Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 62:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲೂ, ಇರುಳೂ ಮೌನವಾಗಿರರು. ಯೆಹೋವನನ್ನು ಸ್ಮರಿಸುವವರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಜೆರುಸಲೇಮ್, ಕಾವಲಿಟ್ಟಿರುವೆ ನಿನ್ನ ಗೋಡೆ ಸುತ್ತಲು ಮೌನವಿರಕೂಡದು ಆ ಕಾವಲಿಗರು ಹಗಲಿರುಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇವಿುಸಿದ್ದೇನೆ; ಅವರು ಹಗಲೂ ಇರುಳೂ ಮೌನವಾಗಿರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಜೆರುಸಲೇಮೇ, ನಿನ್ನ ಗೋಡೆಯ ಮೇಲೆ ನಾನು ಕಾವಲುಗಾರರನ್ನು ಇಟ್ಟಿರುತ್ತೇನೆ. ಆ ಕಾವಲುಗಾರರು ಮೌನವಾಗಿರುವದಿಲ್ಲ. ಅವರು ಹಗಲಿರುಳು ಪ್ರಾರ್ಥಿಸುತ್ತಾ ಇರುವರು. ಕಾವಲುಗಾರರೇ, ನೀವು ಯೆಹೋವನಿಗೆ ಪ್ರಾರ್ಥಿಸುತ್ತಾ ಇರಬೇಕು. ಆತನ ವಾಗ್ದಾನಗಳನ್ನು ನೀವು ಆತನ ನೆನಪಿಗೆ ತರಬೇಕು. ಪ್ರಾರ್ಥಿಸುವುದನ್ನು ಎಂದಿಗೂ ನಿಲ್ಲಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ. ಅವರು ಹಗಲಿರುಳು ಮೌನವಾಗಿರುವುದೇ ಇಲ್ಲ. ಯೆಹೋವ ದೇವರಿಗೆ ಜ್ಞಾಪಕಪಡಿಸುವವರೇ, ನೀವೂ ಸುಮ್ಮನಿರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 62:6
33 ತಿಳಿವುಗಳ ಹೋಲಿಕೆ  

ಇಗೋ, ನಿನ್ನ ಕಾವಲುಗಾರರ ಕೂಗು! ಸ್ವರವೆತ್ತಿ ಒಟ್ಟಿಗೆ ಹರ್ಷಧ್ವನಿಗೈಯುತ್ತಾರೆ. ಯೆಹೋವನು ಚೀಯೋನಿಗೆ ತಿರುಗಿ ಬರುವುದನ್ನು ಪ್ರತ್ಯಕ್ಷವಾಗಿ ನೋಡುವರು.


ಎಡೆಬಿಡದೆ ಪ್ರಾರ್ಥನೆಮಾಡಿರಿ,


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.


‘ತುತ್ತೂರಿಯ ಶಬ್ದವನ್ನು ಕೇಳಿರಿ’ ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇಮಿಸಲು, ‘ನಾವು ಕೇಳುವುದಿಲ್ಲ’ ಎಂದು ಹೇಳಿದರು.


ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳಿವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಕ ನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.


ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಮತ್ತಷ್ಟು ಬೇಡಿಕೊಂಡನು.


ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇಮಿನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ, ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಮೌನವಾಗಿರದೆ ಯೆರೂಸಲೇಮಿನ ಕ್ಷೇಮವನ್ನು ಚಿಂತಿಸುತ್ತಿರುವೆನು.


ನೀನು ಹಿಂದಿನ ಕಾಲದಲ್ಲಿ ಸ್ವಕುಲವಾಗಿರಬೇಕೆಂದು ಬಿಡುಗಡೆ ಮಾಡಿ ಸಂಪಾದಿಸಿಕೊಂಡ ನಿನ್ನ ಸಭಾಮಂಡಲಿಯನ್ನು ಜ್ಞಾಪಿಸಿಕೋ; ನಿನ್ನ ವಾಸಸ್ಥಾನವಾಗಿದ್ದ ಚೀಯೋನ್ ಪರ್ವತವನ್ನು ಮರೆಯಬೇಡ.


ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.


ಆ ಪುರುಷನು, “ನನ್ನನ್ನು ಬಿಡು, ಬೆಳಗಾಗುತ್ತಿದೆ” ಎನ್ನಲು, ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡುವುದಿಲ್ಲ” ಎಂದನು.


‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?’” ಎಂದನು.


ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿದ್ದನ್ನು, ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ.


ಅವರು, “ಸರ್ವಶಕ್ತನಾದ ಕರ್ತನೇ, ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ ಭೂಲೋಕ ನಿವಾಸಿಗಳಿಗೆ ನೀನು ಇನ್ನೆಷ್ಟು ಸಮಯ ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು.


ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.


ಕೊರ್ನೆಲ್ಯನೇ ‘ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.


ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.


ನನಗೆ ನನ್ನ ಪಾಪಗಳನ್ನು ಜ್ಞಾಪಕಪಡಿಸು, ನಾವಿಬ್ಬರೂ ನಿನ್ನ ಅಪಾರಾಧ ಕುರಿತು ವಾದಿಸುವ, ನಿನ್ನ ಸದ್ಧರ್ಮವು ಗೊತ್ತಾಗುವಂತೆ ನಿನ್ನ ನ್ಯಾಯವನ್ನು ತೋರ್ಪಡಿಸು.


ಊರಲ್ಲಿ ಸುತ್ತುತ್ತಿರುವ ಕಾವಲುಗಾರರು ನನ್ನನ್ನು ಕಂಡುಹಿಡಿದು, ಹೊಡೆದು ಗಾಯಪಡಿಸಿದರು, ಪೌಳಿಯ ಕಾವಲುಗಾರರು ಮೇಲೊದಿಕೆಯನ್ನು ನನ್ನಿಂದ ಕಿತ್ತುಕೊಂಡರು.


ಊರಿನಲ್ಲಿ ತಿರುಗುವ ಕಾವಲುಗಾರರ ಕೈಗೆ ಸಿಕ್ಕಿದೆನು, “ನನ್ನ ಪ್ರಾಣಪ್ರಿಯನನ್ನು ಕಂಡಿರಾ?” ಎಂದು ಅವರನ್ನು ವಿಚಾರಿಸಿದೆನು.


ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ; ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.”


ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿಕೊಂಡಿದ್ದೇನೆ. ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.


ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ. ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು.


ಯೆಹೋವನೇ, ನಮಗಾದ ದುರ್ಗತಿಯನ್ನು ನೆನಪಿಗೆ ತಂದುಕೋ; ನಾವು ಗುರಿಯಾಗಿರುವ ಅವಮಾನವನ್ನು ದೃಷ್ಟಿಸಿ ನೋಡು.


ನೀನು ನಮ್ಮನ್ನು ಸಂಪೂರ್ಣವಾಗಿ ಮರೆತಿರುವುದೇಕೆ? ಏಕೆ ನಮ್ಮನ್ನು ಇಷ್ಟುಕಾಲ ಕೈಬಿಟ್ಟಿದ್ದೀ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು