Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 9:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ, ರಕ್ತದಲ್ಲಿ ಅದ್ದಿದ ಉಡುಪುಗಳೂ, ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಗ್ನಿಕುಂಡಕ್ಕೆ ಆಹುತಿಯಾಗುವುವು ಯುದ್ಧಕ್ಕೆ ಬಂದ ಯೋಧರ ಪಾದರಕ್ಷೆಗಳು ರಕ್ತಸಿಕ್ತವಾದವರ ದೇಹದ ಕವಚಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 [ಯುದ್ಧದ] ಗದ್ದಲದಲ್ಲಿ ತುಳಿದಾಡಿದವರೆಲ್ಲರ ಮೆಟ್ಟುಗಳೂ ರಕ್ತದಲ್ಲಿ ಹೊರಳಾಡಿಸಿದ ಉಡುಪುಗಳೂ ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ರಣರಂಗದಲ್ಲಿ ನಡೆಯುವ ಪ್ರತಿಯೊಂದು ಪಾದರಕ್ಷೆಯನ್ನೂ ನಾಶಮಾಡಲಾಗುವುದು; ರಕ್ತದ ಕಲೆಯಿರುವ ಪ್ರತಿಯೊಂದು ಸಮವಸ್ತ್ರವನ್ನೂ ನಾಶಮಾಡಲಾಗುವದು. ಅವುಗಳೆಲ್ಲವನ್ನು ಬೆಂಕಿಯಲ್ಲಿ ಹಾಕಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯುದ್ಧವೀರರ ಪ್ರತಿ ಯುದ್ಧವು ಗಲಿಬಿಲಿಯ ಗದ್ದಲದಿಂದ ರಕ್ತದಲ್ಲಿ ಹೊರಳಾಡಿಸಿದ ವಸ್ತ್ರಗಳು ಆಗಿರುತ್ತವೆ. ಆದರೆ ಇವು ಬೆಂಕಿಗೆ ಆಹುತಿಯಾಗುತ್ತವೆ. ಅದು ಬೆಂಕಿಗೆ ಇಂಧನವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 9:5
29 ತಿಳಿವುಗಳ ಹೋಲಿಕೆ  

ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.


ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು.


ಆಹಾ! ಚಾಟಿಯ ಚಟಚಟ ಶಬ್ದ, ಚಕ್ರಗಳ ಚೀತ್ಕಾರ, ಕುದುರೆಗಳ ಭರಧೌಡು, ರಥಗಳ ಹಾರಾಟ,


ಬೆಟ್ಟಗಳ ತುದಿಯಲ್ಲಿ ಅವು ಹಾರಾಡುತ್ತ ರಥಗಳಂತೆ ಚೀತ್ಕಾರ ಮಾಡುತ್ತವೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ.


ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.


ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.


ಕರ್ತನ ಆಗಮನದ ಗಂಭೀರವಾದ ಮಹಾ ದಿನವು ಬರುವುದಕ್ಕೆ ಮೊದಲೇ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂಮಿಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಆಗ ಕರ್ತನಾದ ಯೆಹೋವನು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಸ್ತ್ರೀಯರ ಕಲ್ಮಷವನ್ನೂ ಮತ್ತು ಯೆರೂಸಲೇಮಿನ ರಕ್ತದ ಕಲೆಯನ್ನು ತೊಳೆದುಬಿಡುವನು.


ಸೌಲನು ಯಾಜಕನೊಡನೆ ಮಾತನಾಡುತ್ತಿರುವಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದ ಗದ್ದಲವು ಬಲು ಹೆಚ್ಚಾಯಿತು. ಆಗ ಸೌಲನು ಯಾಜಕನಿಗೆ, “ನಿನ್ನ ಕೈಯನ್ನು ತೆಗೆ” ಎಂದು ಹೇಳಿ


ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮದ ರೂಪವಾಗಿ ಅರ್ಪಿಸಿದ ಆಹಾರವಾಗಿರುವುದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು.


ಯಾಜಕನು ಯಜ್ಞವೇದಿಯ ಮೇಲೆ ಅವುಗಳನ್ನು ಹೋಮಮಾಡಬೇಕು. ಅದು ಯೆಹೋವನಿಗೆ ಅಗ್ನಿಯ ಮೂಲಕವಾಗಿ ಅರ್ಪಿಸಿದ ಆಹಾರವಾಗುವುದು.


ಉರಿಯುವ ಬೆಂಕಿಯೂ ವಿಂಗಡಿಸಿಕೊಳ್ಳುವ ನಾಲಿಗೆಗಳ ಹಾಗೆ ಅವರಿಗೆ ಕಾಣಿಸಿ ಕೊಂಡು ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕುಳಿತುಕೊಂಡವು.


ಶತ್ರುವಿನ ಕುದುರೆಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ, ಚಕ್ರಗಳ ಬಿರುಗುಟ್ಟುವಿಕೆಗೂ ತಂದೆಗಳು ಹೆದರುತ್ತಾ ಜೋಲುಗೈ ಉಳ್ಳವರಾಗಿ ತಮ್ಮ ಮಕ್ಕಳನ್ನು ಹಿಂದಿರುಗಿ ನೋಡರು.


ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.


ಆಹಾ, ಬಹುಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ! ಇಗೋ, ಜನಾಂಗಗಳ ಆರ್ಭಟವು ಒಟ್ಟಿಗೆ ಕೂಡಿಕೊಂಡ ಅನೇಕ ರಾಜ್ಯಗಳ ಆರ್ಭಟದಂತೆ ಇದೆ! ಯೆಹೋವನು ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡುತ್ತಾನೆ.


ಗುಡ್ಡ ದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ, ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ.


ಆತನು ದೇಶದೇಶಗಳ ವ್ಯಾಜ್ಯವನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ ಆಯುಧಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನು ನೇಗಿಲ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರುದ್ಧವಾಗಿ ಜನಾಂಗವು ಕತ್ತಿಯನ್ನೆತ್ತದು. ಇನ್ನು ಮೇಲೆ ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.


ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.


ಆಗ ಯಾಕೋಬನು, “ನಾನು ದೇವರನ್ನು ಪ್ರತ್ಯಕ್ಷವಾಗಿ ನೋಡಿದೆನಲ್ಲಾ; ಆದರೂ ನನ್ನ ಪ್ರಾಣ ಉಳಿದಿದೆ” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು,


ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ವಿಧೇಯರಾಗಿರಬೇಕು. ಆತನನ್ನು ಧಿಕ್ಕರಿಸಿದರೆ ನಿಮ್ಮ ಅಪರಾಧವನ್ನು ಕ್ಷಮಿಸಲಾರನು. ನನ್ನ ನಾಮಮಹಿಮೆ ಆತನಲ್ಲಿ ಇರುವುದು.


ಯೆಹೋವನ ದೂತನು, “ನನ್ನ ಹೆಸರನ್ನು ಕೇಳುವುದೇಕೆ? ಅದು ಆಶ್ಚರ್ಯಕರವಾದದ್ದು” ಅಂದನು.


ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.


ಚಿಯೋನ್ ನಗರವೇ ನಿನ್ನ ಸೇನಾವ್ಯೂಹಗಳನ್ನು ಈಗ ಒಟ್ಟುಗೂಡಿಸು. ಆಹಾ ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.


ಹೌದು, ಅವನೇ ಯೆಹೋವನ ಆಲಯವನ್ನು ಕಟ್ಟಿಸಿ ರಾಜವೈಭವವನ್ನು ಹೊಂದಿಕೊಂಡು ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಮತ್ತು ಯಾಜಕರು ತನ್ನ ಸಿಂಹಾಸನದಲ್ಲಿ ಕುಳಿತಿರುವರು. ಅವರಿಬ್ಬರೂ ಸಮ್ಮತಿ ಸಮಾಧಾನದಿಂದ ಇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು