Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಮೂರ್ತಿಗಳಿಗೆ ಹೊದಿಸಿ, ಅವುಗಳ ಮುಂದೆ ನನ್ನ ತೈಲವನ್ನೂ ನನ್ನ ಧೂಪವನ್ನೂ ಅರ್ಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಿನ್ನ ಕಸೂತಿಯ ವಸ್ತ್ರಗಳನ್ನು ತೆಗೆದು ಮೂರ್ತಿಗಳಿಗೆ ಹೊದಿಸಿ, ಅವುಗಳಿಗೆ ನನ್ನ ತೈಲವನ್ನೂ ನನ್ನ ಧೂಪವನ್ನೂ ಅರ್ಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಮೂರ್ತಿಗಳಿಗೆ ಹೊದಿಸಿ ಅವುಗಳ ಮುಂದೆ ನನ್ನ ತೈಲವನ್ನೂ ನನ್ನ ಧೂಪವನ್ನೂ ಅರ್ಪಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಂತರ ನೀನು ಅಂದವಾದ ಬಟ್ಟೆಯಿಂದ ಆ ವಿಗ್ರಹಗಳಿಗೆ ಹೊದಿಸಿದೆ. ನಾನು ನಿನಗೆ ಕೊಟ್ಟಿದ್ದ ಧೂಪ, ಪರಿಮಳದ್ರವ್ಯವನ್ನು ನೀನು ಆ ವಿಗ್ರಹಗಳ ಮುಂದೆ ಹಾಕಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು, ಅವರಿಗೆ ಹೊದಿಸಿ, ನನ್ನ ಎಣ್ಣೆಯನ್ನೂ, ಧೂಪವನ್ನೂ ಅವರ ಮುಂದೆ ಇಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:18
9 ತಿಳಿವುಗಳ ಹೋಲಿಕೆ  

ನೋಹ, ದಾನಿಯೇಲ, ಯೋಬ ಎಂಬ ಮೂವರು ಪುರುಷರು ಆ ದೇಶದಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು” ಇದು ಕರ್ತನಾದ ಯೆಹೋವನ ನುಡಿ.


ಇದಲ್ಲದೆ ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲಪ್ರಾಣಿಯ ಕೆಂಪು ಚರ್ಮದ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರು ಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.


ಮತ್ತು ನಾನು ನನ್ನ ಬೆಳ್ಳಿ ಬಂಗಾರದಿಂದ ನಿನಗೆ ಮಾಡಿಸಿಕೊಟ್ಟಿದ್ದ ನಿನ್ನ ಚಂದವಾದ ಆಭರಣಗಳನ್ನು ನೀನು ತೆಗೆದು ಅವುಗಳಿಂದ ಪುರುಷ ಮೂರ್ತಿಗಳನ್ನು ರೂಪಿಸಿಕೊಂಡು ಅವುಗಳೊಡನೆ ವ್ಯಭಿಚಾರ ಮಾಡಿದೆ.


ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ, ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು ಇವುಗಳನ್ನೂ ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದೆ; ಅಯ್ಯೋ, ಹೀಗಾಯಿತಲ್ಲ!” ಇದು ಕರ್ತನಾದ ಯೆಹೋವನ ನುಡಿ.


“ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ, ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.


ಅವರ ನೈವೇದ್ಯಗಳ ಕೊಬ್ಬನ್ನು ತಿಂದು ಮತ್ತು ಅವರು ಸಮರ್ಪಿಸಿದ ಪಾನದ್ರವ್ಯಗಳನ್ನು ಕುಡಿದ ದೇವತೆಗಳು ಎಲ್ಲಿ? ಅವರೇ ನಿಮ್ಮ ಸಹಾಯಕ್ಕೆ ಬರಲಿ; ಅವರೇ ನಿಮ್ಮನ್ನು ಕಾಯಲಿ.


ನನ್ನ ಜನರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದವುಗಳಿಗೆ ಅಡ್ಡಬಿದ್ದ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.


ವೈಭವದ ಮಂಚದ ಮೇಲೆ ಕುಳಿತುಕೊಂಡೆ. ಅವರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿರುವೆ.


ಅವಳು ತನ್ನೊಂದಿಗೆ ವ್ಯಭಿಚಾರ ಮಾಡಿದವರನ್ನು ಅನುಸರಿಸಿ ಹೋದರೂ ಅವರು ಸಿಕ್ಕುವುದಿಲ್ಲ. ಆಗ ಅವಳು, “‘ನಾನು ಮದುವೆಯಾದ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು, ಈಗಿನ ನನ್ನ ಸ್ಥಿತಿಗಿಂತ ಆಗಿನ ಸ್ಥಿತಿಯು ಎಷ್ಟೋ ಲೇಸು’ ಅಂದುಕೊಳ್ಳುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು