Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ಅಲ್ಲಿಗೆ ಸೇರಿ ಎಲ್ಲಾ ಅಸಹ್ಯ ವಸ್ತುಗಳನ್ನೂ, ಸಮಸ್ತ ಅಸಹ್ಯ ವಿಗ್ರಹಗಳನ್ನೂ ಅಲ್ಲಿಂದ ತೆಗೆದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವರು ಅಲ್ಲಿಗೆ ಸೇರಿ ಎಲ್ಲ ಅಸಹ್ಯ ವಸ್ತುಗಳನ್ನೂ ಸಮಸ್ತ ಅನಿಷ್ಟ ವಿಗ್ರಹಗಳನ್ನೂ ತೆಗೆದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ಅಲ್ಲಿಗೆ ಸೇರಿ ಎಲ್ಲಾ ಅಸಹ್ಯವಸ್ತುಗಳನ್ನೂ ಸಮಸ್ತ ಹೇಯವಿಗ್ರಹಗಳನ್ನೂ ಅಲ್ಲಿಂದ ತೆಗೆದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನ ಜನರು ಹಿಂದಕ್ಕೆ ಬಂದಾಗ ದೇಶದಲ್ಲಿರುವ ಎಲ್ಲಾ ಹೊಲಸು ವಿಗ್ರಹಗಳನ್ನು ತೆಗೆದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಅವರು ಅಲ್ಲಿಗೆ ಹಿಂತಿರುಗಿ ಮತ್ತು ಅದರಲ್ಲಿರುವ ಎಲ್ಲಾ ಅನುಪಯುಕ್ತ ಆಕೃತಿಗಳನ್ನು ಮತ್ತು ಅಸಹ್ಯಕರ ವಿಗ್ರಹಗಳನ್ನು ತೆಗೆದುಹಾಕುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:18
14 ತಿಳಿವುಗಳ ಹೋಲಿಕೆ  

ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಅಶುದ್ಧ ಮಾಡಿಕೊಳ್ಳುವುದಿಲ್ಲ. ಅವರು ಪಾಪಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು. ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ, ಅಸಹ್ಯ ವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ನಿನ್ನನ್ನು ಕುಂದಿಸುವೆನು, ನಾನು ನಿನಗೆ ಕರುಣೆ ತೋರಿಸೆನು, ಕಟಾಕ್ಷಿಸೆನು.


ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು; ಇದಲ್ಲದೆ ಹೇಯವೂ, ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದೆನು.


ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು,


ಎಫ್ರಾಯೀಮು, “ವಿಗ್ರಹಗಳ ಗೊಡವೆ ನನಗೆ ಇನ್ನೇಕೆ?” ಎಂದು ಅವುಗಳನ್ನು ತ್ಯಜಿಸುವುದು; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ.


ಆದರೆ ಯಾರ ಮನಸ್ಸು ತಮ್ಮ ಅಸಹ್ಯ ವಸ್ತುಗಳನ್ನೂ, ಅಸಹ್ಯ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಇದು ಕರ್ತನಾದ ಯೆಹೋವನ ನುಡಿ.


ಅವರ ಅಧರ್ಮಕ್ಕೂ, ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯವಿಗ್ರಹಗಳಿಂದ ನನ್ನ ದೇಶವನ್ನು ಹೊಲಸುಮಾಡಿ, ನನ್ನ ಸ್ವತ್ತನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.”


ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ಬೊಂಬೆಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಗಳನ್ನು, “ತೊಲಗಿ ಹೋಗಿರಿ” ಎಂದು ಹೊಲೆಯಾದ ಬಟ್ಟೆಯಂತೆ ಬಿಸಾಡುವಿರಿ.


ಹೀಗಾದರೆ ಇಸ್ರಾಯೇಲ್ ವಂಶದವರು ಇನ್ನು ನನ್ನನ್ನು ತೊರೆಯುವುದಿಲ್ಲ, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆ ಮಾಡಿಕೊಳ್ಳುವುದಿಲ್ಲ; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು” ಇದು ಕರ್ತನಾದ ಯೆಹೋವನ ನುಡಿ.


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು