Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೆಹೋವನ ಆತ್ಮವು ನನ್ನಲ್ಲಿ ಆವೇಶ ಉಂಟುಮಾಡಿ, ಹೀಗೆ ಸಾರಬೇಕೆಂದು ಅಪ್ಪಣೆಯಾಯಿತು. ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನೀವು ಹೀಗೆ ಮಾತನಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಸರ್ವೇಶ್ವರನ ಆತ್ಮ ನನ್ನಲ್ಲಿ ಆವೇಶ ಉಂಟುಮಾಡಿತು. ಹೀಗೆ ಸಾರಬೇಕೆಂದು ಅಪ್ಪಣೆ ಆಯಿತು: ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲ್ ವಂಶದವರೇ, ನೀವು ಹೀಗೆ ಮಾತಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಯೆಹೋವನ ಆತ್ಮವು ನನ್ನಲ್ಲಿ ಆವೇಶಿಸಲು ಹೀಗೆ ಸಾರಬೇಕೆಂದು ಅಪ್ಪಣೆಯಾಯಿತು. ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ನೀವು ಹೀಗೆ ಮಾತಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಯೆಹೋವನ ಆತ್ಮನು ನನ್ನ ಮೇಲೆ ಬಂದನು. ಆತನು ಹೇಳಿದ್ದೇನೆಂದರೆ, “ಯೆಹೋವನು ಹೀಗೆ ಹೇಳುತ್ತಾನೆಂದು ಆ ಜನರಿಗೆ ತಿಳಿಸು: ಇಸ್ರೇಲ್ ಮನೆತನವೇ, ನೀನು ದೊಡ್ಡದೊಡ್ಡ ವಿಷಯಗಳನ್ನು ಆಲೋಚಿಸುತ್ತೀ. ನೀನು ಏನೂ ಯೋಚಿಸುತ್ತೀ ಎಂದು ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರ ಆತ್ಮವು ನನ್ನ ಮೇಲೆ ಬಂದು ತಿಳಿಸಲು ಹೇಳಿದ್ದೇನೆಂದರೆ: “ಇಸ್ರಾಯೇಲಿನ ಮನೆತನದವರೇ, ನೀವು ಹೀಗೆ ಹೇಳಿದ್ದೀರಿ. ಏಕೆಂದರೆ ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಎಲ್ಲವುಗಳನ್ನು ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:5
33 ತಿಳಿವುಗಳ ಹೋಲಿಕೆ  

ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ಆತನು ಈ ಮಾತನ್ನು ಹೇಳುವಾಗ ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತನಾಡಿದಾತನ ನುಡಿಯನ್ನು ಕೇಳಿದೆನು.


ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.


“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ.


“ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.


ಯೆಹೋಯಾಖೀನನು ಸೆರೆಯಾದ ಆರನೆಯ ವರ್ಷದ, ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ ಮತ್ತು ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರಾಗಿ ಕುಳಿತಿರಲು ಕರ್ತನಾದ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾದೆನು.


ನಾನು ನಿನ್ನೊಡನೆ ಮತ್ತೆ ಮಾತನಾಡುವಾಗ ನಾನು ನಿನ್ನ ಬಾಯಿಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಹೇಳಬೇಕು; ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ; ಅವರು ತಿರುಗಿ ಬೀಳುವ ವಂಶದವರೇ.”


ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿದ ಮೇಲೆ ಆತನು ನನಗೆ ಹೀಗೆ ಹೇಳಿದನು, “ನೀನು ಹೋಗಿ ನಿನ್ನ ಮನೆಯೊಳಗೆ ಅಡಗಿಕೋ.


ಸೆರೆಯಾಗಿರುವ ನಿನ್ನ ಸ್ವಂತ ಜನರ ಬಳಿಗೆ ಹೋಗಿ ಅವರು ಕೇಳಿದರೂ, ಕೇಳದೆ ಹೋದರೂ ಅವರನ್ನು ಉದ್ದೇಶಿಸಿ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಅವರಿಗೆ ಸಾರು.”


ಅವರು ಕೇಳಿದರೂ, ಕೇಳದೆ ಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿ ದ್ರೋಹಿಗಳೇ.”


ನಾನು ಅವರ ನಡತೆಯನ್ನೆಲ್ಲಾ ದೃಷ್ಟಿಸುತ್ತೇನೆ, ಅದು ನನ್ನ ಮುಖಕ್ಕೆ ಮರೆಯಾಗಿಲ್ಲ; ಅವರ ಅಧರ್ಮವು ನನಗೆ ಗುಟ್ಟಾಗಿ ಇಲ್ಲ, ಪ್ರತ್ಯಕ್ಷವಾಗೇ ಇದೆ.


ಸ್ವರವೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.


ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ.


ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.


ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಅವನು ದೇವಗಿರಿಗೆ ಬಂದ ಕೂಡಲೆ ಪರವಶವಾದ ಪ್ರವಾದಿಸಮೂಹವು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮವು ಸೌಲನ ಮೇಲೆ ಬಂದ್ದದರಿಂದ ಅವನೂ ಪರವಶನಾಗಿ ಅವರೊಂದಿಗೆ ಸೇರಿ ಪ್ರವಾದಿಸಿದನು.


ಆಗ ಯೆಹೋವನ ಆತ್ಮವು ನಿನ್ನ ಮೇಲೆಯೂ ಬರುವುದರಿಂದ ನೀನೂ ಅವರೊಂದಿಗೆ ಪ್ರವಾದಿಸುವಿ. ನೀನು ಮಾರ್ಪಟ್ಟ ಮನುಷ್ಯನಾಗುವಿ.


ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ.


ನಾನು ಮಾತನಾಡುವುದಕ್ಕೆ ಪ್ರಾರಂಭಿಸಿದಾಗ, ಪವಿತ್ರಾತ್ಮವು ಮೊದಲು ನಮ್ಮ ಮೇಲೆ ಇಳಿದಂತೆ ಅವರ ಮೇಲೆಯೂ ಇಳಿಯಿತು.


ಪೇತ್ರನು, ಈ ವಾಕ್ಯಗಳನ್ನು ಇನ್ನೂ ಹೇಳುತ್ತಿರುವಾಗಲೇ, ಅವನ ವಾಕ್ಯಗಳನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮನು ಇಳಿದನು.


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.


ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ?


ಹೃದಯವನ್ನೂ, ಅಂತರಿಂದ್ರಿಯವನ್ನೂ ಪರೀಕ್ಷಿಸಿ, ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆಮಾಡಿದ್ದೇನಷ್ಟೆ ಎಂದು ಹೇಳಿದೆನು.


“ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಖಂಡಿತ ನೆರವೇರುವುದಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು