Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀವು ಉಪದೇಶಗಳಿಗೂ ಒಡಂಬಡಿಕೆಗೂ ವಿಧೇಯರಾಗಿರಬೇಕು. ನೀವು ಈ ಆಜ್ಞೆಗಳನ್ನು ಅನುಸರಿಸದಿದ್ದರೆ, ತಪ್ಪು ಆಜ್ಞೆಗಳನ್ನು ಹಿಂಬಾಲಿಸುವಿರಿ. ಬೇತಾಳಿಕರಿಂದ, ಕಣಿಹೇಳುವವರಿಂದ ಬರುವ ಆಜ್ಞೆಗಳೇ ತಪ್ಪು ಆಜ್ಞೆಗಳು. ಅವುಗಳಿಗೆ ಯಾವ ಬೆಲೆಯೂ ಇಲ್ಲ. ಅವುಗಳನ್ನು ಅನುಸರಿಸುವುದರಿಂದ ನಿಮಗೆ ಯಾವ ಪ್ರಯೋಜನವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:20
29 ತಿಳಿವುಗಳ ಹೋಲಿಕೆ  

ಇದಲ್ಲದೆ ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು.


ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.


ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.


ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.


“ನೀವು ಇಂಥವರಾದ ಕಾರಣ ನಿಮಗೆ ರಾತ್ರಿಯಾಗುವುದು, ದಿವ್ಯದರ್ಶನವಾಗದು, ನಿಮಗೆ ಕತ್ತಲು ಕವಿಯುವುದು ಮತ್ತು ಕಣಿಹೇಳಲಾಗದು. ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ತಲಾಗುವುದು.


ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.


ಬೋಧನೆಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ಉಪದೇಶವನ್ನು ಮುಚ್ಚಿ ಮುದ್ರಿಸು.


ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ, ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ.


ಇವುಗಳಿಲ್ಲದವನು ಕುರುಡನಾಗಿದ್ದಾನೆ. ಅವನು ದೂರ ದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.


ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ;


ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟು ಮಹತ್ತರವಾಗಿರಬೇಕು!


ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು.


ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.


ಆತನು ಅವನಿಗೆ, “ಧರ್ಮಶಾಸ್ತ್ರದಲ್ಲಿ ಏನು ಬರೆದದೆ? ಹೇಗೆ ಓದಿದ್ದೀ?” ಎಂದು ಕೇಳಿದನು.


ಆತನು ಯಾಕೋಬವಂಶದಲ್ಲಿ ತನ್ನ ಕಟ್ಟಳೆಯನ್ನಿಟ್ಟು, ಇಸ್ರಾಯೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟು, ನಮ್ಮ ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, “ಇವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ;


ಮೇಲಕ್ಕೆ ಕಣ್ಣೆತ್ತಿದ್ದರೂ, ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು. ಕಾರ್ಗತ್ತಲೆಗೆ ತಳ್ಳಲ್ಪಡುವರು.


ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.


ಸ್ವಾಮಿಯಾದ ನೀನೂ ನಮ್ಮ ದೇವರ ಆಜ್ಞೆಯನ್ನು ಗೌರವಿಸುವವನೂ. ನೀನು ಹೇಳಿಕೊಟ್ಟ ಬುದ್ಧಿವಾದಕ್ಕೆ ಅನುಸಾರವಾಗಿ ಎಲ್ಲಾ ಹೆಂಡತಿಯರನ್ನೂ, ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ ಈಗಲೇ ನಮ್ಮ ದೇವರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯೋಣ.


ಅದಕ್ಕೆ ಆತನು “ಮೋಶೆಯು ನಿಮಗೆ ಏನು ಆಜ್ಞೆ ಕೊಟ್ಟನು?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು