Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 9:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆ ಮತ್ತು ಬಾಲಗಳನ್ನು, ಖರ್ಜೂರದ ಕೊಂಬೆಗಳನ್ನು ಮತ್ತು ಬೇರುಗಳನ್ನು ಒಂದೇ ದಿನದಲ್ಲಿ ಕಡಿದು ಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14-15 ಆದಕಾರಣ, ಇಸ್ರಯೇಲಿನ ತಲೆಬಾಲಗಳನ್ನೂ ತುದಿಬುಡವನ್ನೂ ಹುಲ್ಲಿನಂತೆ ಸ್ವಾಮಿ ಒಂದೇ ದಿನದಲ್ಲಿ ಕಡಿದುಬಿಡುವರು; ಅಂದರೆ ಸನ್ಮಾನ್ಯ ಹಿರಿಯರನ್ನು, ಸುಳ್ಳುಬೋಧನೆ ಮಾಡುವ ಪ್ರವಾದಿಗಳನ್ನು ಸಂಹರಿಸಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ತಾಲತೃಣಗಳನ್ನೂ ಒಂದೇ ದಿನದಲ್ಲಿ ಕಡಿದುಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ಯೆಹೋವನು ಇಸ್ರೇಲರ ತಲೆಯನ್ನೂ ಬಾಲವನ್ನೂ ಕತ್ತರಿಸುವನು. ಒಂದೇ ದಿವಸದಲ್ಲಿ ಯೆಹೋವನು ಮರದ ಕಾಂಡವನ್ನೂ ಕೊಂಬೆಗಳನ್ನೂ ಕತ್ತರಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದಕಾರಣ ಯೆಹೋವ ದೇವರು ಇಸ್ರಾಯೇಲಿನಿಂದ ತಲೆ ಬಾಲಗಳನ್ನೂ ಖರ್ಜೂರದ ಕೊಂಬೆಗಳನ್ನೂ ಒಂದೇ ದಿನದಲ್ಲಿ ಕಡಿದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 9:14
28 ತಿಳಿವುಗಳ ಹೋಲಿಕೆ  

ಆದ್ದರಿಂದ ಉಪದ್ರವಗಳು ಮರಣ, ಗೋಳಾಟ ಮತ್ತು ಕ್ಷಾಮಗಳು ಒಂದೇ ದಿನದಲ್ಲಿ ಅವಳಿಗೆ ಸಂಭವಿಸುವವು. ಅವಳಿಗೆ ತೀರ್ಪುಕೊಡುವ ಕರ್ತನಾದ ದೇವರು ಶಕ್ತನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುವಳು.


ಐಗುಪ್ತದಲ್ಲಿ ತಲೆಯಾಗಲಿ, ಬಾಲವಾಗಲಿ, ಖರ್ಜೂರದ ಕೊಂಬೆಯಾಗಲಿ ಅಥವಾ ಹುಲ್ಲಾಗಲಿ ಸಾಧಿಸಲು ಸಾಧ್ಯವಾಗದ ಯಾವ ಕೆಲಸವೂ ಇರುವುದಿಲ್ಲ.


ಅಷ್ಟು ಐಶ್ವರ್ಯವು ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ ಎಂದು ಪರಿತಪಿಸುವರು. ಇದಲ್ಲದೆ ಹಡಗುಗಳ ಯಜಮಾನರೂ, ಪಯಣಿಗರೂ, ನಾವಿಕರೂ ಸಮುದ್ರದಿಂದ ತಮ್ಮ ಜೀವನವನ್ನುಮಾಡುತ್ತಿದ್ದವರೆಲ್ಲರೂ ದೂರದಲ್ಲಿ ನಿಂತು,


‘ನಿನ್ನ ಹೆಂಡತಿಯು ಈ ಪಟ್ಟಣದಲ್ಲಿ ಸೂಳೆಯಾಗುವಳು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗದಿಂದ ಹತರಾಗುವರು; ನಿನ್ನ ದೇಶವನ್ನು ಶತ್ರುಗಳು ನೂಲಿನಿಂದ ವಿಭಾಗಿಸಿಕೊಳ್ಳುವರು; ನೀನಂತೂ ಅಜ್ಞಾತವಾದ ದೇಶದಲ್ಲಿ ಸಾಯುವಿ, ಇಸ್ರಾಯೇಲರು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವುದು ಖಂಡಿತ’” ಎಂಬುದಾಗಿ ಯೆಹೋವನು ಹೇಳಿದನು.


ಇಗೋ, ನೋಡಿರಿ, ಯೆಹೋವನು ಆಜ್ಞಾಪಿಸಲು, ದೊಡ್ಡ ಮನೆಯು ಕೆಡವಲ್ಪಟ್ಟು ಚೂರುಚೂರಾಯಿತು, ಚಿಕ್ಕ ಮನೆಯೂ ಮುರಿದುಹೋಗುವುದು.


ಯೆಹೋವನು ಇಂತೆನ್ನುತ್ತಾನೆ: “ಸಿಂಹದ ಬಾಯೊಳಗಿಂದ ಕುರುಬನು ತನ್ನ ಕುರಿಗಳ ಎರಡು ಕಾಲನ್ನೂ, ಅಥವಾ ಕಿವಿಯ ಒಂದು ತುಂಡನ್ನೂ, ಹೇಗೆ ರಕ್ಷಿಸುವನೋ, ಹಾಗೆಯೇ ಸಮಾರ್ಯದೊಳಗೆ ಹಾಸಿಗೆಯ ಮೂಲೆಯಲ್ಲಿಯೂ, ಮಂಚದ ಪಟ್ಟೇದಿಂಬುಗಳಲ್ಲಿಯೂ, ಒರಗಿಕೊಳ್ಳುವ ಇಸ್ರಾಯೇಲರ ಸ್ವಲ್ಪ ಭಾಗ ಮಾತ್ರ ರಕ್ಷಿಸಲ್ಪಡುವುದು.”


ಹೀಗಿರಲು ಅವರು ಪ್ರಾತಃಕಾಲದ ಮೋಡದ ಹಾಗೆ, ಬೇಗನೆ ಮಾಯವಾಗುವ ಇಬ್ಬನಿಯಂತೆಯೂ, ಬಿರುಗಾಳಿಯು ಕಣದಿಂದ ಬಡಿದುಕೊಂಡುಹೋಗುವ ಹೊಟ್ಟಿನ ಹಾಗೂ, ಚಿಮಿಣಿಯಿಂದ ಹೊರಡುವ ಹೊಗೆಯೋಪಾದಿಯಲ್ಲಿಯೂ ಇರುವರು.


ನಿಮ್ಮ ದುಷ್ಟತನವು ಬಹಳವಾಗಿರುವುದರಿಂದ ಬೇತೇಲು ಇಂಥ ದುರ್ಗತಿಯನ್ನು ನಿಮಗೆ ತರುವುದು; ಬೆಳಗಾಗುವುದರೊಳಗೆ ಇಸ್ರಾಯೇಲಿನ ರಾಜನು ತೀರಾ ಹಾಳಾಗುವನು.


ಇಸ್ರಾಯೇಲೇ ನುಂಗಲ್ಪಟ್ಟಿದೆ; ಅದು ಜನಾಂಗಗಳ ಮಧ್ಯದಲ್ಲಿ ಯಾರಿಗೂ ಬೇಡವಾದ ಪಾತ್ರೆಯಂತಿದೆ.


ಆಹಾ, ಯಾಜಕರೇ, ನೀವು ಹಗಲಿನಲ್ಲಿ ಎಡವುವಿರಿ; ರಾತ್ರಿಯಲ್ಲಿ ನಿಮ್ಮೊಂದಿಗೆ ಪ್ರವಾದಿಗಳೂ ಎಡವುವರು; ನಾನು ನಿಮ್ಮ ವಂಶಮೂಲವನ್ನು ನಾಶಮಾಡುವೆನು.


ಆಗ ಯೆಹೋವನು, “ಈ ಮಗುವಿಗೆ ‘ಲೋ ಅಮ್ಮಿ’ ಎಂಬ ಹೆಸರಿಡು; ಏಕೆಂದರೆ ನೀವು ನನ್ನ ಪ್ರಜೆಯಲ್ಲ, ನಾನು ಇನ್ನು ನಿಮ್ಮ ದೇವರಲ್ಲ” ಎಂದನು.


ಗೋಮೆರಳು ಪುನಃ ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದಾಗ ಯೆಹೋವನು ಹೋಶೇಯನಿಗೆ, “ಈ ಮಗುವಿಗೆ ‘ಲೋ ರುಹಾಮ’ ಎಂಬ ಹೆಸರಿಡು; ಏಕೆಂದರೆ ನಾನು ಇಸ್ರಾಯೇಲ್ ವಂಶದವರಲ್ಲಿ ಇನ್ನು ವಾತ್ಸಲ್ಯವಿಡುವುದಿಲ್ಲ, ಅವರನ್ನು ಕ್ಷಮಿಸುವುದಿಲ್ಲ.


ಯೆಹೋವನು ಅವನನ್ನು ಕುರಿತು, “ಈ ಮಗುವಿಗೆ ಇಜ್ರೇಲ್ ಎಂಬ ಹೆಸರಿಡು; ಇಜ್ರೇಲಿನಲ್ಲಿ ಸುರಿಸಿದ ರಕ್ತಕ್ಕೆ ಪ್ರತಿಯಾಗಿ ಸ್ವಲ್ಪ ಕಾಲದೊಳಗೆ ನಾನು ಯೇಹು ವಂಶದವರಿಗೆ ಮುಯ್ಯಿ ತೀರಿಸಿ ಇಸ್ರಾಯೇಲ್ ಜನಾಂಗವನ್ನು ನಿರ್ನಾಮ ಮಾಡುವೆನು.


ಅವುಗಳನ್ನೇ ಆಧಾರ ಮಾಡಿಕೊಂಡಿದ್ದರಿಂದ ಎತ್ತರವಾದ ಗೋಡೆಯ ಒಂದು ಭಾಗವು ಬಾಗುತ್ತಾ, ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಕೊಳ್ಳುವ ಹಾಗೆ, ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವುದು.”


ಇಸ್ರಾಯೇಲರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವುದು. ಅವರ ಪರಿಶುದ್ಧನು ಜ್ವಾಲೆಯಂತಿರುವನು. ಅದು ಒಂದೇ ದಿನದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವುದು.


ಆದಕಾರಣ ಇಗೋ, ನಾನು ಈ ಜನರ ಮುಂದೆ ಅಡ್ಡಿಆತಂಕಗಳನ್ನು ಒಡ್ಡುವೆನು. ತಂದೆ ಮಕ್ಕಳು ಅವುಗಳನ್ನೂ ಎಡವುವರು, ನೆರೆಹೊರೆಯವರೂ ನಾಶವಾಗುವರು ಇದೇ ಯೆಹೋವನಾದ ನನ್ನ ಮಾತು” ಎಂದು ನುಡಿಯುತ್ತಾನೆ.


ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.


ಯೆಹೋವನ ಉಗ್ರದೃಷ್ಟಿಯು ಅವರನ್ನು ಚದುರಿಸಿದೆ; ಆತನು ಇನ್ನು ಅವರ ಮೇಲೆ ಒಲವು ತೋರಿಸುವುದಿಲ್ಲ. ಅವರು ಯಾಜಕರಾದರೇನು, ಅವರಿಗೆ ಮರ್ಯಾದೆ ತಪ್ಪಿದೆ; ವೃದ್ಧರಾದರೇನು, ಯಾರೂ ಅವರನ್ನು ಕರುಣಿಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು