನನ್ನು ಆಶ್ರಯಿಸುವವನೋ ದೇಶವನ್ನು ಅನುಭವಿಸಿ ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.


ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.


ನಿಮ್ಮ ಪಿತೃವಾದ ಅಬ್ರಹಾಮನನ್ನೂ, ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು, ಆಶೀರ್ವದಿಸಿ ಅವನ ಸಂತಾನವನ್ನು ಹೆಚ್ಚಿಸಿದೆನು.


ಆದರೂ ಇಸ್ರಾಯೇಲರ ಸದಮಲಸ್ವಾಮಿಯೂ, ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ, ‘ಭವಿಷ್ಯತ್ತಿನ ವಿಷಯವಾಗಿ ನನ್ನನ್ನು ವಿಚಾರಿಸಿರಿ. ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.


ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ಸೃಷ್ಟಿಸಿಕೊಂಡಿದ್ದೇನೆ.


ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.


ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು.


ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, ಯಾಜಕರನ್ನಾಗಿಯೂ ಮಾಡಿರುವೆ. ಅವರು ಭೂಮಿಯನ್ನು ಆಳುವರು.”


ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.


ಆ ದಿನದಲ್ಲಿ ಆತನು ಬರುವಾಗ ತನ್ನ ಪರಿಶುದ್ಧ ಜನರಿಂದ ಮಹಿಮೆ ಹೊಂದಿದವನಾಗಿಯೂ ಮತ್ತು ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವನು.


ಮುಂದಿನ ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ, ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ.


ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು.


ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.


ಆತನು ನನಗೆ, “ನೀನು ನನ್ನ ಸೇವಕನೂ, ನಾನು ಪ್ರಭಾವಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ” ಎಂದು ಹೇಳಿದನು.


ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.


“ನನ್ನ ಪ್ರಜೆಯಾದ ಐಗುಪ್ತಕ್ಕೂ, ನನ್ನ ಕೈಯಿಂದ ಸೃಷ್ಟಿಸಲ್ಪಟ್ಟ ಅಶ್ಶೂರಕ್ಕೂ, ನನ್ನ ಸ್ವತ್ತಾದ ಇಸ್ರಾಯೇಲಿಗೂ ಶುಭವಾಗಲಿ” ಎಂದು ಸೇನಾಧೀಶ್ವರನಾದ ಯೆಹೋವನು ಅವುಗಳನ್ನು ಆಶೀರ್ವದಿಸುವನು.


ಭೂಮಂಡಲದ ಕಟ್ಟಕಡೆಯಿಂದ, “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿ ಬಂದಿವೆ, ಆದರೆ “ನಾನಾದರೋ ಕ್ಷಯಿಸಿ ಹೋಗಿದ್ದೇನೆ, ನನ್ನ ಗತಿಯನ್ನು ಏನು ಹೇಳಲಿ! ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ” ಎಂದುಕೊಂಡೆನು.


ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಗೊಳ್ಳುವ ಜನಾಂಗವು ಒಳಗೆ ಪ್ರವೇಶಿಸಲಿ!


ಆಕಾಶಮಂಡಲವೇ, ಮೇಲಿನಿಂದ ಧರ್ಮರಸವನ್ನು ಮಳೆಯಂತೆ ಸುರಿಸು. ಭೂಮಿಯು ಒಡೆದು ರಕ್ಷಣೆಯನ್ನು ಮೊಳೆಯಿಸಿ, ಅದರೊಡನೆ ನೀತಿಫಲವನ್ನು ಬೆಳೆಯಿಸಲಿ. ಯೆಹೋವನೆಂಬ ನಾನೇ ಇದಕ್ಕೆಲ್ಲಾ ಕರ್ತನು.


ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು. ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು.


ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು” ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.


ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು.


ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.


ಯಾಕೋಬಿನಿಂದ ಸಂತಾನವನ್ನು ಹುಟ್ಟಿಸುವೆನು, ಯೆಹೂದ ವಂಶದಿಂದ ನನ್ನ ಪರ್ವತಗಳ ಸ್ವತ್ತಿನ ಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವತ್ತನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.


ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ದೇಶವನ್ನು ಇನ್ನು ಹಾಳುಮಾಡುವುದಿಲ್ಲ, ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗುವುದಿಲ್ಲ.


ನಾನು ಹಿಂದಿರುಗಲು ಆಹಾ, ನದಿಯ ಎರಡು ದಡಗಳಲ್ಲಿಯೂ ಅನೇಕ ವೃಕ್ಷಗಳು ಕಾಣಿಸಿದವು.


ನಾನು ಅವರನ್ನು ಸ್ವದೇಶದಲ್ಲಿ ನೆಲೆಗೊಳಿಸುವೆನು, ಅವರಿಗೆ ನಾನು ದಯಪಾಲಿಸಿದ ಸೀಮೆಯೊಳಗಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕುವುದಿಲ್ಲ” ಇದು ನಿನ್ನ ದೇವರಾದ ಯೆಹೋವನ ನುಡಿ.


ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು, ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವು ಇಲ್ಲದೆ ಅಲ್ಲಿ ವಾಸಿಸುವರು.


ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು.


ನೀತಿವಂತರೋ ದೇಶವನ್ನು ಅನುಭವಿಸುವವರಾಗಿ, ಅದರಲ್ಲಿ ಶಾಶ್ವತವಾಗಿ ವಾಸಿಸುವರು.


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.


ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರುಗಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವುದಿಲ್ಲ.


ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.”


“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅವರನ್ನು ಜನಾಂಗಗಳೊಳಗಿಂದ ಕೂಡಿಸುವೆನು, ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಾಯೇಲ್ ದೇಶವನ್ನು ಅವರಿಗೆ ದಯಪಾಲಿಸುವೆನು.’


ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪೂರ್ವಿಕರು ವಾಸಿಸಿದ ದೇಶದಲ್ಲಿ ಅವರೂ ಮತ್ತು ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು. ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಅರಸನಾಗಿರುವನು.


ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು, ಆ ಪರ್ವತವು ಪರಿಶುದ್ಧವಾಗಿರುವುದು; ಯಾಕೋಬನ ವಂಶದವರು ತಮ್ಮ ಸ್ವತ್ತುಗಳನ್ನು ಅನುಭವಿಸುವರು.


ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; ಕುರಿ ಮಂದೆಯಂತೆ ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು