Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ‘ಲೊಚಗುಟ್ಟುವ, ಪಿಟಿಪಿಟಿಗುಟ್ಟುವ, ಕಣಿಹೇಳುವವರ ಮತ್ತು ಪ್ರೇತವಿಚಾರಕರ ಸಲಹೆ ಕೇಳಿ’ ಎಂದು ಜನರು ನಿಮಗೆ ಹೇಳಿಯಾರು. ಆಗ, ‘ದೇವರನ್ನೇ ಏಕೆ ವಿಚಾರಿಸಬಾರದು? ಜೀವಿತರಿಗಾಗಿ ಸತ್ತವರನ್ನು ವಿಚಾರಿಸುವುದು ಸರಿಯಲ್ಲ’ ಎಂದು ಅಂಥವರಿಗೆ ನೀವು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಲೊಚಗುಟ್ಟುವ ಪಿಟಿಪಿಟಿಗುಟ್ಟುವ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಆಶ್ರಯಿಸಿರಿ ಎಂದು ಒಂದು ವೇಳೆ ನಿಮಗೆ ಹೇಳಾರು. ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವದು ಯುಕ್ತವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಲೊಚಗುಟ್ಟುವ, ಪಿಸುಮಾತಾಡುವ ಮಂತ್ರಗಾರರನ್ನೂ; ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ, ಜನರು ತಮ್ಮ ದೇವರನ್ನೇ ಹುಡುಕುವುದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವುದುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:19
28 ತಿಳಿವುಗಳ ಹೋಲಿಕೆ  

ಸೌಲನು ಯೆಹೋವನ ಮಾತು ಕೇಳದೆ ಆತನಿಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದಲೂ, ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೇ, ಭೂತ, ಪ್ರೇತಗಳನ್ನು ನಂಬಿ ದೇವ ದ್ರೋಹಿಯಾದುದರಿಂದ ಅವನಿಗೆ ಇಂಥ ಮರಣವಾಯಿತು.


“‘ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ, ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.


ಅವರು ತಮ್ಮನ್ನು ಬಾಳ್ ಪೆಗೋರನ ಸೇವೆಗೆ ಒಪ್ಪಿಸಿ, ಮೂರ್ತಿಗಳಿಗೆ ಯಜ್ಞ ಮಾಡಿದ್ದನ್ನು ಊಟಮಾಡಿದರು.


“‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.


ನೀನು ಕುಗ್ಗಿ ಭೂಮಿಯೊಳಗಿಂದ ಮಾತನಾಡುವಿ, ನಿನ್ನ ನುಡಿಯು ಮಣ್ಣಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವುದು, ನಿನ್ನ ಧ್ವನಿಯು ಪ್ರೇತದ ಧ್ವನಿಯಂತೆ ನೆಲದೊಳಗಿಂದ ಬರುವುದು, ನಿನ್ನ ನುಡಿಯು ಧೂಳಿನೊಳಗಿಂದ ಪಿಸುಗುಟ್ಟುವುದು.


ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು.


ಆಗ ಸೌಲನು ವಸ್ತ್ರಗಳಿಂದ ತನ್ನನ್ನು ಮಾರ್ಪಡಿಸಿಕೊಂಡು, ಇಬ್ಬರು ಸೇವಕರೊಡನೆ ಹೊರಟು, ರಾತ್ರಿಯಲ್ಲಿ ಆಕೆಯ ಮನೆ ಸೇರಿ, “ದಯವಿಟ್ಟು ನನಗೋಸ್ಕರ ಸತ್ತವರಲ್ಲಿ ವಿಚಾರಿಸಿ ಕಣಿಹೇಳು. ನಾನು ಯಾವನ ಹೆಸರು ಹೇಳುತ್ತೇನೋ ಅವನನ್ನು ಇಲ್ಲಿಗೆ ಬರಮಾಡು” ಎಂದು ಆಕೆಯನ್ನು ಬೇಡಿಕೊಂಡನು


ಮಾಟಗಾರರು, ತಂತ್ರಗಾರರು, ಸತ್ತವರಲ್ಲಿ ವಿಚಾರಿಸುವವರು, ಬೇತಾಳ, ಪ್ರೇತ, ಭೂತ ಎಂದು ಪೂಜಿಸುವವರು ಯಾರೂ ನಿಮ್ಮಲ್ಲಿ ಇರಬಾರದು.


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ಇದಲ್ಲದೆ ಅವನು ತನ್ನ ಸ್ವಂತ ಮಗನನ್ನೇ ಆಹುತಿಕೊಟ್ಟನು. ಕಣಿಕೇಳಿಸುವುದು, ಮಾಟಮಂತ್ರಗಳನ್ನು ಮಾಡಿಸುವುದು, ಜೋತಿಷ್ಯ, ಮುಹೂರ್ತಗಳನ್ನು ನೋಡುವುದು ಮತ್ತು ಭೂತಪ್ರೇತಗಳನ್ನೂ ವಿಚಾರಿಸುವುದು, ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನು ಎಬ್ಬಿಸಿದನು.


ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಹೋಗುವುದೇನು ಇಸ್ರಾಯೇಲರಲ್ಲಿ ದೇವರಿಲ್ಲವೋ?


ಇದಲ್ಲದೆ, ಯೋಷೀಯನು ಸತ್ತವರಲ್ಲಿ ವಿಚಾರಿಸುವವರನ್ನೂ, ಭೂತ ಪ್ರೇತ ಆರಾಧಕರನ್ನೂ, ಯೆರೂಸಲೇಮ್, ಯೆಹೂದ ಪ್ರಾಂತ್ಯ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ, ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ್ದ ಧರ್ಮೋಪದೇಶಗ್ರಂಥದಲ್ಲಿದ್ದ ಆಜ್ಞೆಗಳನ್ನು ನೆರವೇರಿಸಿದನು.


ಆಗ ಸಮುವೇಲನು, “ಯೆಹೋವನು ನಿನ್ನನ್ನು ಬಿಟ್ಟು ನಿನಗೆ ವಿರೋಧಿಯಾದ ಮೇಲೆ, ನೀನು ನನ್ನನ್ನು ವಿಚಾರಿಸುವುದೇಕೆ?


ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.


ಆಗ ಸ್ತ್ರೀಯು, “ನಿನಗೆ ಯಾರನ್ನು ಬರಮಾಡಬೇಕು?” ಎನ್ನಲು, “ಸಮುವೇಲನನ್ನು” ಎಂದು ಉತ್ತರಕೊಟ್ಟನು.


ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ


ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವುದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.


ಬತ್ತಿ ಹೋಗಿದ್ದ ತೆನೆಗಳು ಆ ಏಳು ಒಳ್ಳೆ ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದೆನು. ಆದರೆ ಅವುಗಳ ಅರ್ಥವನ್ನು ವಿವರಿಸಿ ಹೇಳುವುದಕ್ಕೆ ಯಾರಿಂದಲೂ ಆಗಲಿಲ್ಲ” ಎಂದನು.


ನೀನು ಆ ಒಡೆಯರ ಮೇಲೆ ಕೈಮಾಡಿ, ಅವರನ್ನು ನಿರ್ಮೂಲಮಾಡಿ ಅವರ ಜ್ಞಾಪಕವನ್ನು ಅಳಿಸಿಬಿಟ್ಟಿದ್ದಿ. ಸತ್ತವರು ಪುನಃ ಬದುಕುವುದಿಲ್ಲ, ಪ್ರೇತಗಳು ಎದ್ದು ಬರುವುದಿಲ್ಲ.


ಫರೋಹನ ಆಶ್ರಯವನ್ನು ಪಡೆದು, ಐಗುಪ್ತವನ್ನು ಆಶ್ರಯ ಮಾಡಿಕೊಳ್ಳಬೇಕೆಂದು, ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ.


ಆದರೂ ಇಸ್ರಾಯೇಲರ ಸದಮಲಸ್ವಾಮಿಯೂ, ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ, ‘ಭವಿಷ್ಯತ್ತಿನ ವಿಷಯವಾಗಿ ನನ್ನನ್ನು ವಿಚಾರಿಸಿರಿ. ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.


ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ, ಲೆಕ್ಕವಿಲ್ಲದ ನಿನ್ನ ಮಾಟಮಂತ್ರಗಳನ್ನೂ ಪ್ರಯೋಗಿಸಿ ಎದ್ದು ನಿಲ್ಲು. ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು. ಒಂದು ವೇಳೆ ನಿನ್ನ ಶತ್ರುವಿನಲ್ಲಿ ಭಯ ಹುಟ್ಟೀತು.


ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು ಇವರೆಲ್ಲರೂ, ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ.


‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು.


ನಿನ್ನ ಕೈಯಲ್ಲಿನ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು. ನಿನ್ನಲ್ಲಿ ಕಣಿಯವರು ಇರುವುದಿಲ್ಲ.


ಮಕ್ಕಳನ್ನು ಬಲಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರ ಮಂತ್ರಗಳನ್ನು ಮಾಡುವವರು,


ಆದುದರಿಂದ ಅವನು ತನ್ನ ಸೇವಕರಿಗೆ, “ಸತ್ತವರಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ. ನಾನು ಆಕೆಯ ಹತ್ತಿರ ಹೋಗಿ ವಿಚಾರಿಸುವೆನು” ಎಂದು ಹೇಳಿದನು. ಆಗ ಅವರು, “ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು