Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳಿವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆತನು ‘ಕೆಟ್ಟದ್ದು ಬೇಡ, ಒಳ್ಳೆಯದು ಬೇಕು’ ಎನ್ನುವಷ್ಟು ಬಲ್ಲವನಾಗುವಾಗ ಮೊಸರನ್ನೂ ಜೇನುತುಪ್ಪವನ್ನೂ ತಿನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನು ಕೆಟ್ಟದ್ದು ಬೇಡ, ಒಳ್ಳೇದು ಬೇಕು ಅನ್ನುವಷ್ಟು ಬಲ್ಲವನಾಗುವಾಗ ಮೊಸರನ್ನೂ ಜೇನತುಪ್ಪವನ್ನೂ ತಿನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆತನು ಒಳ್ಳೆಯದನ್ನು ಆರಿಸಿಕೊಳ್ಳಲು ಮತ್ತು ಕೆಟ್ಟದ್ದನ್ನು ನಿರಾಕರಿಸಲು ಕಲಿತುಕೊಳ್ಳುವವರೆಗೆ ಮೊಸರನ್ನೂ ಜೇನುತುಪ್ಪವನ್ನೂ ತಿನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆ ಮಗು ಬೆಳೆದು, ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನನ್ನು ತಿನ್ನುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:15
11 ತಿಳಿವುಗಳ ಹೋಲಿಕೆ  

ಅವು ಸಮೃದ್ಧಿಯಾಗಿ ಹೆಚ್ಚು ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು. ಏಕೆಂದರೆ ಆ ದೇಶದಲ್ಲಿ ಉಳಿದ ಪ್ರತಿಯೊಬ್ಬನೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿಂದು ಜೀವಿಸುವನು.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.


ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಿತ್ತು, ಅವನು ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆ ಮತ್ತು ಕಾಡುಜೇನು ಅವನ ಆಹಾರವಾಗಿತ್ತು.


ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.


ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.


ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆಯುತ್ತಾ ಬಂದನು; ಇದಲ್ಲದೆ ದೇವರ ಮತ್ತು ಮನುಷ್ಯರ ಕೃಪೆಯು ಆತನ ಮೇಲೆ ಹೆಚ್ಚಾಗುತ್ತಾ ಬಂದಿತು.


ಆ ಬಾಲಕನು ಬೆಳೆದು ಬಲಗೊಂಡು ಜ್ಞಾನದಿಂದ ತುಂಬಿದವನಾದನು; ಮತ್ತು ಆತನ ಮೇಲೆ ದೇವರ ಕೃಪೆ ಇತ್ತು.


ಆಳು ಬೇಗನೆ ಕೊಬ್ಬಿದ ಕರುವನ್ನು ಕಡಿದು, ಅಡಿಗೆ ಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನೂ ಅಡಿಗೆ ಮಾಡಿದ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಕುಳಿತು ಊಟ ಮಾಡುವವರೆಗೂ ಅವನು ಹತ್ತಿರ ನಿಂತು ಅವರಿಗೆ ಉಪಚಾರ ಮಾಡಿದನು.


ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರೂ ಹಾಗು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ಅರಿಯದ ನಿಮ್ಮ ಮಕ್ಕಳೂ ಅಲ್ಲಿಗೆ ಸೇರುವರು. ಅವರಿಗೇ ಆ ದೇಶವನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು