Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವರು ವ್ಯರ್ಥವಾಗಿ ದುಡಿಯರು, ಅನಾಹುತಕ್ಕಾಗಿ ಮಕ್ಕಳನ್ನು ಹಡೆಯರು. ಸದಾಕಾಲ ಅವರೂ ಅವರ ಸಂತತಿಯವರೂ ಸರ್ವೇಶ್ವರನಿಂದ ಅನುಗ್ರಹಗೊಂಡ ಗೋತ್ರವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರ ವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಇನ್ನು ಮುಂದೆ ಜನರು ಬಿಟ್ಟೀಕೆಲಸ ಮಾಡುವದಿಲ್ಲ. ಇನ್ನು ಮುಂದೆ ಮಕ್ಕಳನ್ನು ಹೆರುವಾಗ ಕೇಡಾಗುತ್ತದೆಯೆಂಬ ಭಯವಿರುವುದಿಲ್ಲ. ನನ್ನ ಎಲ್ಲಾ ಜನರು ಮತ್ತು ಅವರ ಮಕ್ಕಳು ಯೆಹೋವನಿಂದ ಆಶೀರ್ವದಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರು ವ್ಯರ್ಥವಾಗಿ ದುಡಿಯರು. ಕಷ್ಟವನ್ನು ಎದುರುಗೊಳ್ಳುವುದಿಲ್ಲ. ಏಕೆಂದರೆ ಅವರು ಯೆಹೋವ ದೇವರ ಆಶೀರ್ವಾದ ಹೊಂದಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವಾದ ಹೊಂದುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:23
28 ತಿಳಿವುಗಳ ಹೋಲಿಕೆ  

ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವುದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವುದು. ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.


ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು.


ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.


ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ಉಪಯೋಗಮಾಡಿದ್ದು ಹಾಳೇ, ಬರಿ ಗಾಳಿಯೇ. ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ. ನನಗೆ ಲಾಭವು ನನ್ನ ದೇವರಿಂದಲೇ ಆಗುವುದು” ಎಂದು ಅಂದುಕೊಂಡೆನು.


ಕಣಜದಲ್ಲಿ ಕಾಳು ಇನ್ನು ಇದೆಯೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಒಲೀವ್ ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.”


ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.


ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.


ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.


ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.


ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.


ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ಅದನ್ನು ಸೇವಿಸುವಿರಿ ತೃಪ್ತಿಯಾಗದು, ಕುಡಿಯುತ್ತೀರಿ ಆನಂದವಾಗದು; ಹೊದ್ದುಕೊಳ್ಳುವಿರಿ ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಾಗಿದೆ.”


ನೀವು ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳ ಮಾಂಸವನ್ನೇ ತಿನ್ನುವಿರಿ.


ನಿಮ್ಮ ಮೇಲೆ ಕಾಡುಮೃಗಗಳನ್ನು ಬರಮಾಡುವೆನು; ಅವು ನಿಮ್ಮ ಮಕ್ಕಳನ್ನು ಕದ್ದುಕೊಂಡು ಹೋಗುವವು, ನಿಮ್ಮ ಪಶುಗಳನ್ನು ಕೊಲ್ಲುವವು, ನಿಮ್ಮನ್ನು ಸ್ವಲ್ಪ ಜನರನ್ನಾಗಿ ಮಾಡುವವು; ನಿಮ್ಮ ದಾರಿಗಳು ಪಾಳು ಬೀಳುತ್ತದೆ.


ನೀವು ದುಡಿದದ್ದೆಲ್ಲಾ ವ್ಯರ್ಥವಾಗುವುದು; ನಿಮ್ಮ ಭೂಮಿಯಲ್ಲಿ ಬೆಳೆಯಾಗುವುದಿಲ್ಲ, ತೋಟಗಳ ಮರಗಳು ಫಲ ಕೊಡುವುದಿಲ್ಲ.


ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.


ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.


“ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.


ಅವರ ಸಂತಾನದವರು ಅವರೊಂದಿಗಿರುತ್ತಾ ಅವರ ಮುಂದೆಯೇ ಸುಸ್ಥಿರವಾಗಿರುವರು, ಅವರ ಮಕ್ಕಳು ಅವರ ಕಣ್ಣೆದುರಿನಲ್ಲಿ ಅಚಲವಾಗಿ ನಿಲ್ಲುವರು.


ನಾನು ನಿಮ್ಮನ್ನು ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ರಕ್ಷಿಸಿ, ಬೆಳೆ ಬೆಳೆಯಲೆಂದು ಅಪ್ಪಣೆಕೊಟ್ಟು, ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು