Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 15:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರ ಮೇಲೆ ಕೋಪ ದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ, ಬೆಂಕಿಯು ಅವರನ್ನು ನುಂಗಿಬಿಡುವುದು; ನಾನು ಅವರ ಮೇಲೆ ಕೋಪ ದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾನವರ ಮೇಲಿಡುವೆನು ಕೋಪ ದೃಷ್ಟಿಯನ್ನು; ಬೆಂಕಿಯಿಂದ ತಪ್ಪಿಸಿಕೊಂಡರೂ ನುಂಗಿಬಿಡುವುದು ಅದು ಅವರನ್ನು. ನಾನವರ ಮೇಲೆ ಕೋಪ ದೃಷ್ಟಿಯನ್ನಿಟ್ಟಾಗ ನಾನೇ ಸರ್ವೇಶ್ವರನೆಂದು ನಿಮಗೆ ಮನದಟ್ಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರ ಮೇಲೆ ಕೋಪದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ ಬೆಂಕಿಯು ಅವರನ್ನು ನುಂಗಿಬಿಡುವದು; ನಾನು ಅವರ ಮೇಲೆ ಕೋಪದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನಾನು ಅವರನ್ನು ದಂಡಿಸುವೆನು. ಅವರು ಒಂದು ಬೆಂಕಿಯಿಂದ ತಪ್ಪಿಸಿಕೊಂಡರೂ ಮತ್ತೊಂದು ಬೆಂಕಿಯಿಂದ ಸುಟ್ಟುಹೋಗುವರು. ನಾನು ಅವರನ್ನು ದಂಡಿಸಿದಾಗ, ನಾನೇ ಯೆಹೋವನೆಂದು ನೀನು ತಿಳಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಬೆಂಕಿಯೊಳಗಿಂದ ಹೊರಗೆ ಬಂದು ತಪ್ಪಿಸಿಕೊಂಡರೂ, ಮತ್ತೊಂದು ಬೆಂಕಿಯು ಅವರನ್ನು ದಹಿಸಿಬಿಡುವುದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ, ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 15:7
22 ತಿಳಿವುಗಳ ಹೋಲಿಕೆ  

ಅವನ ಮೇಲೆ ಉಗ್ರಕೋಪಗೊಂಡು, ಅವನನ್ನು ಎಚ್ಚರಿಕೆಗೆ ಗುರುತಾಗಿಯೂ, ಕಟ್ಟು ಗಾದೆಗಳಿಗೂ ವಸ್ತುವಾಗಿ ಮಾಡಿ, ನನ್ನ ಜನರೊಳಗಿಂದ ಕಿತ್ತುಹಾಕುವೆನು; ಹೀಗೆ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.


ಭಯದ ಸಪ್ಪಳದಿಂದ ಓಡಿ ಹೋಗುವವನು ಗುಂಡಿಯಲ್ಲಿ ಬೀಳುವನು, ಗುಂಡಿಯನ್ನು ಹತ್ತಿ ಬರುವವನು ಬಲೆಗೆ ಸಿಕ್ಕುವನು. ನೋಡು, ಆಕಾಶದ ದ್ವಾರಗಳು ತೆರೆದಿವೆ, ಭೂಮಿಯ ಅಸ್ತಿವಾರಗಳು ಕಂಪಿಸುತ್ತಿವೆ.


ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.


ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವುವು; ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.


ಮೇಲಿಗಲ್ಲ, ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವುದು, ಅವನು ಅದನ್ನು ಸುಟ್ಟುಬಿಡುವನು; ಇದು ಯೆಹೋವನ ನುಡಿ.”


ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು. ಅವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.


ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.


ಸಿಂಹದ ಕಡೆಯಿಂದ ಓಡಿದವನಿಗೆ, ಕರಡಿಯು ಎದುರುಬಿದ್ದಂತಾಗುವುದು, ಅವನು ಮನೆಗೆ ಓಡಿಬಂದು, ಕೈಯನ್ನು ಗೋಡೆಯ ಮೇಲೆ ಇಡಲು, ಹಾವು ಕಚ್ಚಿದ ಹಾಗಾಗುವುದು.


ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ, ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ದಂಡಿಸದೆ, ನನ್ನ ಹೆಸರಿನ ನಿಮಿತ್ತವೇ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು” ಇದು ಕರ್ತನಾದ ಯೆಹೋವನ ನುಡಿ.


ನಾನು ಪ್ರಮಾಣಮಾಡಿ, ನಿಮ್ಮ ಪೂರ್ವಿಕರಿಗೆ ಯಾವ ದೇಶವನ್ನು ಕೊಟ್ಟೆನೋ, ಆ ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ಬರಮಾಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.


ನನಗೆ ತಿರುಗಿ ಬಿದ್ದು ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಕಳುಹಿಸಿ ಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರು ಮಾಡಿದರೂ, ಅವರು ಇಸ್ರಾಯೇಲ್ ದೇಶಕ್ಕೆ ಸೇರುವುದೇ ಇಲ್ಲ; ನಾನೇ ಯೆಹೋವನು” ಎಂದು ನಿಮಗೆ ಗೊತ್ತಾಗುವುದು.


ನೀವು ಖಡ್ಗಕ್ಕೆ ತುತ್ತಾಗುವಿರಿ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು, ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ


“‘ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.”


ಆದುದರಿಂದ ಯೆರೂಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು ಇದು ಕರ್ತನಾದ ಯೆಹೋವನ ನುಡಿ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವನ ವೃಕ್ಷಗಳಲ್ಲಿ ದ್ರಾಕ್ಷಿಯ ಗಿಡವನ್ನು ನಾನು ಹೇಗೆ ಬೆಂಕಿಗೆ ಸೌದೆಯನ್ನಾಗಿ ಕೊಟ್ಟಿದ್ದೇನೋ, ಹಾಗೆಯೇ ನಾನು ಯೆರೂಸಲೇಮಿನವರನ್ನು ವಿನಾಶಕ್ಕೆ ಗುರಿಮಾಡಿದ್ದೇನೆ.


ಆದರೆ ಆ ಲತೆಯು ರೋಷದಲ್ಲಿ ಕೀಳಲ್ಪಟ್ಟು, ನೆಲದ ಮೇಲೆ ಬಿಸಾಡಲ್ಪಟ್ಟಿತು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿ ಕೊಂಬೆಗಳು ಮುರಿದು ಒಣಗಿ ಹೋದವು, ಬೆಂಕಿಯು ಅವುಗಳನ್ನು ನುಂಗಿತು.


ಅವರು ನಡೆಸಿದ ಬಹು ದುರಾಚಾರಗಳ ನಿಮಿತ್ತ ನಾನು ದೇಶವನ್ನು ಹಾಳುಮಾಡಿದಾಗ ನಾನೇ ಯೆಹೋವನು” ಎಂದು ಅವರಿಗೆ ದೃಢವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು