Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 61:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನ ಸೇವಕನು ಹೇಳುವುದೇನೆಂದರೆ, “ಒಡೆಯನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ. ಬಡವರಿಗೆ ಸುವಾರ್ತೆಯನ್ನು ತಿಳಿಸಲೂ ದುಃಖಿಸುವವರನ್ನು ಸಂತೈಸಲೂ ಆತನು ನನ್ನನ್ನು ಆರಿಸಿರುತ್ತಾನೆ. ಸೆರೆಹಿಡಿಯಲ್ಪಟ್ಟಿರುವವರನ್ನು ಸ್ವತಂತ್ರರಾದರೆಂದು ಹೇಳಲೂ ಕೈದಿಗಳನ್ನು ಬಿಡುಗಡೆ ಮಾಡಲ್ಪಟ್ಟವರೆಂದು ಹೇಳಲೂ ದೇವರು ನನ್ನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ. ಏಕೆಂದರೆ ಯೆಹೋವ ದೇವರು ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಮುರಿದ ಹೃದಯಗಳನ್ನು ಕಟ್ಟುವುದಕ್ಕೂ, ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 61:1
55 ತಿಳಿವುಗಳ ಹೋಲಿಕೆ  

ಹೀಗಿರಲು ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದೆ.


ನೀನು ಕುರುಡರಿಗೆ ಕಣ್ಣುಕೊಟ್ಟು, ಬಂದಿಗಳನ್ನು ಸೆರೆಯಿಂದಲೂ, ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ತರುವಿ.


ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.


ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ.


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ನೀನು ಬಂದಿಸಲ್ಪಟ್ಟವರಿಗೆ ‘ಹೊರಟುಹೋಗಿರಿ’ ಎಂದು, ಕತ್ತಲಲ್ಲಿರುವವರಿಗೆ, ‘ಬೆಳಕಿಗೆ ಹೊರಡಿರಿ’ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವತ್ತುಗಳನ್ನು ಅವರಿಗೆ ಹಂಚಿ ದೇಶವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವುದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಹುಲ್ಲುಗಾವಲಾಗುವವು.


ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.


ನನ್ನ ಬಳಿಗೆ ಬಂದು ಇದನ್ನು ಕೇಳಿರಿ, ಆದಿಯಿಂದಲೂ ನಾನು ಗುಟ್ಟಾಗಿ ಮಾತನಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ನಾನು ಅಲ್ಲಿ ಇದ್ದೇನೆ. ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ.


ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡ ನೀರಿನಿಂದ ಮೇಲಕ್ಕೆ ಬಂದ ಕೂಡಲೇ ಇಗೋ, ಆತನಿಗಾಗಿ ಪರಲೋಕವು ತೆರೆಯಿತು; ಮತ್ತು ದೇವರ ಆತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿದು ಬರುವುದನ್ನು ಕಂಡನು.


ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.


ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.


ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ.


ಸೆರೆಯವರ ಗೋಳಾಟವನ್ನು ಪರಿಗಣಿಸಿ, ಮರಣಪಾತ್ರರನ್ನು ಬಿಡಿಸಿ,


ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ.


“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.


ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; “ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ, ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ” ಎಂದು ಯೆಹೋವನು ಹೇಳುತ್ತಾನೆ.


ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ. ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಅಧಿಕವಾಗಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ.


ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸುವ ಮೂಲಕ ನಮ್ಮನ್ನು ಸಂತೈಸಿದನು.


ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ದೀನರು ಇದನ್ನು ನೋಡಿ ಹರ್ಷಿಸುವರು. ದೇವದರ್ಶನವನ್ನು ಅಪೇಕ್ಷಿಸುವವರೇ, ನಿಮ್ಮ ಆತ್ಮವು ಉಜ್ಜೀವಿಸಲಿ.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು.


ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡು ಅವನಿಗೆ “ನಾವು ಮೆಸ್ಸೀಯನನ್ನು ಕಂಡುಕೊಂಡೆವು” (ಮೆಸ್ಸೀಯನು ಎಂದರೆ ಕ್ರಿಸ್ತನು) ಎಂದು ಹೇಳಿ,


ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.


ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,


ಆ ಮೇಲೆ ಯೆಹೋವನು ಯೆರೆಮೀಯನಿಗೆ ಒಂದು ಮಾತನ್ನು ದಯಪಾಲಿಸಿದನು. ಇಷ್ಟರೊಳಗೆ ಅರಸನಾದ ಚಿದ್ಕೀಯನು ಯೆರೂಸಲೇಮಿನವರೆಲ್ಲರೊಂದಿಗೆ ಸೇರಿ,


ಯೆರೂಸಲೇಮಿನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ! ಯೆಹೋವನು ಯೆರೂಸಲೇಮನ್ನು ವಿಮೋಚಿಸಿ ತನ್ನ ಜನರನ್ನು ಸಂತೈಸಿದ್ದಾನೆ.


ಆ ಕರ್ತನು ದೇವರಾತ್ಮನೇ. ಕರ್ತನ ಆತ್ಮನು ಇರುವಲ್ಲಿ ಸ್ವಾತಂತ್ರ್ಯವಿರುತ್ತದೆ.


ದೀನರು ಯೆಹೋವನಲ್ಲಿ ಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲರ ಸದಮಲಸ್ವಾಮಿಯಲ್ಲಿ ಉಲ್ಲಾಸಿಸುವರು.


ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ, ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.


ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.


ಮೋಸಗಾರನ ಆಯುಧಗಳು ಕೆಟ್ಟವುಗಳೇ, ದೀನದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವರನ್ನು ಸುಳ್ಳುಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.


ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು!


ಪರ್ವತಗಳ ಮೇಲೆ ತ್ವರೆಪಡುತ್ತಾ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ! ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು, ರಕ್ಷಣೆಯನ್ನು ಪ್ರಕಟಿಸುತ್ತಾ, “ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ” ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ.


ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡೆಸುತ್ತಾ ಅವರಿಗೆ, ಅವರಲ್ಲಿನ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.”


ನಾನಾದರೋ ಯೆಹೋವನ ಆತ್ಮ ಪ್ರೇರಣೆಯಿಂದ, ಬಲ ಪರಾಕ್ರಮ ಮತ್ತು ನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು, ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.


ಅವರು ನನಗೆ ಯಾಜಕಸೇವೆ ಮಾಡುವುದಕ್ಕಾಗಿ ಆ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ, ಅವನ ಮಕ್ಕಳಿಗೂ ತೊಡಿಸಿ, ಅವರನ್ನು ಅಭಿಷೇಕಿಸಿ, ಸೇವೆಗಾಗಿ ಪ್ರತಿಷ್ಠಿಸಿ ಶುದ್ಧೀಕರಿಸಿಬೇಕು.


ಅಭಿಷೇಕತೈಲವನ್ನು ಅವನ ಮೇಲೆ ಸುರಿದು ಅವನನ್ನು ಅಭಿಷೇಕಿಸಬೇಕು.


ಯೆಹೋವನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶದವರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳಾಗಿರುವವು. ಮೋಶೆ ಅವರನ್ನು ಯೆಹೋವನ ಸನ್ನಿಧಿಯಲ್ಲಿ ಯಾಜಕೋದ್ಯೋಗಕ್ಕಾಗಿ ಪ್ರತಿಷ್ಠಿಸಿದ ದಿನದಲ್ಲೇ ಇದು ನೇಮಕವಾಯಿತು.


ದೇವರೇ, ನೀನು ನಿನ್ನ ಪ್ರಜೆಯ ಮುಂದೆ ಹೊರಟು, ಅರಣ್ಯಮಾರ್ಗವಾಗಿ ಪ್ರಯಾಣ ಮಾಡುತ್ತಾ ಬರುವಾಗ, ಸೆಲಾ


ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು