Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನ ಮೇಲೆ ಉಗ್ರಕೋಪಗೊಂಡು, ಅವನನ್ನು ಎಚ್ಚರಿಕೆಗೆ ಗುರುತಾಗಿಯೂ, ಕಟ್ಟು ಗಾದೆಗಳಿಗೂ ವಸ್ತುವಾಗಿ ಮಾಡಿ, ನನ್ನ ಜನರೊಳಗಿಂದ ಕಿತ್ತುಹಾಕುವೆನು; ಹೀಗೆ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನಿಗೆ ವಿಮುಖನಾಗಿ ಅವನ ದುರ್ಗತಿಯು ಎಚ್ಚರಿಕೆಗೆ ಗುರುತಾಗಿಯೂ ಕಟ್ಟುಗಾದೆಗಳಿಗೆ ವಸ್ತುವಾಗಿಯೂ ಆಗುವಂತೆ ಮಾಡುವೆನು; ಅವನನ್ನು ನನ್ನ ಜನರಿಂದ ಹೊರಹಾಕುವೆನು; ಹೀಗೆ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನ ಮೇಲೆ ಉಗ್ರಕೋಪಗೊಂಡು ಅವನ ಗತಿಯನ್ನು ಬೆರಗಿಗೂ ಎಚ್ಚರಿಕೆಯ ಮಾತುಗಳಿಗೂ ಕಟ್ಟುಗಾದೆಗಳಿಗೂ ಈಡುಮಾಡಿ ಅವನನ್ನು ನನ್ನ ಜನರೊಳಗಿಂದ ಕಿತ್ತುಹಾಕುವೆನು; ಹೀಗೆ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಅವನ ವಿರುದ್ಧವಾಗಿ ತಿರುಗಿ ಅವನನ್ನು ನಾಶಮಾಡುವೆನು. ಅವನು ಇಸ್ರೇಲರಿಗೆ ನಿದರ್ಶನವಾಗಿರಬೇಕು, ಜನರು ಅವನನ್ನು ನೋಡಿ ನಗಾಡುವರು. ನಾನು ಅವನನ್ನು ನನ್ನ ಜನರ ಮಧ್ಯದಿಂದ ತೆಗೆದು ಬಿಡುವೆನು. ಆಗ ನೀವು ನಾನೇ ಯೆಹೋವನೆಂದು ತಿಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಅಂಥವನ ಮೇಲೆ ಬಹುಕೋಪಗೊಂಡು, ಅವನನ್ನು ಗುರುತನ್ನಾಗಿಯೂ, ಗಾದೆಯನ್ನಾಗಿಯೂ ಮಾಡಿ, ನನ್ನ ಜನರ ಮಧ್ಯದೊಳಗಿಂದ ತೆಗೆದುಬಿಡುವೆನು. ಹೀಗೆ ನಾನೇ ಯೆಹೋವ ದೇವರು ಎಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:8
25 ತಿಳಿವುಗಳ ಹೋಲಿಕೆ  

ಅವರ ಮೇಲೆ ಕೋಪ ದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ, ಬೆಂಕಿಯು ಅವರನ್ನು ನುಂಗಿಬಿಡುವುದು; ನಾನು ಅವರ ಮೇಲೆ ಕೋಪ ದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.


“ನಾನು ಕೋಪದಿಂದಲೂ, ರೋಷದಿಂದಲೂ, ಕಠಿಣವಾದ ಖಂಡನೆಯಿಂದಲೂ, ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ, ಪರಿಹಾಸ್ಯಗಳಿಗೂ, ಬುದ್ಧಿವಾದಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.


“ಆದಕಾರಣ ಇಸ್ರಾಯೇಲಿನ ದೇವರೂ, ಸೇನಾಧೀಶ್ವರನು ಆದ ಯೆಹೋವನು ಹೀಗೆನ್ನುತ್ತಾನೆ, ಆಹಾ, ಯೆಹೂದವನ್ನೆಲ್ಲಾ ನಿರ್ಮೂಲಮಾಡುವೆನು, ಕೇಡಿಗಾಗಿಯೇ ನಿಮ್ಮ ಮೇಲೆ ದೃಷ್ಟಿಯಿಡುವೆನು.


ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವುವು; ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.


ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವುದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.


ಯೆಹೋವನು ನಿಮ್ಮನ್ನು ನಡೆಸುವ ಜನಾಂಗಗಳಲ್ಲಿ ನೀವು ಭೀಕರತೆಗೂ, ಗಾದೆಗೂ ಮತ್ತು ಪರಿಹಾಸ್ಯಕ್ಕೂ ಗುರಿಯಾಗುವಿರಿ.


“‘ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು ಎಚ್ಚರಿಕೆಯ ಮಾತುಗಳಾಗಿ ಬರೆದಿವೆ.


ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.


ಆದಕಾರಣ ನೀವು ಮಿಥ್ಯ ದರ್ಶನವನ್ನು ಹೊಂದಿ, ಕಣಿಹೇಳುವ ಕೆಲಸವು ಇನ್ನು ನಡೆಯುವುದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು, ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.”


ಇವರ ಚರಿತ್ರೆಯನ್ನು ಬಾಬೆಲಿನಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಶಪಿಸುವ ಮಾತಾಗಿ ತೆಗೆದುಕೊಂಡು ‘ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ’ ಎಂದು ಶಪಿಸುವರು.


ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.


ಮೇಲಿಗಲ್ಲ, ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವುದು, ಅವನು ಅದನ್ನು ಸುಟ್ಟುಬಿಡುವನು; ಇದು ಯೆಹೋವನ ನುಡಿ.”


ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು.


ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.


ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲರಿಗೆ ಎಚ್ಚರಿಕೆಯನ್ನು ಉಂಟುಮಾಡಿತು.


ಅಶುದ್ಧನಾಗಿ ದೋಷಪರಿಹಾರ ಮಾಡಿಕೊಳ್ಳದವನು ಯೆಹೋವನ ಆಲಯವನ್ನು ಅಪವಿತ್ರಪಡಿಸಿದ ಕಾರಣ ಸಭೆಯಿಂದ ತೆಗೆಯಲ್ಪಡಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಹೋದುದರಿಂದ ಅವನು ಅಶುದ್ಧನಾಗುವನು.


ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.


ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು, ‘ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ಸಂತತಿಯವರಲ್ಲಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ, ಅವನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆದು ಹಾಕಬೇಕು; ನಾನು ಯೆಹೋವನು.


ತಮ್ಮ ಪಾಪಗಳಿಂದ ಪ್ರಾಣವನ್ನು ಕಳೆದುಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತಂದ ಕಾರಣ ಅವು ಪರಿಶುದ್ಧವಾದವು. ಆದುದರಿಂದ ಅವುಗಳನ್ನು ತಗಡುಗಳನ್ನಾಗಿ ಮಾಡಿ, ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಬೇಕು. ಇಸ್ರಾಯೇಲರಿಗೆ ಅವು ಗುರುತುಗಳಾಗಿರಬೇಕು” ಎಂದು ಹೇಳಿದನು.


ಇವು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಯಾವಾಗಲೂ ಪ್ರಾಪ್ತವಾಗುತ್ತಾ ಎಲ್ಲರಿಗೂ ಎಚ್ಚರಿಕೆಯನ್ನೂ ಮತ್ತು ಬೆರಗನ್ನೂ ಉಂಟುಮಾಡುವವು.


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, ‘ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು’ ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ಮತ್ತು ನಿರ್ದೋಷಿಗಳಿಗೂ ನಾಶನವನ್ನು ಉಂಟುಮಾಡುವವನಾಗಿರುತ್ತಾನೆ.


ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು