Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “‘ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿದೆನು. ಹೌದು, ‘ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿ ಬದುಕಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, ‘ನೀನು ರಕ್ತದಿಂದ ಅಶುದ್ಧವಾಗಿದ್ದರೂ ಬದುಕು’ ಎಂದು ಹೇಳಿದೆ; ಹೌದು, ‘ನೀನು ರಕ್ತದಿಂದ ಅಶುದ್ಧವಾಗಿದ್ದರೂ ಬದುಕು’ ಎಂದು ಹೇಳಿ ಬದುಕಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಹಾದುಹೋಗುತ್ತಾ ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು ಎಂದು ಹೇಳಿದೆನು, ಹೌದು, ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು ಎಂದು ಹೇಳಿ ಬದುಕಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “‘ಆಗ ನಾನು (ದೇವರು) ಆ ಮಾರ್ಗವಾಗಿ ಹಾದುಹೋಗುವಾಗ ನೀನು ರಕ್ತಮಯವಾಗಿ ಹೊರಳಾಡುತ್ತಾ ಬಿದ್ದಿದ್ದೆ. ಆಗ ನಾನು “ಜೀವಿಸು” ಅಂದೆನು. ಹೌದು, ನೀನು ರಕ್ತದಲ್ಲಿ ಮುಳುಗಿದ್ದೀ. ಆಗ ನಾನು “ಜೀವಿಸು” ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ ‘ನಾನು ನಿನ್ನ ಬಳಿಯಲ್ಲಿ ಹಾದುಹೋಗುವಾಗ, ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದುದನ್ನು ನೋಡಿದಾಗ, “ಬದುಕು” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:6
21 ತಿಳಿವುಗಳ ಹೋಲಿಕೆ  

ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು.


ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವುದಕ್ಕೆ ಇಳಿದುಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತದೇಶಕ್ಕೆ ಕಳುಹಿಸುತ್ತೇನೆ, ಬಾ’ ಎಂದು ಹೇಳಿದನು.


“ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ.


“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ನನ್ನನ್ನು ಹೀಯಾಳಿಸಿದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವುದು. ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಿನಂತೆ ತುಳಿತಕ್ಕೀಡಾಗುವರು.


ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು. ಅವರು ನಿನಗೆ, ‘ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು’ ಎಂದು ಹೇಳಲು, ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ, ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡೆಯಲ್ಲಾ.”


ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದ ನಂತರ ನೀವು ನಿಮ್ಮ ಮನಸ್ಸಿನಲ್ಲಿ, “ಯೆಹೋವನು ನಮ್ಮನ್ನು ಈ ದೇಶಕ್ಕೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದಕ್ಕೆ ಕಾರಣ ನಮ್ಮ ಸದಾಚಾರವೇ” ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ.


“ಯಾವನ ಮೇಲೆ ನನಗೆ ಕರುಣೆ ಉಂಟೋ ಅವನನ್ನು ಕರುಣಿಸುವೆನು, ಯಾವನ ಮೇಲೆ ನನ್ನ ಕನಿಕರವಿದೆಯೋ ಅವನಿಗೆ ಕನಿಕರ ತೋರಿಸುವೆನು” ಎಂದು ದೇವರು ಮೋಶೆಗೆ ಹೇಳಿರುತ್ತಾನೆ.


ಆಗ ಆಲೆಯನ್ನು ಪಟ್ಟಣದ ಹೊರಗೆ ತೆಗೆದುಕೊಂಡು ಹೋಗಿ ತುಳಿದರು. ಆ ಆಲೆಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಮೇಲಕ್ಕೆ ಬಂದು ಮುನ್ನೂರು ಕಿಲೋಮೀಟರಿನಷ್ಟು ದೂರ ಹರಿಯಿತು.


ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?


ಆದರೆ ನೀನಾದರೋ ನಿನ್ನ ಸಮಾಧಿಗೆ ದೂರವಾಗಿ ಕೆಟ್ಟ ಕೊಂಬೆಯಂತೆ ಬಿಸಾಡಲ್ಪಟ್ಟಿದ್ದೀ; ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಹೊದಿಕೆಯಂತೆಯೂ,


ನಿನ್ನನ್ನು ಕಟಾಕ್ಷಿಸಿ, ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿನದಲ್ಲಿ ನೀನು ಹೇಸಿಗೆಯಾಗಿದ್ದೆ, ನಿನ್ನನ್ನು ಬಯಲಿನಲ್ಲಿ ಬಿಸಾಡಿ ಬಿಟ್ಟರು.’


‘ಭೂಮಿಯಲ್ಲಿ ಮೊಳೆಯುವ ಮೊಳಿಕೆಯನ್ನೋ ಎಂಬಂತೆ ನಾನು ನಿನ್ನನ್ನು ಬೆಳೆಯಿಸಲು, ನೀನು ಬಲಿತು ಪ್ರಾಯತುಂಬಿ ಅತಿಸುಂದರಿಯಾದಿ; ನಿನಗೆ ಸ್ತನಗಳು ಮೂಡಿದವು, ನಿನ್ನ ಕೂದಲು ಉದ್ದವಾಯಿತು; ಆದರೆ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿದ್ದೆ.


ಈ ನಿನ್ನ ಅಸಹ್ಯಕಾರ್ಯಗಳನ್ನೂ, ವ್ಯಭಿಚಾರವನ್ನು ನೀನು ಪದೇ ಪದೇ ನಡೆಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು