Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಲ್ಲಿ ದೇವರು ನನಗೆ, “ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಈ ಜನರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಲ್ಲಿ ದೇವರು ನನಗೆ, “ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಈ ಜನರೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಲ್ಲಿ ಆತನು ನನಗೆ - ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಈ ಜನರೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದ ದೇವರು ನನ್ನೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, “ನರಪುತ್ರನೇ, ಈ ಪಟ್ಟಣದಲ್ಲಿ ದುಷ್ಟಯೋಜನೆಗಳನ್ನು ಮಾಡುವವರೂ ಕೆಡುಕಿನ ಸಲಹೆಗಳನ್ನು ನೀಡುವವರೂ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಮೇಲೆ ಯೆಹೋವ ದೇವರು ನನಗೆ, “ಮನುಷ್ಯಪುತ್ರನೇ, ಈ ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ, ದುರಾಲೋಚನೆಗಳನ್ನು ಹೇಳಿಕೊಡುವವರು ಈ ಜನರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:2
12 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆ ನುಡಿಯುತ್ತಾನೆ, “ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ” “ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.


ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತನಾಡುವೆನು; ಯೆಹೋವನ ಮಾರ್ಗವು ಮತ್ತು ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು” ಅಂದುಕೊಂಡೆನು. ಆದರೆ ಈ ದೊಡ್ಡ ಮನುಷ್ಯರು ಒಂದು ಮನಸ್ಸಿನಿಂದ ತಮ್ಮ ಹೆಗಲ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ.


ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ.


ಇವರಲ್ಲಿ ಯಾರೂ ನ್ಯಾಯಸ್ಥಾನಕ್ಕೆ ನ್ಯಾಯವಾಗಿ ಹೋಗುವುದಿಲ್ಲ, ಯಾರೂ ಸತ್ಯವಾಗಿ ವಾದಿಸುವುದಿಲ್ಲ; ಇವರು ಶೂನ್ಯವಾಗಿರುವುದನ್ನು ನಂಬಿಕೊಂಡು ಸುಳ್ಳನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.


ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು.


ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ.


ಎಸ್ತೇರಳು ಪುನಃ ಅರಸನನ್ನು ಮಾತನಾಡಿಸುವುದಕ್ಕೆ ಹೋಗಿ ಅವನ ಪಾದಗಳಿಗೆ ಬಿದ್ದು, ಅಳುತ್ತಾ, “ಅಗಾಗನ ವಂಶದವನಾದ ಹಾಮಾನನು ಯೆಹೂದ್ಯರ ಹಾನಿಗಾಗಿ ಕಲ್ಪಿಸಿದ ದುಷ್ಟ ಯೋಜನೆಗಳನ್ನು, ಅಪಾಯಗಳನ್ನು ನಿವಾರಿಸಬೇಕು” ಎಂದು ವಿಜ್ಞಾಪಿಸಿದಳು.


ಕೇಡಿನ ಮೇಲೆ ಕೇಡು, ಸುದ್ದಿಯ ಮೇಲೆ ಸುದ್ದಿ ಬರುವುದು; ‘ದಿವ್ಯದರ್ಶನವಾಯಿತೇ?’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ, ಸಮಾಲೋಚನೆಯು ಇಲ್ಲವಾಗುವುದು.


ನಿನವೆಯೇ, ಯೆಹೋವನಿಗೆ ವಿರುದ್ಧವಾಗಿ ದುಷ್ಟ ಆಲೋಚನೆ ಮಾಡಿ ಕೇಡನ್ನು ಕಲ್ಪಿಸುವವನು ನಿನ್ನೊಳಗಿಂದ ಹೊರಟಿದ್ದಾನೆ.


ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು