Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಬೋಧನೆಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ಉಪದೇಶವನ್ನು ಮುಚ್ಚಿ ಮುದ್ರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದಿವ್ಯಬೋಧನೆಯನ್ನು ಸುಭದ್ರವಾಗಿ ಇರಿಸು. ಅದನ್ನು ನನ್ನ ಶಿಷ್ಯರಿಗೆ ಉಪದೇಶಮಾಡಿ ಸುರಕ್ಷಿತವಾಗಿರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಬೋಧನೆಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ಉಪದೇಶವನ್ನು ಮುಚ್ಚಿ ಮುದ್ರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನು, “ಒಡಂಬಡಿಕೆ ಮಾಡಿಕೊಂಡು ಅದಕ್ಕೆ ಮುದ್ರೆಹಾಕು. ಮುಂದಿನ ಪೀಳಿಗೆಗಾಗಿ ನನ್ನ ಬೋಧನೆಯನ್ನು ಜೋಪಾನವಾಗಿರಿಸು. ನನ್ನ ಹಿಂಬಾಲಕರ ಕಣ್ಣೆದುರಿನಲ್ಲೇ ಹೀಗೆ ಮಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ದೇವರ ಶಿಕ್ಷಣವನ್ನು ಮುದ್ರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:16
25 ತಿಳಿವುಗಳ ಹೋಲಿಕೆ  

ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆ ಹಾಕು. ಅಂತ್ಯಕಾಲದ ವರೆಗೆ ಮರೆಯಾಗಿರಲಿ. ಬಹಳ ಜನರು ಅತ್ತಿತ್ತ ತಿರುಗುವರು, ತಿಳಿವಳಿಕೆಯು ಹೆಚ್ಚುವುದು.”


ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾದ ಸೇವಕನಾಗಿದ್ದನು. ಅವನು ಮುಂದೆ ಪ್ರಕಟವಾಗಬೇಕಾಗಿದ್ದಂಥ ವಿಷಯಗಳಿಗೆ ಸಾಕ್ಷಿಕೊಟ್ಟಿದ್ದಾನೇ.


ಸಾಮ್ಯಗಳಿಲ್ಲದೆ ಆತನು ಒಂದನ್ನೂ ಹೇಳಲಿಲ್ಲಾ. ಆದರೆ ಏಕಾಂತವಾಗಿರುವಾಗ ಆತನು ತನ್ನ ಆಪ್ತ ಶಿಷ್ಯರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದನು.


ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.


ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.


ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ, “ಆ ಏಳು ಗುಡುಗುಗಳು ನುಡಿದಿದ್ದನ್ನು ನೀನು ಬರೆಯದೆ ಗುಪ್ತವಾಗಿಡು” ಎಂದು ಹೇಳುವ ದೈವವಾಣಿಯನ್ನು ಕೇಳಿದೆನು.


ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜನೂ ಆಗಿರುವ ಒಬ್ಬನು, ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನೂ ತೆರೆಯುವುದಕ್ಕೆ ಜಯವೀರನಾಗಿದ್ದಾನೆ” ಎಂದು ಹೇಳಿದನು.


ನಾನು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು. ಅದರ ಒಳಭಾಗದಲ್ಲಿಯೂ ಮತ್ತು ಹೊರಭಾಗದಲ್ಲಿಯೂ ಬರೆಯಲ್ಪಟ್ಟಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.


ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.


ಅವರು ಮನೆಯಲ್ಲಿದ್ದಾಗ ಆತನ ಶಿಷ್ಯರು ಈ ವಿಷಯವಾಗಿ ಆತನನ್ನು ಪುನಃ ಕೇಳಿದರು.


ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು.


ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.


ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.


ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನು ಇಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆ ತಟ್ಟುತ್ತಾ, “ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದರು.


ಇಸ್ರಾಯೇಲರು ಐಗುಪ್ತ ದೇಶದಿಂದ ಬಂದಾಗ ಮೋಶೆಯು ಇಸ್ರಾಯೇಲರಿಗೆ ತಿಳಿಸಿದ ಆಜ್ಞಾವಿಧಿನಿಯಮಗಳು ಇವೇ.


ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ. ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು