Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ನಾವು ಯೆಹೂದದ ಮೇಲೆ ದಂಡೆತ್ತಿ ಹೆದರಿಸಿ, ಒಳಗೆ ನುಗ್ಗಿಕೊಂಡು ಹೋಗಿ, ಅದರಲ್ಲಿ ಟಬೇಲನ ಮಗನನ್ನು ಅರಸನನ್ನಾಗಿ ನೇಮಿಸಿಕೊಳ್ಳೋಣ” ಎಂದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ‘ಜುದೇಯ ನಾಡಿಗೆ ಮುತ್ತಿಗೆ ಹಾಕಿ, ಅದನ್ನು ಬೆದರಿಸಿ ಆಕ್ರಮಿಸಿಕೊಳ್ಳೋಣ; ತೆಬೇಲನ ಮಗನಿಗೆ ಅಲ್ಲಿಯೇ ಪಟ್ಟಕಟ್ಟೋಣ’ ಎಂದು ದುರಾಲೋಚನೆ ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೂದದ ಮೇಲೆ ದಂಡೆತ್ತಿ ಹೆದರಿಸಿ ಒಳಗೆ ನುಗ್ಗಿಕೊಂಡು ಹೋಗಿ ಅದರಲ್ಲಿ ಟಾಬೇಲನ ಮಗನಿಗೆ ಪಟ್ಟಕಟ್ಟೋಣವೆಂದುಕೊಂಡದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರು, “ನಾವು ಹೋಗಿ ಯೆಹೂದಕ್ಕೆ ವಿರುದ್ಧವಾಗಿ ಯುದ್ಧ ಮಾಡೋಣ. ಯೆಹೂದ ರಾಜ್ಯವನ್ನು ನಾವಿಬ್ಬರೂ ಭಾಗ ಮಾಡಿಕೊಳ್ಳೋಣ ಮತ್ತು ಟಾಬೇಲನ ಮಗನನ್ನು ಯೆಹೂದದ ಹೊಸ ಅರಸನಾಗಿ ಮಾಡೋಣ ಎಂದು ಮಾತಾಡಿಕೊಳ್ಳುತ್ತಿದ್ದಾರೆ.”’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ, ಅದನ್ನು ವ್ಯಥೆಪಡಿಸಿ, ಅದರಲ್ಲಿ ನಮಗಾಗಿ ಮಾಡಿಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ, ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೆಯೇಲನ ಮಗನನ್ನು ನೇಮಿಸಿಕೊಳ್ಳೋಣ,” ಎಂದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:6
12 ತಿಳಿವುಗಳ ಹೋಲಿಕೆ  

ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನಾದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲರ ಅರಸನಾದ ಪೆಕಹ ಎಂಬುವವರು ಯೆರೂಸಲೇಮಿನ ಮೇಲೆ ದಂಡೆತ್ತಿ ಬಂದರು. ಆದರೆ ಅದನ್ನು ಜಯಿಸುವುದಕ್ಕೆ ಸಾಧ್ಯವಾಗಲಿಲ್ಲ.


ಅರಾಮ್ಯರೂ, ಎಫ್ರಾಯೀಮ್ಯರೂ ಮತ್ತು ರೆಮಲ್ಯನ ಮಗನೂ ನಿನ್ನ ವಿಷಯವಾಗಿ ದುರಾಲೋಚನೆ ಮಾಡಿ,


ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಇದು ನೆರವೇರುವುದಿಲ್ಲ; ಇದು ಆಗುವುದೇ ಇಲ್ಲ.


ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, “ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.


ಆದರೆ ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ತಂಗಿಯೂ ಆದ ಯೆಹೋಷೆಬಳೆಂಬಾಕೆಯು ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗನಾದ ಯೆಹೋವಾಷನನ್ನು ಅತಲ್ಯಳಿಂದ ಹತರಾಗಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯರೊಡನೆ ಅವನನ್ನು ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು


ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿ ಕುರಿಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಯೆಹೋವನ ರಾಜ್ಯಕ್ಕೆ ವಿರುದ್ಧವಾಗಿ ನಿಂತು ಗೆಲ್ಲಬಹುದೆಂದು ನೆನಸುತ್ತೀರೋ?


ಆದರೂ ಯೆಹೋವನು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ” ಎಂದು ಒಡಂಬಡಿಕೆ ಮಾಡಿ ಹೇಳಿದ್ದರಿಂದ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.


ಈ ಕಾರಣ ಅವನ ದೇವರಾದ ಯೆಹೋವನು, ಅವನನ್ನು ಅರಾಮ್ಯರ ಅರಸನ ಕೈಗೆ ಒಪ್ಪಿಸಿದನು. ಅರಾಮ್ಯರು ಅವನನ್ನು ಸೋಲಿಸಿ, ಅವನ ಜನರಲ್ಲಿ ಬಹಳಷ್ಟುಮಂದಿಯನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು, ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.


ಅವರು ತಂತ್ರೋಪಾಯಗಳನ್ನು ಕಲ್ಪಿಸಿ, ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವುದಿಲ್ಲ.


ಅವರು ನಿನ್ನ ಪ್ರಜೆಗಳಿಗೆ ವಿರುದ್ಧವಾಗಿ ಒಳಸಂಚುಮಾಡಿ, ನಿನ್ನ ಮರೆಹೊಕ್ಕವರನ್ನು ಕೆಡಿಸಬೇಕೆಂದು ಆಲೋಚಿಸಿ,


ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.


“ಈ ಜನರು ನಿಧಾನವಾಗಿ ಹರಿಯುವ ಸಿಲೋವದ ನೀರನ್ನು ತ್ಯಜಿಸಿ, ರೆಚೀನನನ್ನೂ, ರೆಮಲ್ಯನ ಮಗನನ್ನೂ ನಂಬಿ ಮೆರೆದಿದ್ದರಿಂದ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು