Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಏಕೆಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರ್ಷವು ಒದಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಏಕೆಂದರೆ, ನನ್ನ ಜನರನು ಉದ್ಧರಿಸುವ ವರುಷವು ಬಂದಿತ್ತು ಮುಯ್ಯಿತೀರಿಸುವ ದಿನವು ನನ್ನ ಮನದಲ್ಲಿ ನಿಶ್ಚಿತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಏಕಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರುಷವು ಒದಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಜನರನ್ನು ಶಿಕ್ಷಿಸಲು ನಾನೊಂದು ಸಮಯವನ್ನು ನಿಗದಿ ಮಾಡಿರುತ್ತೇನೆ. ಈಗ ನನ್ನ ಜನರನ್ನು ರಕ್ಷಿಸಿ ಕಾಪಾಡುವ ಸಮಯ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಮುಯ್ಯಿಗೆ ಮುಯ್ಯಿ ತೀರಿಸುವ ದಿವಸವು ನನ್ನ ಹೃದಯದಲ್ಲಿದೆ. ನಾನು ವಿಮೋಚಿಸಿದವರ ವರುಷವು ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:4
19 ತಿಳಿವುಗಳ ಹೋಲಿಕೆ  

ಏಕೆಂದರೆ ಅದು ಯೆಹೋವನು ಮುಯ್ಯಿತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರ್ಷವು ಒದಗಿದೆ.


ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು.


ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ,


ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.


ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.


ಅದೇ ಗಳಿಗೆಯಲ್ಲಿ ಮಹಾ ಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರನ್ನು ಘನಪಡಿಸಿದರು.


ಏಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ.


ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಕೇಳಿರಿ. ಇಗೋ, ಮೊಳಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೆನೆಂಬುದಕ್ಕೆ ಇವರೇ ಮುಂಗುರುತು.


ಯೆಹೋವನ ವಿಮುಕ್ತರು ಅಂದರೆ ಆತನು ಶತ್ರುಗಳಿಂದ ಬಿಡಿಸಿ,


ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.


ಚೀಯೋನ್ ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ತಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು.


ಸಿಂಹವು ಅಲ್ಲಿ ಇರದು. ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗುವುದಿಲ್ಲ. ಅದು ಅಲ್ಲಿ ಕಾಣುವುದೇ ಇಲ್ಲ. ಬಿಡುಗಡೆಯಾದವರೇ ಅಲ್ಲಿ ನಡೆಯುವರು.


ನಿನ್ನ ಬೆತ್ತಲೆತನವು ಬಯಲಿಗೆ ಬಂದು, ನೀನು ನಾಚಿಕೆಗೀಡಾಗುವಿ, ನಾನು ಯಾರನ್ನೂ ಕರುಣಿಸದೆ ಮುಯ್ಯಿತೀರಿಸುವೆನು.


ಯೆಹೋವನ ಈ ಮಾತನ್ನು ಕೇಳಿರಿ, “ಲಾಭಪಡೆಯದೆ ನಿಮ್ಮನ್ನು ಮಾರಿದೆನು, ಹಣತಕ್ಕೊಳ್ಳದೆ ನಿಮ್ಮನ್ನು ಬಿಡುಗಡೆಮಾಡುವೆನು.”


ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು ಸರ್ವಶಕ್ತನಿಂದ ನಾಶವಾಗುವಂತೆ ಬರುವುದು.


ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭೂಮಿಯನ್ನು ಹಾಳು ಮಾಡಿ, ಪಾಪಿಗಳನ್ನು ನಿರ್ಮೂಲಮಾಡುವುದಕ್ಕೆ ಆತನ ಕೋಪೋದ್ರೇಕದಿಂದಲೂ, ತೀಕ್ಷ್ಣವಾದ ರೋಷದಿಂದಲೂ ಕ್ರೂರವಾಗಿರುವುದು.


ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲುಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು. ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.


ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿ ತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತಿಕಾರವು ಎದೋಮಿನ ಅನುಭವಕ್ಕೆ ಬರುವುದು” ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು