Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನೇ ಎತ್ತರವಾದ ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ತೆಗೆದು ಅದನ್ನು ನೆಡುವೆನು; ತುಟ್ಟತುದಿಯ ಚಿಗುರುಗಳಲ್ಲಿ ಅತಿ ಕೋಮಲವಾದದ್ದನ್ನು ಚಿವುಟಿ ತಂದು, ಉನ್ನತೋನ್ನತವಾದ ಪರ್ವತದ ಮೇಲೆ ನೆಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸರ್ವೇಶ್ವರನಾದ ದೇವರ ವಾಣಿಯಿದು; ನಾನೇ ನೆಡುವೆನು ರೆಂಬೆಯೊಂದನು ಎತ್ತರದ ದೇವದಾರು ಮರದ ಮೇಲಿಂದ ತಂದು ತುಟ್ಟತುದಿಯ ಚಿಗುರುಗಳಲ್ಲೊಂದನ್ನು ತಂದು ಅತಿ ಕೋಮಲವಾದುದನ್ನು ಚಿವುಟಿ ತಂದು, ನೆಡುವೆನದನು ಉನ್ನತೋನ್ನತವಾದ ಪರ್ವತದಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನೇ ಎತ್ತರವಾದ ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ತೆಗೆದು ಅದನ್ನು ನೆಡುವೆನು; ತುಟ್ಟತುದಿಯ ಚಿಗುರುಗಳಲ್ಲಿ ಅತಿಕೋಮಲವಾದದ್ದನ್ನು ಚಿವುಟಿ ಉನ್ನತೋನ್ನವಾದ ಪರ್ವತದ ಮೇಲೆ ನಾಟುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು: “ನಾನು ಎತ್ತರವಾದ ದೇವದಾರು ಮರದಿಂದ ಒಂದು ಕೊಂಬೆಯನ್ನು ಕೀಳುವೆನು. ಆ ಮರದ ಮೇಲಿರುವ ಒಂದು ಸಣ್ಣ ಕೊಂಬೆಯನ್ನು ಕೀಳುವೆನು. ಅದನ್ನು ನಾನು ಎತ್ತರವಾದ ಪರ್ವತದಲ್ಲಿ ನೆಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು. ಇದರ ತುದಿಯಲ್ಲಿರುವ ಎಳೆಯದಾದ ಕೊಂಬೆಯನ್ನು ಕತ್ತರಿಸಿ, ಎತ್ತರವಾದ ಪರ್ವತದ ಮೇಲೆ ನಾಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:22
19 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ, ಉತ್ತಮ ನೈವೇದ್ಯಗಳನ್ನೂ, ಮೀಸಲಾದ ಎಲ್ಲವನ್ನೂ ಬರಮಾಡಿಕೊಳ್ಳುವೆನು.


ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.


“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.


ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಕೇಳಿರಿ. ಇಗೋ, ಮೊಳಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೆನೆಂಬುದಕ್ಕೆ ಇವರೇ ಮುಂಗುರುತು.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ಯೆಹೋವನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದನೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣದ ಕಡೆ ಆ ಪರ್ವತದ ಮೇಲೆ ಪಟ್ಟಣದಂತಿರುವ ಕಟ್ಟಡಗಳು ಕಾಣಿಸಿತು.


ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.


ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.


ಅಲ್ಲಿ ಇಸ್ರಾಯೇಲಿನ ಪರ್ವತಗಳ ಮೇಲೆ ಒಂದೇ ಜನಾಂಗವನ್ನಾಗಿ ಮಾಡುವೆನು. ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು. ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ.


ಆ ದಿನದಲ್ಲಿ ಯೆಹೋವನು ದಯಪಾಲಿಸಿದ ಬೆಳೆಯಿಂದ ಇಸ್ರಾಯೇಲರಲ್ಲಿ ಉಳಿದವರಿಗೆ ಸೌಂದರ್ಯವೂ, ಮಹಿಮೆಯೂ ಉಂಟಾಗುವವು. ದೇಶದಿಂದ ಫಲವೂ, ಉನ್ನತಿಯೂ, ಭೂಷಣವೂ ಲಭಿಸುವುದು.


ನಿನ್ನ ಬಲಗೈ ನೆಟ್ಟು, ಸಾಕಿ, ಬೆಳೆಸಿದ ಸಸಿಯನ್ನು ಕಾಪಾಡು.


ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ದೇಶವನ್ನು ಇನ್ನು ಹಾಳುಮಾಡುವುದಿಲ್ಲ, ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು