Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇಗೋ, ನನ್ನನ್ನೂ ನನಗೆ ಸ್ವಾಮಿ ದಯಪಾಲಿಸಿರುವ ಮಕ್ಕಳನ್ನೂ ನೋಡು. ಸಿಯೋನ್ ಶಿಖರದಲ್ಲಿ ವಾಸವಾಗಿರುವ ಸೇನಾಧೀಶ್ವರಸ್ವಾಮಿಯೇ ಇಸ್ರಯೇಲರಿಗೆ ನೀಡುವ ಸೂಚನೆಗಳು ಹಾಗೂ ಜೀವಂತ ಸಂಕೇತಗಳು ನಾವೇ ಆಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಹಾ, ನಾನೂ ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದುಂಟಾದ ಗುರುತುಗಳಾಗಿಯೂ ಅದ್ಭುತಗಳಾಗಿಯೂ ಇಸ್ರಾಯೇಲ್ಯರ ಮಧ್ಯದಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ನಾನೂ ನನ್ನ ಮಕ್ಕಳೂ ಇಸ್ರೇಲ್ ಜನರಿಗೆ ಒಂದು ಗುರುತಾಗಿದ್ದೇವೆ. ಸರ್ವಶಕ್ತನಾದ ಯೆಹೋವನು ನಮ್ಮನ್ನು ಕಳುಹಿಸಿದ್ದಾನೆ. ಆತನು ಚೀಯೋನ್ ಬೆಟ್ಟದಲ್ಲಿ ವಾಸಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇಗೋ, ನಾನೂ ಯೆಹೋವ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರ ಯೆಹೋವ ದೇವರಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:18
27 ತಿಳಿವುಗಳ ಹೋಲಿಕೆ  

ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ, “ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವುದಕ್ಕೂ, ಅನೇಕರು ಏಳುವುದಕ್ಕೂ ಕಾರಣನಾಗಿರುವನು ಮತ್ತು ಜನರು ವಿರೋಧಿಸಿ ಮಾತನಾಡುವುದಕ್ಕೂ ಗುರುತಾಗಿರುವನು;


ಯೆಹೋವನು ಇಂತೆನ್ನುತ್ತಾನೆ, “ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮ್ ಸತ್ಯದ ಪಟ್ಟಣವೆಂದು ಅನ್ನಿಸಿಕೊಳ್ಳುವುದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವುದು.”


ನನ್ನ ದುಸ್ಥಿತಿಯು ಅನೇಕರಿಗೆ ಒಂದು ಗುರುತಾಗಿದೆ; ಆದರೂ ನೀನು ನನಗೆ ಬಲವಾದ ಆಶ್ರಯಸ್ಥಾನವಾಗಿರುತ್ತೀ.


ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಕೇಳಿರಿ. ಇಗೋ, ಮೊಳಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೆನೆಂಬುದಕ್ಕೆ ಇವರೇ ಮುಂಗುರುತು.


ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;


ಆತನನ್ನು ಸೇವಿಸುವವರ ಸಂತಾನದವರು ಯೆಹೋವನ ಸಂತಾನದವರೆಂದು ಎಣಿಸಲ್ಪಡವರು.


ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.


ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ,


ಆಮೇಲೆ ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇಮನ್ನು ಆಳುವನು. ಆತನ ಪರಿವಾರದ ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವುದು.


ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.


“ಏಕೆಂದರೆ ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮೊದಲೇ ನೀನು ಭಯಪಡುವ ದೇಶವನ್ನು ಅದರ ಇಬ್ಬರು ಅರಸರು ತ್ಯಜಿಸಿಬಿಡುವರು.


ಹೀಗಿರಲು ಜನಾಂಗಗಳ ರಾಯಭಾರಿಗಳಿಗೆ ಏನು ಉತ್ತರ ಕೊಡಬೇಕೆಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಬಾಧೆಪಟ್ಟ ಆತನ ಜನರು ಅದನ್ನು ಆಶ್ರಯಿಸಿಕೊಳ್ಳುವರು ಎಂಬುದೇ.


ಇಸ್ರಾಯೇಲಿನ ದೇವರಾದ ಯೆಹೋವನು, ತನ್ನ ಪ್ರಜೆಗಳಿಗೆ ವಿಶ್ರಾಂತಿಯನ್ನು ಅನುಗ್ರಹಿಸಿ, ಆತನು ಸದಾಕಾಲವೂ ಯೆರೂಸಲೇಮಿನಲ್ಲಿ ವಾಸಿಸುವವನಾದುದರಿಂದ,


ಕೆಲವು ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ ಹಾಸ್ಯಕ್ಕೆ ಗುರಿಯಾದಿರಿ. ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ.


ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಕಡೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯಲ್ಲಿ ಆಹಾಜನನ್ನು ಎದುರುಗೊಂಡು ಅವನಿಗೆ ಈ ಪ್ರಕಾರ ಹೇಳಬೇಕು,


ಅವನ ಮೇಲೆ ಉಗ್ರಕೋಪಗೊಂಡು, ಅವನನ್ನು ಎಚ್ಚರಿಕೆಗೆ ಗುರುತಾಗಿಯೂ, ಕಟ್ಟು ಗಾದೆಗಳಿಗೂ ವಸ್ತುವಾಗಿ ಮಾಡಿ, ನನ್ನ ಜನರೊಳಗಿಂದ ಕಿತ್ತುಹಾಕುವೆನು; ಹೀಗೆ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.


ಅನಂತರ, “ನಾನು ನನ್ನ ಹೆಂಡತಿಯೊಡನೆ ಸಂಗಮಿಸಲು ಆಕೆಯು ಬಸುರಾಗಿ ಗಂಡು ಮಗುವನ್ನು ಹೆತ್ತಳು. ಆಗ ಯೆಹೋವನು ನನಗೆ, ಅದಕ್ಕೆ ‘ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು’ ಎಂದು ಹೇಳಿದನು.


ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು, “ನಿನ್ನ ಜೊತೆಯಲ್ಲಿರುವ ಜನರು ಯಾರು?” ಎಂದು ಕೇಳಲು ಯಾಕೋಬನು ಅವನಿಗೆ, “ದೇವರು ನಿನ್ನ ಸೇವಕನಿಗೆ ಕೃಪೆಯಿಂದ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು” ಎಂದು ಹೇಳಿದನು.


ಇವು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಯಾವಾಗಲೂ ಪ್ರಾಪ್ತವಾಗುತ್ತಾ ಎಲ್ಲರಿಗೂ ಎಚ್ಚರಿಕೆಯನ್ನೂ ಮತ್ತು ಬೆರಗನ್ನೂ ಉಂಟುಮಾಡುವವು.


ಆಗ ಯೆಹೋವನು ಹೀಗೆ ಹೇಳಿದನು, “ನನ್ನ ಸೇವಕನಾದ ಯೆಶಾಯನು ಐಗುಪ್ತದ ಮತ್ತು ಕೂಷಿನ ನಾಶನಕ್ಕೆ ಆಶ್ಚರ್ಯವಾದ ಗುರುತಾಗಿ ಮೂರು ವರ್ಷ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ನಡೆದನು.”


ನಾನು ನಿಮ್ಮನ್ನು ಈ ಸ್ಥಳದಲ್ಲಿ ದಂಡಿಸುವೆನು ಎಂಬುದಕ್ಕೆ ಒಂದು ಗುರುತು ಕಾಣುವುದು; ನನ್ನ ಮಾತುಗಳು ಈಡೇರಿ ನಿಮಗೆ ಕೇಡನ್ನು ಉಂಟುಮಾಡುವೆನು ಎಂಬುದಾಗಿ ಅದರಿಂದಲೇ ನಿಮಗೆ ತಿಳಿದುಬರುವುದು.


ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು ಅದನ್ನು ನಿನಗೂ ಮತ್ತು ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಿಗೆ ಹಾಕಲ್ಪಡುವುದು, ನೀನು ಅದನ್ನು ಮುತ್ತಿಗೆ ಹಾಕಿದಂತಾಗುವುದು. ಇದು ಇಸ್ರಾಯೇಲ್ ವಂಶದವರಿಗೆ ಒಂದು ಗುರುತು.


ಅವರ ಕಣ್ಣ ಮುಂದೆ, ಅದನ್ನು ಹೆಗಲ ಮೇಲೆ ಹಾಕಿ, ಕತ್ತಲಲ್ಲಿ ಹೊತ್ತುಕೊಂಡು ಹೋಗು; ನೆಲವನ್ನು ನೋಡದಂತೆ ಮುಖವನ್ನು ಮುಚ್ಚಿಕೋ; ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಗುರುತನ್ನಾಗಿ ಮಾಡಿದ್ದೇನೆ.”


ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು.


ಅದನ್ನು ಕೇಳಿದವರೆಲ್ಲರೂ, ತಮಗೆ ಕುರುಬರು ಹೇಳಿದ ಮಾತುಗಳಿಗೆ ಆಶ್ಚರ್ಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು