Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನನ್ನು ಕಟಾಕ್ಷಿಸಿ, ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿನದಲ್ಲಿ ನೀನು ಹೇಸಿಗೆಯಾಗಿದ್ದೆ, ನಿನ್ನನ್ನು ಬಯಲಿನಲ್ಲಿ ಬಿಸಾಡಿ ಬಿಟ್ಟರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನ್ನನ್ನು ಕಟಾಕ್ಷಿಸಿ, ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿವಸದಲ್ಲಿ ನೀನು ಹೇಸಿಗೆಯಾಗಿದ್ದೆ, ನಿನ್ನನ್ನು ಬಯಲಿನಲ್ಲಿ ಬಿಸಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನನ್ನು ಕಟಾಕ್ಷಿಸಿ ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿವಸದಲ್ಲಿ ನೀನು ಹೇಸಿಗೆಯಾಗಿದ್ದಿ, ನಿನ್ನನ್ನು ಬೈಲಿನಲ್ಲಿ ಬಿಸಾಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇವುಗಳಲ್ಲಿ ಯಾವುದನ್ನೇ ಮಾಡಲು ನಿನಗೋಸ್ಕರ ಯಾರೂ ಸಾಕಷ್ಟು ಮರುಕಪಡಲಿಲ್ಲ. ಜೆರುಸಲೇಮೇ, ನೀನು ಜನಿಸಿದ ದಿನದಲ್ಲಿ ನಿನಗೆ ಜನ್ಮವಿತ್ತವರು ನಿನ್ನನ್ನು ಹೊರಗೆ ಬಯಲಿನಲ್ಲಿ ಎಸೆದುಬಿಟ್ಟರು. ನೀನು ತಿರಸ್ಕರಿಸಲ್ಪಟ್ಟಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿನ್ನನ್ನು ಕರುಣಿಸಿ, ಕಟಾಕ್ಷಿಸಿ ಯಾರೂ ನಿನಗೆ ಒಂದು ಸಹಾಯವನ್ನೂ ಮಾಡಲಿಲ್ಲ. ಆದರೆ ನೀನು ಹುಟ್ಟಿದ ದಿನದಲ್ಲಿ ಅಸಹ್ಯಪಟ್ಟು ನಿನ್ನನ್ನು ಹೊಲದಲ್ಲಿ ಬಿಸಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:5
13 ತಿಳಿವುಗಳ ಹೋಲಿಕೆ  

ಆತನು ಶೂನ್ಯವೂ ಮತ್ತು ಭಯಂಕರವೂ ಆಗಿರುವ ಮರಳುಗಾಡಿನಲ್ಲಿ ಅವರನ್ನು ಕಂಡು ಗುರಾಣಿಯಂತೆ ಆವರಿಸಿಕೊಂಡನು. ಪ್ರೀತಿಯಿಂದ ಪರಾಂಬರಿಸಿ ಕಣ್ಣುಗುಡ್ಡೆಯಂತೆ ಕಾಪಾಡಿದನು.


ನರಿಗಳು ಕೂಡಾ ಮರಿಗಳಿಗೆ ಮೊಲೆಗೊಟ್ಟು ಸಾಕುತ್ತವೆ; ಆದರೆ ನನ್ನ ಜನವೆಂಬಾಕೆಯೋ ಕಾಡಿನ ಉಷ್ಟ್ರಪಕ್ಷಿಯಷ್ಟು ಕ್ರೂರಳಾಗಿದ್ದಾಳೆ.


ಬಯಲಿನಲ್ಲಿರುವ ಯಾವನಾದರೂ ಕತ್ತಿಯಿಂದ ಕೊಲ್ಲಲ್ಪಟ್ಟವನಾದರೂ, ಯಾವನಿಗಾದರೂ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬಾಗಲಿ, ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.


ತರುವಾಯ ಫರೋಹನು ತನ್ನ ಜನರಿಗೆ, “ಇಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಕೂಸುಗಳನ್ನೆಲ್ಲಾ ಉಳಿಸಬೇಕು” ಎಂದು ಆಜ್ಞೆ ಮಾಡಿದನು.


ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಧ್ಯಸ್ಥನಾಗಬಾರದು” ಎಂದು ಹೇಳಿದಳು.


ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತರು ಮರೆತಾಳು, ಆದರೆ ನಾನು ನಿನ್ನನ್ನು ಮರೆಯುವುದಿಲ್ಲ.


“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.


ದಯೆತೋರುವ ಹೆಂಗಸರು ತಮ್ಮ ಕೂಸುಗಳನ್ನು ಸ್ವಂತ ಕೈಯಿಂದ ಬೇಯಿಸಿಕೊಂಡು ತಿಂದಿದ್ದಾರೆ; ಯಾಕೆಂದರೆ ನನ್ನ ಜನರ ನಾಶನಕಾಲದಲ್ಲಿ ಮಕ್ಕಳು ತಾಯಂದಿರಿಗೆ ತಿಂಡಿಯಾದವು.


ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ, ನಿಮ್ಮ ಹೃದಯಸಾರವನ್ನು ನೀರನ್ನೋ ಎಂಬಂತೆ ಕರ್ತನ ಸಮ್ಮುಖದಲ್ಲಿ ಹೊಯ್ದು ಬಿಡಿರಿ; ಪ್ರತಿಯೊಂದು ಬೀದಿಯ ಕೊನೆಕೊನೆಯಲ್ಲಿ ಹಸಿವೆಯಿಂದ ಮೂರ್ಛೆಹೋಗಿರುವ ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈಯೆತ್ತಿ ಪ್ರಾರ್ಥಿಸಿರಿ.”


ಕಣ್ಣೀರು ಸುರಿಸಿ ಸುರಿಸಿ ನನ್ನ ಕಣ್ಣು ಇಂಗಿ ಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಕನ್ಯೆಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದುದರಿಂದ ನನ್ನ ಕರುಳು ಕರಗಿದೆ.


ಇವನನ್ನು ಯೆರೂಸಲೇಮಿನ ಬಾಗಿಲುಗಳ ಹೊರಗೆ ಕತ್ತೆಯಂತೆ ಎಳೆದು ಬಿಸಾಡಿ ಮಣ್ಣುಪಾಲು ಮಾಡುವರು” ಎನ್ನುತ್ತಾನೆ.


“‘ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿದೆನು. ಹೌದು, ‘ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿ ಬದುಕಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು