Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಗೋ, ಗೋಡೆಯು ಬಿದ್ದ ಮೇಲೆ, ‘ನೀವು ಬಳಿದ ಸುಣ್ಣ ಎಲ್ಲಿ?’ ಎಂದು ನಿಮ್ಮನ್ನು ಕೇಳುವರಲ್ಲವೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇಗೋ, ಗೋಡೆ ಬಿದ್ದ ಮೇಲೆ, ‘ನೀವು ಬಳಿದ ಸುಣ್ಣ ಎಲ್ಲಿ?’ ಎಂದು ನಿಮ್ಮನ್ನು ಕೇಳುವರಲ್ಲವೆ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಗೋ, ಗೋಡೆಯು ಬಿದ್ದ ಮೇಲೆ ನೀವು ಬಳಿದ ಸುಣ್ಣ ಎಲ್ಲಿ ಎಂದು ನಿಮ್ಮನ್ನು ಕೇಳುವರಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಗೋಡೆಯು ಬಿದ್ದಾಗ ಜನರು ಪ್ರವಾದಿಗಳಾದ ನಿಮ್ಮನ್ನು, ‘ನೀವು ಗೋಡೆಗೆ ಹಾಕಿದ ಗಾರೆ ಏನಾಯಿತು?’” ಎಂದು ಪ್ರಶ್ನಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಗೋಡೆ ಬಿದ್ದುಹೋದ ಮೇಲೆ, ನೀವು ಹಚ್ಚಿದ ಸುಣ್ಣ ಎಲ್ಲಿ?” ಎಂದು ನಿಮಗೆ ಕೇಳುವರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:12
11 ತಿಳಿವುಗಳ ಹೋಲಿಕೆ  

ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬರುವುದಿಲ್ಲ ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?


ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ.


ಎಲೀಷನು ಇಸ್ರಾಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು” ಎಂದು ಹೇಳಿದನು. ಅದಕ್ಕೆ ಇಸ್ರಾಯೇಲರ ಅರಸನು, “ಹಾಗೆ ಹೇಳಬೇಡ, ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೇ?” ಎಂದನು.


ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮನ್ನು ಈ ಇಕ್ಕಟ್ಟಿನಿಂದ ಬಿಡಿಸಲಿ” ಅಂದನು.


ಆಗ ಜೆಬುಲನು ಅವನಿಗೆ, “ಈಗ ನಿನ್ನ ಬಾಯೆಲ್ಲಿದೆ? ಅಬೀಮೆಲೆಕನು ಎಷ್ಟರವನು? ನಾವು ಅವನನ್ನು ಯಾಕೆ ಸೇವಿಸಬೇಕು ಎಂದು ಕೊಚ್ಚಿಕೊಂಡಿಯಲ್ಲಾ; ಅವರು ನೀನು ತಿರಸ್ಕರಿಸಿದ ಜನರಲ್ಲವೋ? ಹಾಗಾದರೆ ಹೋಗಿ ಅವರೊಡನೆ ಯುದ್ಧಮಾಡು, ನೋಡೋಣ” ಎಂದು ಹೇಳಿದನು.


ಯೆಹೋವನು ಅವರ ವಿಷಯದಲ್ಲಿ ಹೇಳುವುದು ಏನೆಂದರೆ, “ಅವರು ಪೂಜಿಸುತ್ತಿದ್ದ ದೇವರುಗಳು ಎಲ್ಲಿ ಹೋದರು? ಅವರು ಆಶ್ರಯಿಸಿಕೊಂಡಿದ್ದ ಆಶ್ರಯದುರ್ಗನು ಎಲ್ಲಿದ್ದಾನೆ?


ಆಕೆ ಅದನ್ನು ಇನ್ನು ಹೆಚ್ಚುಕಾಲ ಮರೆಮಾಡಲಾಗದೆ, ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು ಜೇಡಿಮಣ್ಣನ್ನೂ ರಾಳವನ್ನು ಹಚ್ಚಿ, ಕೂಸನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿರುವ ಜಂಬುಹುಲ್ಲಿನಲ್ಲಿ ಇಟ್ಟಳು.


ಆದಕಾರಣ, ನೀನು ಸುಣ್ಣಬಳಿಯುವವರಿಗೆ ಹೀಗೆ ನುಡಿ, ‘ವಿಪರೀತ ಮಳೆಯಾಗಿ ಗೋಡೆಯು ಬಿದ್ದುಹೋಗುವುದು, ಆನೆಕಲ್ಲುಗಳು ಸುರಿಯುವವು; ಬಿರುಗಾಳಿಯು ಗೋಡೆಯನ್ನು ಒಡೆದುಹಾಕುವುದು.’


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “‘ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಒಡೆದುಹಾಕುವೆನು; ಅದನ್ನು ನಾಶ ಮಾಡಲಿಕ್ಕೆ ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು, ನನ್ನ ರೋಷದಿಂದ ಆನೆಕಲ್ಲುಗಳು ಸುರಿಯುವವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು