Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 64:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೂ ಸ್ವಾಮಿ ಸರ್ವೇಶ್ವರಾ, ನೀವು ನಮ್ಮ ತಂದೇ. ನಾವು ಜೇಡಿಮಣ್ಣು, ನೀವೇ ಕುಂಬಾರ; ನಾವೆಲ್ಲರು ನಿಮ್ಮ ಕೈಯ ಕೃತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದೀ; ನಾವು ಜೇಡಿಮಣ್ಣು, ನೀನು ಕುಂಬಾರ, ನಾವೆಲ್ಲರೂ ನಿನ್ನ ಕೈಕೆಲಸವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನೇ, ನೀನು ನಮ್ಮ ತಂದೆಯಾಗಿರುವೆ. ನಾವು ಜೇಡಿಮಣ್ಣಿನಂತಿದ್ದೇವೆ. ನೀನಾದರೋ ಕುಂಬಾರನಾಗಿರುವೆ. ನಿನ್ನ ಕೈಗಳು ನಮ್ಮನ್ನು ನಿರ್ಮಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಈಗ ಯೆಹೋವ ದೇವರೇ, ನಮ್ಮ ತಂದೆಯು ನೀನೇ, ನಾವು ಮಣ್ಣು. ನೀನು ನಮ್ಮ ಕುಂಬಾರನು. ನಾವೆಲ್ಲರೂ ನಿನ್ನ ಕೈಕೆಲಸಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 64:8
33 ತಿಳಿವುಗಳ ಹೋಲಿಕೆ  

ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.


ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು, ನಿನ್ನ ಆಜ್ಞೆಗಳನ್ನು ಕಲಿಯುವುದಕ್ಕೆ ನನಗೆ ಬುದ್ಧಿಯನ್ನು ಕೊಡು.


ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು, ನೀನು ಕೈಹಾಕಿದ ಕೆಲಸವನ್ನು ನೆರವೇರಿಸದೆ ಬಿಡಬೇಡ.


ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ.


ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.


ಅಯ್ಯೋ, ನೀವು ಎಂಥಾ ಮೂರ್ಖರು! ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿಮಣ್ಣಿನಂತೆ ಪರಿಗಣಿಸಲಾಗುವುದು. ಕೆಲಸ ಮಾಡಿದವನಿಗೆ ಮಾಡಲ್ಪಟ್ಟದ್ದು, “ಆತನು ಕೆಲಸ ಮಾಡಲಿಲ್ಲ” ಎಂದು ಹೇಳುವುದೋ? ಇಲ್ಲವೇ, ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸಲ್ಪಟ್ಟದ್ದು, “ಆತನಿಗೆ ವಿವೇಕವಿಲ್ಲ” ಎಂದು ಹೇಳುವುದೋ?


ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣಿನ ಮಡಿಕೆಗಳಲ್ಲಿ ಅವನೂ ಒಂದು ಮಡಿಕೆಯಲ್ಲವೆ! ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದು ಕೇಳುವುದುಂಟೇ? ಅಥವಾ ನಿನ್ನ ಕಾರ್ಯವು, ‘ಅವನಿಗೆ ಕೈಯಿಲ್ಲ’ ಅಂದೀತೇ?


ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ, “ಸರ್ವವನ್ನು ಉಂಟುಮಾಡಿದ ಕರ್ತನಾದ ಯೆಹೋವನು ನಾನೇ, ನಾನೊಬ್ಬನೇ ಗಗನಮಂಡಲವನ್ನು ಹರಡಿ, ಭೂಮಂಡಲವನ್ನು ವಿಸ್ತರಿಸಿದ್ದೇನೆ.


ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.


ಯಾಕೋಬೇ, ಇಸ್ರಾಯೇಲೇ, ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನನ್ನ ಸೇವಕನಾಗಿದ್ದೀಯಲ್ಲವೇ. ಇಸ್ರಾಯೇಲೇ, ನಾನು ನಿನ್ನನ್ನು ನಿರ್ಮಿಸಿದೆನು, ನೀನು ನನ್ನ ಸೇವಕನು, ನಿನ್ನನ್ನು ಮರೆತುಬಿಡೆನು.


ದುರಾಚಾರಿಗಳಿರಾ, ಅವಿವೇಕಿಗಳಿರಾ, ಯೆಹೋವನ ವಿಷಯದಲ್ಲಿ ಈ ರೀತಿಯಾಗಿ ವರ್ತಿಸಬಹುದೇ? ಆತನು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೇ; ನಿಮ್ಮನ್ನು ಜನಾಂಗವನ್ನಾಗಿ ಮಾಡಿ ಸ್ಥಾಪಿಸಿದನಲ್ಲವೇ.


ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.


ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.


ಆಗ ನೀನು ಫರೋಹನಿಗೆ, ‘ಇಸ್ರಾಯೇಲನು ನನ್ನ ಮಗನು, ನನಗೆ ಚೊಚ್ಚಲಮಗನು.


ನೀವು ನಿಮ್ಮ ತಂದೆಯ ಕಾರ್ಯಗಳನ್ನು ಮಾಡುತ್ತಿದ್ದೀರಿ” ಎಂದನು. ಅದಕ್ಕವರು, “ನಾವು ವ್ಯಭಿಚಾರದಿಂದ ಹುಟ್ಟಿದವರಲ್ಲ. ನಮಗೆ ಒಬ್ಬನೇ ತಂದೆ, ಆತನು ದೇವರೇ” ಎಂದರು.


ನೀನು ದುಷ್ಟರ ಆಲೋಚನೆಗೆ ಪ್ರಸನ್ನನಾಗಿ ನಿನ್ನ ಕೈಕಷ್ಟದಿಂದ ಸೃಷ್ಟಿಸಿದ್ದನ್ನು ತಿರಸ್ಕರಿಸಿ, ಬಾಧಿಸುವುದು ನಿನಗೆ ಸಂತೋಷವೋ?


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.


“ನನ್ನ ಪ್ರಜೆಯಾದ ಐಗುಪ್ತಕ್ಕೂ, ನನ್ನ ಕೈಯಿಂದ ಸೃಷ್ಟಿಸಲ್ಪಟ್ಟ ಅಶ್ಶೂರಕ್ಕೂ, ನನ್ನ ಸ್ವತ್ತಾದ ಇಸ್ರಾಯೇಲಿಗೂ ಶುಭವಾಗಲಿ” ಎಂದು ಸೇನಾಧೀಶ್ವರನಾದ ಯೆಹೋವನು ಅವುಗಳನ್ನು ಆಶೀರ್ವದಿಸುವನು.


ಆದರೂ ಇಸ್ರಾಯೇಲರ ಸದಮಲಸ್ವಾಮಿಯೂ, ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ, ‘ಭವಿಷ್ಯತ್ತಿನ ವಿಷಯವಾಗಿ ನನ್ನನ್ನು ವಿಚಾರಿಸಿರಿ. ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು. ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.


ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


ನಮ್ಮೆಲ್ಲರಿಗೂ ಒಬ್ಬನೇ ತಂದೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಮಾಡಿದ್ದನಲ್ಲವೇ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಹೊಲೆಮಾಡುವುದೇಕೆ?


ಐಗುಪ್ತ್ಯರು ನಿನ್ನ ವಿಷಯದಲ್ಲಿ, ‘ಯೆಹೋವನು ಕೇಡು ಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದನಲ್ಲಾ. ಅವರನ್ನು ಬೆಟ್ಟಗಳಲ್ಲಿ ಸಾಯಿಸಲಿಕ್ಕೂ ಭೂಮಿಯಿಂದ ನಿರ್ಮೂಲ ಮಾಡುವುದಕ್ಕೂ ಅವರನ್ನು ಕರೆದುಕೊಂಡು ಹೋದನೆಂದು ಹೇಳಿಕೊಳ್ಳುವುದೇತಕ್ಕೆ?’ ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬದಲು ಮಾಡಿಕೋ.


ಇವರು ಮಹಾಶಕ್ತಿಯಿಂದಲೂ ಮತ್ತು ಭುಜಬಲದಿಂದಲೂ ನೀನು ಬಿಡಿಸಿದ ನಿನ್ನ ಸ್ವಕೀಯ ಜನರಲ್ಲವೇ” ಎಂದು ಬಿನ್ನೈಸಿದೆನು.


ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟಿದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯ ಹೊಗೆ ಏರುವುದೇಕೆ?


ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ.


ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.


ನಾನು ಸರ್ವದಾ ವ್ಯಾಜ್ಯವಾಡುವುದಿಲ್ಲ, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯನ ಆತ್ಮವೂ, ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.


“ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು” ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು