Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 10:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಅಂಗಳದಲ್ಲೆಲ್ಲಾ ವ್ಯಾಪಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇದಲ್ಲದೆ ಸರ್ವೇಶ್ವರನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲೂ ಮೇಘವು ತುಂಬಿತ್ತು; ಸರ್ವೇಶ್ವರನ ತೇಜಸ್ಸಿನ ಅದ್ಭುತಕಾಂತಿ ಆವರಣದಲ್ಲೆಲ್ಲಾ ವ್ಯಾಪಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಪ್ರಾಕಾರದಲ್ಲೆಲ್ಲಾ ವ್ಯಾಪಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನ ಮಹಿಮೆಯು ಕೆರೂಬಿದೂತರ ಮೇಲಿನಿಂದ ಹೊರಟು ಆಲಯದ ಹೊಸ್ತಿಲಿಗೆ ಬಂದಿತು. ಆಗ ಮೋಡವು ಆಲಯದಲ್ಲಿ ತುಂಬಿಕೊಂಡಿತು. ಯೆಹೋವನ ಮಹಿಮೆಯ ಪ್ರಕಾಶವು ಇಡೀ ಅಂಗಳವನ್ನು ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೆಹೋವ ದೇವರ ಮಹಿಮೆಯು ಕೆರೂಬಿಗಳ ಮೇಲಿನಿಂದ ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಿಗೆ ಹೋಯಿತು. ಆಲಯವು ಮೇಘದಿಂದ ತುಂಬಿತ್ತು. ಆಗ ಯೆಹೋವ ದೇವರ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 10:4
15 ತಿಳಿವುಗಳ ಹೋಲಿಕೆ  

ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲೂ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡಾಗ ನಾನು ಅಡ್ಡಬಿದ್ದೆ; ಮಾತನಾಡುವಾತನ ವಾಣಿಯನ್ನು ಕೇಳಿದೆ.


ಇಷ್ಟರಲ್ಲಿ ಇಸ್ರಾಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿರುವ ಪುರುಷನನ್ನು ಕಂಡನು.


ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಆಲಯ ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ.


ಬಳಿಕ ಯೆಹೋವನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಗಳ ಮೇಲೆ ನಿಂತಿತು.


ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಗೊಂಡಿದ್ದು ಯೆಹೋವನ ತೇಜಸ್ಸು ಪರಿಶುದ್ಧ ನಿವಾಸದ ತುಂಬಾ ಅವರಿಸಿ ಯೆಹೋವನ ಮಹಿಮೆಯು ಗುಡಾರದೊಳಗೆ ತುಂಬಿಕೊಂಡ್ದಿದರಿಂದಲೂ ಮೋಶೆಯು ಗುಡಾರದ ಒಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ.


‘ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವುದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು’” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ದೇವರಾತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆದು ತಂದಿತು. ಆಗ ಯೆಹೋವನ ಮಹಿಮೆಯು ಆಲಯವನ್ನು ತುಂಬಿಕೊಂಡಿತು.


ಅದಲ್ಲದೆ ಕೋರಹನು ತಮಗೆ ಎದುರಾದ ಸರ್ವಸಮೂಹದವರನ್ನು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ತೇಜಸ್ಸು ಸಮೂಹದವರೆಲ್ಲರಿಗೂ ಕಾಣಿಸಿತು.


ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು.


ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು.


ಇಗೋ! ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವದಿಕ್ಕಿನ ಮಾರ್ಗವಾಗಿ ಬಂದಿತ್ತು ಮತ್ತು ಆತನ ಧ್ವನಿಯು ಜಲಪ್ರವಾಹದ ಘೋಷದಂತಿತ್ತು; ಆತನ ಮಹಿಮೆಯಿಂದ ಭೂಮಿಯು ಪ್ರಕಾಶಿಸುತ್ತಿತ್ತು.


ಬಳಿಕ ಆ ಪುರುಷನು ಉತ್ತರದಿಕ್ಕಿನ ಹೆಬ್ಬಾಗಿಲಿನ ಮಾರ್ಗವಾಗಿ ನನ್ನನ್ನು ಆಲಯದ ಮುಂದೆ ಕರೆದುಕೊಂಡು ತಂದನು; ಆಹಾ, ನಾನು ನೋಡಿದ ಯೆಹೋವನ ಮಹಿಮೆಯೂ, ಯೆಹೋವನ ಆಲಯವನ್ನು ತುಂಬಿಕೊಂಡಿತು. ಅದನ್ನು ನೋಡಿ ನಾನು ಬೋರಲು ಬಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು