Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮತ್ತು ಇಷ್ಟೂ ಸಾಲದೆಂದು ಅಶ್ಶೂರ್ಯರೊಂದಿಗೂ ವ್ಯಭಿಚಾರಮಾಡಿದಿ; ಹೌದು, ಅವರೊಡನೆ ವ್ಯಭಿಚಾರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ಇಷ್ಟೂ ಸಾಲದೆಂದು ನೀನು ಅಸ್ಸೀರಿಯರೊಂದಿಗೂ ಹಾದರಮಾಡಿದೆ; ಹೌದು, ಅವರೊಡನೆ ಹಾದರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಮತ್ತು ಇಷ್ಟೂ ಸಾಲದೆಂದು ಅಶ್ಯೂರ್ಯರೊಂದಿಗೂ ಹಾದರಮಾಡಿದಿ; ಹೌದು, ಅವರೊಡನೆ ಹಾದರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆ ಬಳಿಕ ನೀನು ಅಶ್ಶೂರದವರೊಂದಿಗೆ ಸಂಭೋಗಿಸಲು ಹೋದಿ. ನೀನು ತೃಪ್ತಿಗೊಳ್ಳುವಷ್ಟು ಆನಂದ ಸಿಗಲಿಲ್ಲ. ನೀನೆಂದೂ ತೃಪ್ತಿಗೊಂಡವಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಇದಲ್ಲದೆ ಅಸ್ಸೀರಿಯರೊಂದಿಗೂ ವ್ಯಭಿಚಾರ ಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀಯೆ; ಆದರೂ ತೃಪ್ತಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:28
14 ತಿಳಿವುಗಳ ಹೋಲಿಕೆ  

ಆಹಾಜನು ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನಿನ್ನ ದಾಸನೂ, ಮಗನೂ ಆಗಿದ್ದೇನೆ. ನೀನು ಬಂದು ನನ್ನನ್ನು, ನನಗೆ ವಿರೋಧವಾಗಿ ಎದ್ದಿರುವ ಅರಾಮ್ಯರ ಮತ್ತು ಇಸ್ರಾಯೇಲರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು” ಎಂದು ಕೇಳಿಕೊಂಡನು.


ಅದು ಜಗಳಗಂಟ ಮಹಾರಾಜನಿಗೆ ಕಾಣಿಕೆಯಾಗಿ ಅಶ್ಶೂರಕ್ಕೆ ಒಯ್ಯಲ್ಪಡುವುದು. ಎಫ್ರಾಯೀಮಿಗೆ ಅವಮಾನವಾಗುವುದು, ಇಸ್ರಾಯೇಲ್ ತಾನು ಸಂಕಲ್ಪಿಸಿಕೊಂಡ ವಿಷಯಕ್ಕಾಗಿ ನಾಚಿಕೆಪಡುವುದು.


ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಪ್ರಯತ್ನಿಸುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟೆಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.


ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್ ನದಿಯ ನೀರನ್ನು ಕುಡಿಯ ಅವಶ್ಯಕತೆ ಇತ್ತೆ? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡುವ ಅವಶ್ಯಕತೆ ಇತ್ತೇ?


ಹೇಗೆಂದರೆ “ಅರಾಮ್ ರಾಜರ ದೇವತೆಗಳು ಅವರಿಗೆ ಜಯವನ್ನು ಅನುಗ್ರಹಿಸುವೆ ಎಂದು ತಿಳಿದು; ನಾನೂ ಅವುಗಳಿಗೆ ಯಜ್ಞಸಮರ್ಪಿಸುವೆನು, ಆಗ ನನಗೂ ಜಯವಾಗುವುದು” ಎಂದುಕೊಂಡು ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಯಜ್ಞಸಮರ್ಪಿಸಿದನು. ಆದರೆ ಆ ದೇವತೆಗಳ ದೆಸೆಯಿಂದ ಅವನಿಗೂ ಮತ್ತು ಎಲ್ಲಾ ಇಸ್ರಾಯೇಲರಿಗೂ ಕೇಡು ಉಂಟಾಯಿತು.


ಆ ಕಾಲದಲ್ಲಿ ಅರಸನಾದ ಆಹಾಜನು ತನಗೆ ಸಹಾಯ ಮಾಡಬೇಕೆಂದು ಅಶ್ಶೂರದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು.


“ಯೆಹೂದ್ಯರ ಅರಸನಾದ ಮನಸ್ಸೆಯು ಮೊದಲು ಇದ್ದ ಅಮೋರಿಯರ ಕೃತ್ಯಗಳಿಗಿಂತಲೂ ಅಸಹ್ಯವಾದ ಕೃತ್ಯಗಳನ್ನು ನಡಿಸಿದ್ದರಿಂದಲೂ, ವಿಗ್ರಹಗಳನ್ನು ಪೂಜಿಸಲು ಯೆಹೂದ್ಯರನ್ನು ಪ್ರೇರೇಪಿಸಿದ್ದರಿಂದಲೂ,


ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ, ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟೇಬಿಟ್ಟರು.


ಯೆಹೋವನು ಹೀಗೆನ್ನುತ್ತಾನೆ, “ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನ ಹೆಂಡತಿಯಾದ ಮೇಲೆ, ಅವಳನ್ನು ಮೊದಲ ಗಂಡನು ತಿರುಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವುದಲ್ಲವೇ? ಹೀಗಿರಲು ಬಹುಮಂದಿಯೊಡನೆ ವ್ಯಭಿಚಾರ ಮಾಡಿದ ನೀನು ನನ್ನ ಬಳಿಗೆ ಹಿಂದಿರುಗಿ ಬರುತ್ತಿಯಾ?


ಇದಲ್ಲದೆ ನೀನು ತುಂಬಾ ವ್ಯಾಪಾರವುಳ್ಳ ಕಸ್ದೀಯ ದೇಶಕ್ಕೆ ಸೇರಿ, ಅಲ್ಲಿಯೂ ಬಹಳ ವ್ಯಭಿಚಾರಮಾಡಿದೆ, ಆದರೂ ನಿನಗೆ ತೃಪ್ತಿಯಾಗಲಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು