Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 61:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವುದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವುದು. ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪ್ರಖ್ಯಾತವಾಗುವುದು ಇವರ ಸಂತಾನ ವಿಶ್ವದಲ್ಲೆಲ್ಲ ಹೆಸರುವಾಸಿಯಾಗುವುದು ಇವರ ಸಂತತಿ ಅನ್ಯರಾಷ್ಟ್ರಗಳಲ್ಲೆಲ್ಲ. ಲಭಿಸುವುದು ಸರ್ವೇಶ್ವರನ ಆಶೀರ್ವಾದ ಈ ಜನತೆಗೆ ಖಚಿತವಾಗುವುದಿದು ನೋಡುವವರೆಲ್ಲರಿಗೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವದು; ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಎಲ್ಲಾ ಜನಾಂಗಗಳವರು ನನ್ನ ಜನರನ್ನೂ ನನ್ನ ದೇಶದ ಮಕ್ಕಳನ್ನೂ ತಿಳಿದುಕೊಳ್ಳುವರು. ಅವರನ್ನು ಜನರು ನೋಡಿದಾಗ ಯೆಹೋವನು ಅವರನ್ನು ಆಶೀರ್ವದಿಸುತ್ತಿದ್ದಾನೆ ಎಂದು ತಿಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಅವರ ಸಂತಾನವು ಇತರ ಜನಾಂಗಗಳಲ್ಲಿ ಪ್ರಸಿದ್ಧವಾಗುವುದು. ಅವರಿಂದಾದ ಉತ್ಪತ್ತಿ ಜನರ ಮಧ್ಯದಲ್ಲಿ ತಿಳಿಸಲಾಗುವುದು. ಅವರನ್ನು ನೋಡುವವರೆಲ್ಲರೂ, ಅವರೇ ಯೆಹೋವ ದೇವರು ಆಶೀರ್ವದಿಸಿದ ಸಂತಾನ ಎಂದು ಒಪ್ಪಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 61:9
15 ತಿಳಿವುಗಳ ಹೋಲಿಕೆ  

ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.


ಯೆಹೋವನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಅಭಿವೃದ್ಧಿಪಡಿಸಲಿ;


ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ” ಎಂದು ಹೇಳಿದನು.


ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು.


ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ, ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿ ಆಶೀರ್ವದಿಸುವೆನು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!”


ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.


ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿರುವೆ” ಎಂದು ಹೇಳಲು ಲಾಬಾನನು ಅವನಿಗೆ, “ನನ್ನ ಮೇಲೆ ದಯೆ ಇಟ್ಟು ನನ್ನ ಬಳಿಯಲ್ಲೇ ಇರು. ಯೆಹೋವನು ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದುಕೊಂಡಿದ್ದೇನೆ.


ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ; ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು, ನಿನ್ನವರನ್ನು ಪಶ್ಚಿಮದಿಂದ ಕೂಡಿಸುವೆನು.


ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;


“ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.


ಯೆಹೋವನು ಇಂತೆನ್ನುತ್ತಾನೆ, “ಯಾಕೋಬಿನ ನಿಮಿತ್ತ ಹರ್ಷಧ್ವನಿಗೈಯಿರಿ, ಜನಾಂಗಗಳ ಶಿರೋಮಣಿಯ ವಿಷಯದಲ್ಲಿ ಕೇಕೆಹಾಕಿರಿ. ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದ ನಿನ್ನ ಜನವನ್ನು ರಕ್ಷಿಸು ಎಂದು ಘೋಷಿಸಿ ಸ್ತುತಿಸಿರಿ.


“ಆಗ ಸಕಲ ಜನಾಂಗಗಳವರು ನಿಮ್ಮನ್ನು ಧನ್ಯರೆಂದು ಕೊಂಡಾಡುವರು; ನಿಮ್ಮ ದೇಶವು ಆನಂದವಾಗಿರುವುದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಅದಕ್ಕೆ ದೇವರು ಬಿಳಾಮನಿಗೆ, “ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು