Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದನ್ನೂ ನುಡಿ, ‘ನಾನು ನಿಮಗೆ ಗುರುತಾಗಿದ್ದೇನೆ; ನಾನು ಮಾಡಿದಂತೆಯೇ ಅವರಿಗಾಗುವುದು; ಅವರು ವಲಸೆಯಾಗಿ ಸೆರೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದನ್ನೂ ನುಡಿ, - ‘ನಾನು ನಿಮಗೆ ಮುಂಗುರುತಾಗಿದ್ದೇನೆ. ನಾನು ಮಾಡಿದಂತೆಯೇ ಅವರಿಗಾಗುವುದು: ಅವರು ವಲಸೆಯಾಗಿ ಸೆರೆಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದನ್ನೂ ನುಡಿ - ನಾನು ನಿಮಗೆ ಮುಂಗುರುತಾಗಿದ್ದೇನೆ; ನಾನು ಮಾಡಿದಂತೆಯೇ ಅವರಿಗಾಗುವದು; ಅವರು ವಲಸೆಯಾಗಿ ಸೆರೆಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ‘ನೀನು ಅವರಿಗೆ ಹೀಗೆ ಹೇಳು: ನಾನು ನಿಮಗೆ ಒಂದು ಸೂಚನೆಯಾಗಿದ್ದೇನೆ. ನಾನು ಮಾಡಿದ ಸೂಚಕಕಾರ್ಯ ಖಂಡಿತವಾಗಿ ನಿಮಗೆ ಸಂಭವಿಸುವುದು. ನೀವು ದೂರದೇಶಕ್ಕೆ ಸೆರೆಯಾಳುಗಳಾಗಿ ಹೋಗುವಿರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರಿಗೆ ಹೀಗೆ ಹೇಳು, ‘ನಾನು ನಿಮಗೆ ಗುರುತಾಗಿದ್ದೇನೆ.’ “ನಾನು ಮಾಡಿದ ಹಾಗೆ ಅವರಿಗೆ ಮಾಡಲಾಗುವುದು. ಅವರು ಗುಲಾಮರಾಗಿ ಸೆರೆಗೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:11
11 ತಿಳಿವುಗಳ ಹೋಲಿಕೆ  

ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಕೇವಲ ದಿಕ್ಕಿಲ್ಲದವರಲ್ಲಿ ಅನೇಕರನ್ನೂ, ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ಬಾಬೆಲಿನ ಅರಸನ ಮೊರೆಹೊಕ್ಕವರನ್ನೂ ಮತ್ತು ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.


ಅವರು, ‘ನಾವು ಎಲ್ಲಿಗೆ ಹೋಗೋಣ?’ ಎಂದು ನಿನ್ನನ್ನು ಕೇಳಲು ನೀನು ಅವರಿಗೆ, ‘ಮರಣ ವ್ಯಾಧಿಗೆ ನೇಮಿತರಾದವರು ಮರಣವ್ಯಾಧಿಗೆ, ಖಡ್ಗಕ್ಕೆ ನೇಮಿತರಾದವರು ಖಡ್ಗಕ್ಕೆ ಬಲಿಯಾಗಲಿ. ಕ್ಷಾಮಕ್ಕೆ ನೇಮಿತರಾದವರು ಕ್ಷಾಮಕ್ಕೆ, ಸೆರೆಗೆ ನೇಮಿತರಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ’” ಎಂದು ಹೇಳು.


ಅವರ ಕಣ್ಣ ಮುಂದೆ, ಅದನ್ನು ಹೆಗಲ ಮೇಲೆ ಹಾಕಿ, ಕತ್ತಲಲ್ಲಿ ಹೊತ್ತುಕೊಂಡು ಹೋಗು; ನೆಲವನ್ನು ನೋಡದಂತೆ ಮುಖವನ್ನು ಮುಚ್ಚಿಕೋ; ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಗುರುತನ್ನಾಗಿ ಮಾಡಿದ್ದೇನೆ.”


ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು ಅದನ್ನು ನಿನಗೂ ಮತ್ತು ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಿಗೆ ಹಾಕಲ್ಪಡುವುದು, ನೀನು ಅದನ್ನು ಮುತ್ತಿಗೆ ಹಾಕಿದಂತಾಗುವುದು. ಇದು ಇಸ್ರಾಯೇಲ್ ವಂಶದವರಿಗೆ ಒಂದು ಗುರುತು.


“ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೆ ಹೊರಡು ಅಂದರೆ ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿ ವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು.


ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಕೇಳಿರಿ. ಇಗೋ, ಮೊಳಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೆನೆಂಬುದಕ್ಕೆ ಇವರೇ ಮುಂಗುರುತು.


ಚಿದ್ಕೀಯನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರಲ್ಲದೆ ಅವನಿಗೆ ಬೇಡಿಹಾಕಿ, ಅವನ ಎರಡು ಕಣ್ಣುಗಳನ್ನು ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಒಟ್ಟಾರೆ ಎಲ್ಲಾ ಜನರನ್ನು ಸೆರೆಹಿಡಿದೊಯ್ದನು.


ಮುತ್ತಿಗೆಗೆ ಈಡಾದ ಜನವೇ, ಗಂಟುಕಟ್ಟಿಕೊಂಡು ದೇಶದೊಳಗಿಂದ ನಡೆ.


“ನರಪುತ್ರನೇ, ನೀನು ಒಂದು ಇಟ್ಟಿಗೆಯನ್ನು ತೆಗೆದುಕೊಂಡು ನಿನ್ನ ಮುಂದಿಟ್ಟುಕೊಂಡು, ಅದರ ಮೇಲೆ ಯೆರೂಸಲೇಮ್ ಪಟ್ಟಣದ ನಕ್ಷೆಯನ್ನು ಬರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು