Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜನರಿಗೆ ಅನೇಕ ತೊಂದರೆಗಳು ಪ್ರಾಪ್ತವಾಗಿದ್ದವು. ಆದರೆ ಯೆಹೋವನು ಅವರಿಗೆ ವಿರುದ್ಧನಾಗಿರಲಿಲ್ಲ. ಆತನು ಅವರನ್ನು ಪ್ರೀತಿಸಿ ಅವರಿಗಾಗಿ ಚಿಂತಿಸಿದನು; ತನ್ನ ವಿಶೇಷ ದೂತನನ್ನು ಕಳುಹಿಸಿ ಅವರನ್ನು ರಕ್ಷಿಸಿದನು. ಯೆಹೋವನು ಅವರನ್ನು ನಿತ್ಯಕಾಲಕ್ಕೂ ಸಲಹುವನು. ತನ್ನ ಜನರಿಗೆ ಯೆಹೋವನು ಸಲಹುವದನ್ನು ನಿಲ್ಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರಿಗೆ ಬಂದ ಎಲ್ಲಾ ಇಕ್ಕಟ್ಟಿನಲ್ಲಿ ಆತನಿಗೆ ಇಕ್ಕಟ್ಟಾಯಿತು. ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು. ತನ್ನ ಪ್ರೀತಿಯಲ್ಲಿಯೂ, ತನ್ನ ಕನಿಕರದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು. ಪೂರ್ವಕಾಲದ ದಿವಸಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:9
45 ತಿಳಿವುಗಳ ಹೋಲಿಕೆ  

ಅದಕ್ಕೆ ಯೆಹೋವನು, “ನನ್ನ ಪ್ರಸನ್ನತೆಯು ನಿನ್ನ ಜೊತೆಯಲ್ಲಿ ಬರುವುದು, ನಾನು ನಿಮಗೆ ವಿಶ್ರಾಂತಿಯನ್ನು ನೀಡುವೆನು” ಅಂದನು.


“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಆಗ ಪೇತ್ರನು ಎಚ್ಚರಗೊಂಡು; “ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ, ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ, ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿಯಿತು” ಎಂದು ಅಂದುಕೊಂಡನು.


ನೀವು ಈ ಸ್ಥಳಕ್ಕೆ ಸೇರುವ ತನಕ ನಿಮ್ಮ ಪ್ರಯಾಣದಲ್ಲೆಲ್ಲಾ ಒಬ್ಬ ತಂದೆ ತನ್ನ ಮಗನನ್ನು ಹೇಗೆ ಮುನ್ನಡೆಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೊತ್ತನಲ್ಲವೇ?” ಎಂದು ನಿಮಗೆ ಹೇಳಿದೆನು.


‘ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.


ಆಗ ಇಸ್ರಾಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಅವರ ಮುಂದಾಗಿ ಹೋಗುತ್ತಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.


ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.


ಆಗ ಆತನ ಮನಸ್ಸು ಇಸ್ರಾಯೇಲರ ಸಂಕಟದ ನಿಮಿತ್ತ ಬಹಳವಾಗಿ ನೊಂದಿತು.


ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.


ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು.


ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,


ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವುದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡಲು ಶಕ್ತನಾಗಿದ್ದಾನೆ.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ನಿಮ್ಮನ್ನು ತಾಕುವವನು ನನ್ನ ಕಣ್ಣು ಗುಡ್ಡೆಯನ್ನು ತಾಕುವವನಾಗಿದ್ದಾನೆ. ಆದಕಾರಣ ತನ್ನ ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ,


ಅವನೇ ಸೀನಾಯಿಬೆಟ್ಟದಲ್ಲಿ, ತನ್ನೊಡನೆ ಮಾತನಾಡಿದ ದೇವದೂತನಿಗೂ ನಮ್ಮ ಪೂರ್ವಿಕರಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಇದ್ದು ಜೀವಕರವಾದ ದೈವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು ಆಗಿದ್ದಾನೆ.


ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು. ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತರ, ಮೂಲಕವಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು” ಅಂದನು.


ಸಿಕ್ಕಿದ ಮೇಲೆ ಅವನು ಸಂತೋಷದಿಂದ ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು,


ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.


ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.


ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ.


ಅವನು ನೆಲಕ್ಕೆ ಬಿದ್ದನು. ಆಗ, “ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿದನು.


ಮೋಶೆಯು ಆತನಿಗೆ, “ನಿನ್ನ ಪ್ರಸನ್ನತೆಯು ನಮ್ಮ ಸಂಗಡ ಬಾರದೇ ಹೋದರೆ ನಮ್ಮನ್ನು ಇಲ್ಲಿಂದ ಹೋಗಗೊಡಿಸಬೇಡ.


ಆತನು ನಿಮ್ಮ ಪೂರ್ವಿಕರನ್ನು ಪ್ರೀತಿಸಿ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನು ಆರಿಸಿಕೊಂಡು,


ಇಂಥ ಸರ್ವಶಕ್ತನಾದ ದೇವರನ್ನು ನಾವು ಕಂಡುಹಿಡಿಯಲಾರೆವು; ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ, ಪರಿಪೂರ್ಣ ಧರ್ಮವನ್ನಾಗಲಿ ಕುಂದಿಸುವುದಿಲ್ಲ.


ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.


ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ, ಪ್ರಿಯನೂ ಆಗಿರುವುದರಿಂದ, ನಾನು ನಿನ್ನ ಬದಲಾಗಿ ಮನುಷ್ಯರನ್ನೂ, ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು.


ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ! ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. ‘ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ’” ಎಂದು ಹೇಳಿರಿ.


ಸಮುದ್ರವನ್ನೂ, ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತ ಜನರು ಹಾದುಹೋಗುವುದಕ್ಕೆ, ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದವನು ನೀನಲ್ಲವೋ?


ಯೆರೂಸಲೇಮಿನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ! ಯೆಹೋವನು ಯೆರೂಸಲೇಮನ್ನು ವಿಮೋಚಿಸಿ ತನ್ನ ಜನರನ್ನು ಸಂತೈಸಿದ್ದಾನೆ.


ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.


ಆಗ ಯೆಹೋವನು ತನ್ನ ದೇಶಕ್ಕೆ ಅಪಕೀರ್ತಿ ಬರಬಾರದೆಂದು ತನ್ನ ಜನರನ್ನು ಕರುಣಿಸಿ,


ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ನೀನು ನಿನ್ನ ಪ್ರಜೆಯನ್ನು ಬಿಡುಗಡೆ ಮಾಡಿರುವೆ. ನಿನ್ನ ಶಕ್ತಿಯಿಂದ ಅವರನ್ನು ನೀನು ವಾಸಮಾಡುವ ಪರಿಶುದ್ಧ ನಿವಾಸಕ್ಕೆ ನಡೆಸಿರುವೆ.


ದೇವರೇ, ಇಸ್ರಾಯೇಲರನ್ನು ಅವರ ಎಲ್ಲಾ ಬಾಧೆಗಳಿಂದ ವಿಮೋಚಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು