Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು; ಯೆಹೋವನು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರ ಇಂತೆನ್ನುತ್ತಾರೆಂದು ನುಡಿ: ಅಂಥವರಿಗೆ ಆದ ದರ್ಶನ ಮಿಥ್ಯ; ಕೇಳಿಸಿದ ವಾಣಿ ಸುಳ್ಳು; ಸರ್ವೇಶ್ವರ ಅವರನ್ನು ಕಳುಹಿಸಲಿಲ್ಲ. ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯುವವರಿಗೆ ಆದ ದರ್ಶನ ವಿುಥ್ಯ, ಕೇಳಿಸಿದ ಕಣಿ ಸುಳ್ಳು; ಯೆಹೋವನು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವದೆಂದು ಸುಮ್ಮ ಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “‘ಅವರನ್ನು ಯೆಹೋವನು ಕಳುಹಿಸಿಲ್ಲದಿದ್ದರೂ ಅವರು, “ಯೆಹೋವನು ಇದನ್ನು ಹೇಳಿದ್ದಾನೆ” ಎನ್ನುತ್ತಾರೆ. ಅವರು ಮಾಟಮಂತ್ರ ಮಾಡಿ ಇಂತಿಂಥದ್ದು ಸಂಭವಿಸುವುದು ಎಂದು ಸುಳ್ಳು ಹೇಳುತ್ತಾರೆ. ದೇವರು ನಮ್ಮನ್ನು ಕಳುಹಿಸಿದ್ದು ಎಂದು ಸುಳ್ಳು ಹೇಳುವರು. ಅವರು ತಮ್ಮ ಸುಳ್ಳು ನಿಜವಾಗುತ್ತಿರುವದನ್ನು ನೋಡಲು ಕಾಯುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಯೆಹೋವ ದೇವರು ಇಂತೆನ್ನುತ್ತಾರೆ,” ಎಂದು ನುಡಿ: ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು, ಯೆಹೋವ ದೇವರು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:6
28 ತಿಳಿವುಗಳ ಹೋಲಿಕೆ  

ಅಲ್ಲಿನ ಸುಳ್ಳು ಪ್ರವಾದಿಗಳು ಇವರಿಗಾಗಿ ವ್ಯರ್ಥ ದರ್ಶನವನ್ನೂ, ಸುಳ್ಳು ಕಣಿಯನ್ನೂ ಕಂಡು ಯೆಹೋವನು ಅವರೊಂದಿಗೆ ಮಾತನಾಡದಿದ್ದರೂ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿಯುತ್ತಾ ಮೇಲೆ ಸುಣ್ಣ ಹಚ್ಚುತ್ತಾರೆ.


ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ.


ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ, “ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.


ಅಮ್ಮೋನೇ, ಪ್ರವಾದಿಗಳೆಂದು ಹೇಳಿಕೊಳ್ಳುತ್ತಿರುವ ನಿನ್ನವರು ದರ್ಶನವನ್ನು ನೋಡಿದೆವು ಎಂದು ಸುಳ್ಳು ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಸಮಯವು ಹತ್ತಿರವಾಗಿ, ಅಪರಾಧದ ಕಡೆಗಾಲವು ಸಂಭವಿಸಿ, ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿ ಬೀಳುವೆ.


ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬರುವುದಿಲ್ಲ ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?


ವಿಗ್ರಹಗಳು ನುಡಿಯುವುದು ಸುಳ್ಳು; ಕಣಿಹೇಳುವವರು ದರ್ಶನವನ್ನು ಕಾಣುವುದು ಸುಳ್ಳು, ತಿಳಿಸುವ ಕನಸುಗಳು ಮೋಸವಾದವುಗಳು, ಹೇಳುವ ಸಮಾಧಾನವು ವ್ಯರ್ಥ. ಆದುದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.


ಆಗ ಯೆಹೋವನು ನನಗೆ ಹೀಗೆ ನುಡಿದನು, “ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.


ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.


ಇದೇ ಕಾರಣದಿಂದ ದೇವರು ಗಾಢಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಒಳಪಡಿಸುತ್ತಾನೆ.


ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು, ‘ನಾನೇ ಕ್ರಿಸ್ತನು’ ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು.


ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸವಿಟ್ಟು, ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವನು ಅವರ ಅಧರ್ಮವನ್ನು ಬಯಲಿಗೆ ತರಲು ಅವನ ಕೈಗೆ ಸಿಕ್ಕಿಬೀಳುವರು.”


ನಾನು ಮಾತನಾಡದೆ ಹೋದರೂ, ‘ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನವು ಮಿಥ್ಯ, ನೀವು ಹೇಳಿದ ಕಣಿಯು ಸುಳ್ಳು.


ನಿನ್ನ ಪ್ರವಾದಿಗಳು ಕಂಡ ದರ್ಶನ, ಹೇಳಿದ ಪ್ರವಾದನೆಯ ವಾಕ್ಯಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದ ಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವುದಕ್ಕೆ ಆಸ್ಪದವಾದವು.


ನೀನು ಸೆರೆಯವರೆಲ್ಲರಿಗೆ ಹೀಗೆ ಹೇಳಿ ಕಳುಹಿಸು, “ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ನಾನು ಕಳುಹಿಸದೆ ಹೋದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳಿನಲ್ಲಿ ನಂಬಿಕೆಯನ್ನು ಹುಟ್ಟಿಸಿದ ಕಾರಣ ಇಗೋ,


“ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ಬಾಬೆಲಿನ ಅರಸರು ನಿಮಗೆ ಹೇರಿರುವ ನೊಗವನ್ನು ಮುರಿದುಬಿಟ್ಟಿದ್ದೇನೆ.


ಮೂಢನು ಯಾವ ಮಾತನ್ನಾದರೂ ನಂಬುವನು, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.


ಅರಸನು ಸಾಯಲು ಅವನನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿ ಮಾಡಿದರು.


‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.


ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?” ಎಂದು ಕೇಳಲು ಅವರು, “ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಸೇನಾಧೀಶ್ವರನಾದ ಯೆಹೋವನು, “ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಮನಸ್ಸಿಗೆ ಬಂದದ್ದನ್ನೇ ಹೇಳುತ್ತಾರೆ.


ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ಹೇಳಿ, “ರಾಮೋತ್ ಗಿಲ್ಯಾದಿಗೆ ಹೋಗು ನೀನು ಸಫಲನಾಗಿ ಬರುವಿ. ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.


ಅವನು ಅರಸನ ಬಳಿಗೆ ಬಂದಾಗ ಅರಸನು, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ, ಹೋಗಬಾರದೋ?” ಎಂದು ಕೇಳಲು ಅವನು, “ಹೋಗಬಹುದು, ಸಫಲನಾಗುವಿ, ಯೆಹೋವನು ಪಟ್ಟಣವನ್ನು ಅರಸನ ಕೈಗೆ ಒಪ್ಪಿಸುವನು” ಎಂದು ಹೇಳಿದನು.


ಅದೇ ವರ್ಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು