Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಚ್ರದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಎದೋಮಿನ ಬೊಚ್ರನಗರದಿಂದ ಬರುವ ಈತನು ಯಾರು? ರಕ್ತಗೆಂಪಾದ ಉಡುಪನ್ನುಟ್ಟು ಥಳಥಳಿಸುವ ವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯದಿಂದ ಮೆರೆಯುತ್ತಾ ನಡೆದುಬರುವ ಈತನು ಯಾರು? “ಆತನು ನಾನೇ, ಸತ್ಯವನು ಘೋಷಿಸುವವನು, ಆತನು ನಾನೇ, ಉದ್ಧರಿಸಲು ಸಮರ್ಥನು".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಹಾ, ರಕ್ತವರ್ಣದ ಉಡುಪನ್ನುಟ್ಟು ಘನವಸ್ತ್ರಗಳನ್ನು ಧರಿಸಿಕೊಂಡು ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ ಎದೋವಿುನ ಬೊಚ್ರದಿಂದ ಬರುವ ಈತನು ಯಾರು? ಸತ್ಯಾನುಸಾರವಾಗಿ ಮಾತಾಡುವ, ರಕ್ಷಿಸಲು ಸಮರ್ಥನಾದ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಎದೋಮಿನಿಂದ ಬರುತ್ತಿರುವ ಇವನು ಯಾರು? ಅವನು ಬೊಜ್ರದಿಂದ ಬರುತ್ತಿದ್ದಾನೆ. ಆತನ ಬಟ್ಟೆಯು ಕಡುಕೆಂಪು ಬಣ್ಣದಿಂದ ತುಂಬಿದೆ. ತನ್ನ ಬಟ್ಟೆಯಲ್ಲಿ ಆತನು ಮಹಿಮಾಸ್ವರೂಪನಾಗಿ ಕಾಣುತ್ತಿದ್ದಾನೆ. ಆತನು ತನ್ನ ಬಲಸಾಮರ್ಥ್ಯಗಳಿಂದಾಗಿ ನೇರವಾಗಿ ನಡೆಯುತ್ತಿದ್ದಾನೆ. ಆತನು, “ನಾನು ಸತ್ಯವನ್ನೇ ಹೇಳುತ್ತೇನೆ, ನಿನ್ನನ್ನು ರಕ್ಷಿಸಲು ನನಗೆ ಸಾಮರ್ಥ್ಯ ಉಂಟು” ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರವನ್ನು ತೊಟ್ಟುಕೊಂಡವನಾಗಿ, ತನ್ನ ಮಹಾ ಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? “ನೀತಿಯನ್ನು ಘೋಷಿಸುವವನೂ, ರಕ್ಷಿಸಲು ಬಲಿಷ್ಠನೂ ನಾನೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:1
39 ತಿಳಿವುಗಳ ಹೋಲಿಕೆ  

ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿಕೊಂಡಿದ್ದನು. ಆತನಿಗೆ ದೇವರ ವಾಕ್ಯವೆಂದು ಹೆಸರು.


ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ.


ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?


ಯೇಸು ಯೆರೂಸಲೇಮನ್ನು ಪ್ರವೇಶಿಸಲು ಪಟ್ಟಣದಲ್ಲೆಲ್ಲಾ ಗದ್ದಲವಾಗಿ, “ಈತನು ಯಾರು?” ಅಂದರು.


ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಇವಳು ಯಾರು? ಎಬ್ಬಿಸಿದೆನಲ್ಲಾ ನಿನ್ನನ್ನು ಆ ಸೇಬಿನ ಮರದಡಿಯಲ್ಲಿ ಇಗೋ, ಅಲ್ಲಿ ನಿನ್ನ ತಾಯಿ ನಿನ್ನನ್ನು ಗರ್ಭಧರಿಸಿದ್ದು, ಅಲ್ಲೇ ನಿನ್ನನ್ನು ಪ್ರಸವವೇದನೆಯಿಂದ ಹೆತ್ತಳು.


ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.


ನಾನು ರಹಸ್ಯದಲ್ಲಿ ನುಡಿದವನಲ್ಲ, ಅಧೋಲೋಕದೊಳಗಿಂದ ಮಾತನಾಡಿದವನಲ್ಲ. ಶೂನ್ಯವನ್ನೋ ಎಂಬಂತೆ, ‘ನನ್ನನ್ನು ಹುಡುಕಿರಿ’ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ಸರಿಯಾದ ಮಾತುಗಳನ್ನೇ ಆಡುತ್ತೇನೆ.


ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ, ರಕ್ತದಲ್ಲಿ ಅದ್ದಿದ ಉಡುಪುಗಳೂ, ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.


ಅರುಣೋದಯದಂತೆ ಉದಯಿಸುವಂತಿರುವಳು, ಚಂದ್ರನಂತೆ ಸೌಮ್ಯ ಸುಂದರಿಯಿವಳು, ಸೂರ್ಯನಂತೆ ಶುಭ್ರಳು, ಧ್ವಜಗಳುಳ್ಳ ಸೈನ್ಯದ ಹಾಗೆ ಭಯಂಕರಳು ಆಗಿರುವ ಇವಳಾರು?


ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು?


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ಸತ್ಯದ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು. ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು.


ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.


ದೇವರಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.


ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.


ಆದರೆ ಅವರು ಪಶ್ಚಿಮದಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆಮಾಡುವರು. ಎದೋಮಿನ ಮತ್ತು ಮೋವಾಬಿನ ಮೇಲೆ ಕೈಮಾಡುವರು. ಅಮ್ಮೋನಿಯರು ಅವರಿಗೆ ಅಧೀನರಾಗುವರು.


ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ. ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.”


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಎದೋಮು ಯೆಹೂದ ವಂಶಕ್ಕೆ ಪ್ರತಿಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ.”


ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳು ಪುರಾತನ ಕಾಲದಲ್ಲಿ ಬಹು ವರ್ಷ ಪ್ರವಾದಿಸುತ್ತಾ, ನಾನು ಒಬ್ಬನನ್ನು ಇಸ್ರಾಯೇಲರ ಮೇಲೆ ಬೀಳ ಮಾಡುವೆನು” ಎಂದು ಮುಂತಿಳಿಸಿದಂತೆ; ನಾನು ಅವರ ಮೂಲಕ ಮುಂತಿಳಿಸಿದವನು ನೀನೇ ಅಲ್ಲವೇ.


ಓಬದ್ಯನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋಮನ್ನು ಕುರಿತು ಹೀಗೆ ನುಡಿಯುತ್ತಾನೆ: ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ. ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ಹೊರಡಿರಿ! ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳೋಣ”


ತೇಮಾನ್ ಪಟ್ಟಣವೇ, ನಿನ್ನ ಶೂರರು ಧೈರ್ಯಗೆಟ್ಟು ಎಲ್ಲರೂ ಹತರಾಗಿ ಏಸಾವನ ಪರ್ವತದೊಳಗೆ ನಿರ್ಮೂಲರಾಗುವರು.


ಯೆಹೋವನು ಇಂತೆನ್ನುತ್ತಾನೆ, “ನಾನು ನಿಮ್ಮನ್ನು ಪ್ರೀತಿಸಿದ್ದೇನೆ.” ನೀವೋ “ಯಾವ ವಿಷಯದಲ್ಲಿ ನಮ್ಮನ್ನು ಪ್ರೀತಿಸಿದ್ದೀ?” ಅಂದುಕೊಳ್ಳುತ್ತೀರಲ್ಲಾ. ಏಸಾವನು ಯಾಕೋಬನ ಅಣ್ಣನಲ್ಲವೆ?


ಬೆಲಗನು ಸತ್ತ ನಂತರ ಬೊಚ್ರದವನಾದ ಜೆರಹನ ಮಗನಾಗಿದ್ದ ಯೋಬಾಬನು ಅಧಿಪತ್ಯಕ್ಕೆ ಬಂದನು.


ಅವನು ತನ್ನ ವಾಹನ ಮೃಗವನ್ನು ವಿಶಿಷ್ಟವಾದ ದ್ರಾಕ್ಷಾಲತೆಗೆ ಕಟ್ಟುವನು. ದ್ರಾಕ್ಷಿಯ ಬಳ್ಳಿಗೆ ತನ್ನ ಕತ್ತೆಮರಿಯನ್ನು ಬಿಗಿಯುವನು; ದ್ರಾಕ್ಷಾರಸದಲ್ಲಿ ತನ್ನ ಅಂಗಿಗಳನ್ನು ಒಗೆಯುವನು; ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು.


ಬೆಳನು ಸತ್ತ ನಂತರ ಬೊಚ್ರದವನಾದ ಜೆರಹನ ಮಗ ಯೋಬಾಬನು ಅಧಿಪತ್ಯಕ್ಕೆ ಬಂದನು.


ನೀನು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡು, ಬಲದಿಂದ ಪರ್ವತಗಳನ್ನು ಸ್ಥಿರವಾಗಿ ನಿಲ್ಲಿಸಿದವನು.


ಜನಾಂಗಗಳೇ, ಸಮೀಪಕ್ಕೆ ಬಂದು ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂಮಿಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವುದೆಲ್ಲವೂ ಆಲಿಸಲಿ.


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.


ಜಜ್ಜಿದ ದಂಟನ್ನು ಮುರಿದು ಹಾಕದೆ, ಕಳೆಗುಂದಿದ ದೀಪವನ್ನು ನಂದಿಸದೆ, ಸದ್ಧರ್ಮವನ್ನು ಪ್ರಚುರಪಡಿಸಿ ಸಿದ್ಧಿಗೆ ತರುವನು.


ಕೆರೀಯೋತ್, ಬೊಚ್ರ ಅಂತು ದೂರದ ಮತ್ತು ಹತ್ತಿರದ ಮೋವಾಬಿನ ಎಲ್ಲಾ ಪಟ್ಟಣಗಳಿಗೂ ದಂಡನೆಯಾಗದೆ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು