Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 10:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಒಳಗೆ ಸೇರಿದಾಗ ಕೆರೂಬಿಗಳು ದೇವಾಲಯದ ದಕ್ಷಿಣಭಾಗದಲ್ಲಿ ನಿಂತಿದ್ದವು, ಮೇಘವು ಒಳಗಣ ಪ್ರಾಕಾರವನ್ನು ತುಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನು ಒಳಗೆ ಸೇರಿದಾಗ ಕೆರೂಬಿಗಳು ದೇವಾಲಯದ ದಕ್ಷಿಣಭಾಗದಲ್ಲಿ ನಿಂತಿದ್ದವು, ಮೇಘವು ಒಳಗಿನ ಆವರಣವನ್ನು ತುಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ಸೇರಿದಾಗ ಕೆರೂಬಿಗಳು ದೇವಾಲಯದ ತೆಂಕಲಲ್ಲಿ ನಿಂತಿದ್ದವು, ಮೇಘವು ಒಳಗಣ ಪ್ರಾಕಾರವನ್ನು ತುಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಮನುಷ್ಯನು ಚಕ್ರಗಳ ನಡುವೆ ಒಳಗೆ ಹೋದಾಗ ಕೆರೂಬಿದೂತರು ಆಲಯದ ದಕ್ಷಿಣಕ್ಕೆ ಇರುವ ಸ್ಥಳದಲ್ಲಿ ನಿಂತಿದ್ದರು. ಒಳಗಿನ ಅಂಗಳವು ಮೋಡದಿಂದ ತುಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆ ಮನುಷ್ಯನು ಒಳಗೆ ಹೋದಾಗ ಕೆರೂಬಿಗಳು ಆಲಯದ ದಕ್ಷಿಣ ಭಾಗದ ಬಳಿಯಲ್ಲಿ ನಿಂತಿದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 10:3
7 ತಿಳಿವುಗಳ ಹೋಲಿಕೆ  

ಆಗ ಯೆಹೋವನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿನ ಮಾರ್ಗವಾಗಿ ಆಲಯವನ್ನು ಪ್ರವೇಶಿಸಿತು.


ಇಷ್ಟರಲ್ಲಿ ಇಸ್ರಾಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿರುವ ಪುರುಷನನ್ನು ಕಂಡನು.


ಆತನು ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆತಂದನು; ಇಗೋ, ಯೆಹೋವನ ಆಲಯದ ಬಾಗಿಲ ಮುಂದೆ ಮಂಟಪಕ್ಕೂ ಮತ್ತು ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಆಲಯಕ್ಕೆ ಬೆನ್ನು ಮಾಡಿ ಪೂರ್ವದ ಕಡೆಗೆ ಮುಖ ಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.


ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.


ಆಗ ಆ ತೇಜೋರೂಪಿಯು ಮನುಷ್ಯ ಹಸ್ತದಂಥ ಹಸ್ತವನ್ನು ಚಾಚಿ ನನ್ನ ತಲೆಯ ಕೂದಲಿನಿಂದ ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇಮಿನವರೆಗೆ ಒಯ್ದು, ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡು ಬಂದಿತು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವಾರದೊಳಗೆ ಕೆಲಸ ಮಾಡುವ ಆರು ದಿನಗಳಲ್ಲಿ ಒಳಗಿನ ಅಂಗಳದ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ಮುಚ್ಚಿರಬೇಕು. ಅದನ್ನು ಸಬ್ಬತ್ ದಿನದಲ್ಲಿಯೂ, ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.


ಕೃಪಾಸನದ ಎರಡು ಕೊನೆಗಳಲ್ಲಿ ಎರಡು ಬಂಗಾರದ ಕೆರೂಬಿಗಳನ್ನು ಕೆತ್ತನೆ ಕೆಲಸದಿಂದ ಮಾಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು