Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 61:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಚೀಯೋನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ, ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ, ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ. ಆಗ ಅವರಿಗೆ ನೀತಿವೃಕ್ಷಗಳೆಂದೂ, ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 61:3
39 ತಿಳಿವುಗಳ ಹೋಲಿಕೆ  

ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು, ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ. ಆದರೆ ಲೋಕವು ಸಂತೋಷಿಸುವುದು. ನಿಮಗೆ ದುಃಖವಾಗುವುದು ಆದರೆ ನಿಮ್ಮ ದುಃಖವು ಹೋಗಿ ಆನಂದ ಬರುವುದು.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.


ನಿನ್ನ ಬಟ್ಟೆಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಗೆ ಎಣ್ಣೆಯ ಕೊರತೆ ಇಲ್ಲದಿರಲಿ.


ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.


ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.


“ಇವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿರಿ” ಎಂದು ನಾನು ಅಪ್ಪಣೆಕೊಡಲು ಅವರು ಅವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿ ಅವನಿಗೆ ವಸ್ತ್ರಗಳನ್ನು ತೊಡಿಸಿದರು, ಆಗ ಯೆಹೋವನ ದೂತನು ಎದ್ದು ನಿಂತನು.


ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.


ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.


ಮೊರ್ದೆಕೈಯಾದರೋ ನೀಲಿ ಮತ್ತು ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿಕೊಂಡು, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣದ ನಾರಿನ ನಿಲುವಂಗಿಯನ್ನು ಹೊದ್ದುಕೊಂಡು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು.


ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.


ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ,


ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿ ಉಂಟಾಯಿತು. ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂದಿತು. ಆದುದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡು ಬಡವರಿಗೆ ದಾನಧರ್ಮ ಮಾಡಬೇಕು.


ಆ ದಿನದಲ್ಲಿ ಆತನು ಬರುವಾಗ ತನ್ನ ಪರಿಶುದ್ಧ ಜನರಿಂದ ಮಹಿಮೆ ಹೊಂದಿದವನಾಗಿಯೂ ಮತ್ತು ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವನು.


ನೀವು ಬಹಳ ಫಲಕೊಡುವುದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವುದು ಮತ್ತು ನೀವು ನನ್ನ ಶಿಷ್ಯರಾಗುವಿರಿ.


ಹೃದಯಾನಂದಕರವಾದ ದ್ರಾಕ್ಷಾರಸವನ್ನು, ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.


ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.


ಅದಕ್ಕೆ ಆತನು “ಪರಲೋಕದ ನನ್ನ ತಂದೆಯು ನೆಡದೆ ಇರುವ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು.


ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ. ದೇವರ ಮಂದಿರವೂ ಆಗಿದ್ದೀರಿ.


ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ. ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಅಧಿಕವಾಗಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ.


ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.


ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಗೊಳ್ಳುವ ಜನಾಂಗವು ಒಳಗೆ ಪ್ರವೇಶಿಸಲಿ!


ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.


ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು, ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.”


ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.


ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು; ಯುವಕರು ಮತ್ತು ವೃದ್ಧರು ಜೊತೆಯಾಗಿ ಹರ್ಷಿಸುವರು. ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನು ಉಂಟುಮಾಡಿ, ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು.


ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ದೇಶವನ್ನು ಇನ್ನು ಹಾಳುಮಾಡುವುದಿಲ್ಲ, ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗುವುದಿಲ್ಲ.


ನಾನು ಹಿಂದಿರುಗಲು ಆಹಾ, ನದಿಯ ಎರಡು ದಡಗಳಲ್ಲಿಯೂ ಅನೇಕ ವೃಕ್ಷಗಳು ಕಾಣಿಸಿದವು.


ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು; ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು