Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 19:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಇಸ್ರಾಯೇಲಿನ ರಾಜರ ವಿಷಯವಾಗಿ ಈ ಶೋಕ ಗೀತೆಯನ್ನು ಹಾಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಇಸ್ರಯೇಲ್ ಅರಸರನ್ನು ಕುರಿತ ಈ ಶೋಕ ಗೀತೆಯನ್ನು ಹಾಡು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲಿನ ಪ್ರಭುಗಳ ವಿಷಯವಾಗಿ ಈ ಶೋಕಗೀತವನ್ನು ಎತ್ತು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರು ನನಗೆ, “ಇಸ್ರೇಲರ ಅಧಿಪತಿಗಳ ವಿಷಯವಾದ ಈ ಶೋಕಗೀತೆಯನ್ನು ನೀನು ಹಾಡಬೇಕು” ಎಂದು ಹೇಳಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಇದಲ್ಲದೆ ನೀನು ಇಸ್ರಾಯೇಲಿನ ಪ್ರಧಾನರ ವಿಷಯವಾಗಿ ಈ ಪ್ರಲಾಪವನ್ನೆತ್ತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 19:1
34 ತಿಳಿವುಗಳ ಹೋಲಿಕೆ  

“ನರಪುತ್ರನೇ, ನೀನು ತೂರಿನ ವಿಷಯದಲ್ಲಿ ಶೋಕ ಗೀತೆಯನ್ನೆತ್ತು, ಅದಕ್ಕೆ ಹೀಗೆ ನುಡಿ,


ಇವರು ನಿನ್ನ ವಿಷಯದಲ್ಲಿ ಗೋಳಾಟವನ್ನೆತಿ, ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರದ ಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದವು!


ಯೆಹೋಯಾಕೀಮನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಖೀನನು ಅರಸನಾದನು.


ಬೆಂಕಿಯು ಅದರ ಕೊಂಬೆಗಳಿಂದ ಹೊರಟು ಅದರ ಫಲವನ್ನು ನುಂಗಿ ಬಿಟ್ಟಿದೆ. ಆದುದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿ ಕೊಂಬೆಯೂ ಅದರಲ್ಲಿ ಉಳಿದಿಲ್ಲ.’ ಇದು ಶೋಕ ಗೀತೆ, ಶೋಕ ಗೀತೆಯಾಗಿ ವಾಡಿಕೆಯಲ್ಲಿದೆ.”


ಆತನು ಆ ಸುರುಳಿಯನ್ನು ನನ್ನೆದುರಿನಲ್ಲಿ ಬಿಚ್ಚಿದನು; ಅದರ ಎರಡು ಪಕ್ಕಗಳಲ್ಲಿಯೂ ಬರೆದಿತ್ತು; ಅದರಲ್ಲಿ ಬರೆದದ್ದು ಪ್ರಲಾಪ, ಗೋಳಾಟ, ಶೋಕ ಇವುಗಳೇ.


ಆಗ ಯೆಹೂದದ ಅರಸನಾದ ಯೆಹೋಯಾಖೀನನು ತನ್ನ ತಾಯಿಯ ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಬಾಬೆಲಿನ ಅರಸನ ಬಳಿಗೆ ಹೋದನು. ಬಾಬೆಲಿನ ಅರಸನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.


ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು. ಯೆಹೋವಾಹಾಜನು ಅಲ್ಲಿ ಮರಣ ಹೊಂದಿದನು.


“ನರಪುತ್ರನೇ, ನೀನು ಐಗುಪ್ತದ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ, ಅವರನ್ನೂ ಮತ್ತು ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು.


ಪ್ರಲಾಪಿಸುವವರು ಈ ಶೋಕ ಗೀತವನ್ನೆತ್ತಲಿ; ಜನಾಂಗಗಳ ಯುವತಿಯರು ಹೀಗೆ ಗೋಳಾಡಲಿ; ಐಗುಪ್ತಕ್ಕಾಗಿಯೂ, ಅಲ್ಲಿನ ಬಹು ಪ್ರಜೆಗಳಿಗಾಗಿಯೂ ದುಃಖಿಸಿ ಈ ಗೀತೆಯನ್ನು ಹಾಡಲಿ” ಇದು ಕರ್ತನಾದ ಯೆಹೋವನ ನುಡಿ.


ಅವರು ರೋದನ ಮಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು, ‘ಸಮುದ್ರದ ನಡುವೆ ಹಾಳಾಗಿರುವ ತೂರಿಗೆ ಯಾವ ಪಟ್ಟಣ ಸಮಾನವಾಗಿದೆ?’


ರಾಜಪುತ್ರರ ಕೈಗಳನ್ನು ಗಲ್ಲಿಗೆ ನೇತುಹಾಕಿದ್ದಾರೆ; ವೃದ್ಧರು ಮಾನಭಂಗಪಟ್ಟರು.


ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ, ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.


ಇದಲ್ಲದೆ ಯೆಹೋವನು, “ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇಮಿನವರ ಶೇಷ, ಐಗುಪ್ತ ದೇಶಕ್ಕೆ ವಲಸೆಯಾದವರು, ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಇವರನ್ನು ತರುವೆನು.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಶಿಲ್ಪಿಗಳನ್ನೂ ಮತ್ತು ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದ ಮೇಲೆ ಯೆಹೋವನ ಆಲಯದ ಮುಂದೆ ಇಟ್ಟಿರುವ ಅಂಜೂರದ ಹಣ್ಣು ತುಂಬಿದ ಎರಡು ಪುಟ್ಟಿಗಳನ್ನು ಯೆಹೋವನು ನನಗೆ ತೋರಿಸಿದನು.


ಯೆಹೋವನು, “ಇವನನ್ನು ಮಕ್ಕಳಿಲ್ಲದವನು, ವ್ಯರ್ಥಜನ್ಮದವನು ಎಂದು ಪಟ್ಟಿಯಲ್ಲಿ ಬರೆಯಿರಿ; ಇವನ ಸಂತಾನದಲ್ಲಿ ಇನ್ನು ಮೇಲೆ ಯಾರೂ ದಾವೀದನ ಸಿಂಹಾಸನದಲ್ಲಿ ಕುಳಿತು ಯೆಹೂದವನ್ನು ಆಳಿ ಬಾಳನು” ಎಂದು ಹೇಳುತ್ತಾನೆ.


ಕೊನ್ಯನೆಂಬ ಈ ಮನುಷ್ಯನು ಬಿಸಾಡಿದ ಒಡಕು ಕುಡಿಕೆಯೋ? ಯಾರಿಗೂ ಇಷ್ಟವಿಲ್ಲದ ಮಣ್ಣಿನ ಮಡಿಕೆಯೋ? ಎಂಬಂತೆ, ಅವನೂ ಅವನ ಸಂತತಿಯವರೂ ಏಕೆ ಬಿಸಾಡಲ್ಪಟ್ಟಿದ್ದಾರೆ? ನೋಡದ ದೇಶಕ್ಕೆ ಏಕೆ ಎಸೆಯಲ್ಪಟ್ಟಿದ್ದಾರೆ?


“ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.


ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ!


ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು.


ಬಾಬೆಲಿನ, ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಅವನನ್ನು ಬಾಬಿಲೋನಿಗೆ ಒಯ್ಯುವುದಕ್ಕೋಸ್ಕರ ಅವನಿಗೆ ಬೇಡಿಹಾಕಿ,


ಐಗುಪ್ತದ ಅರಸನು ಯೆರೂಸಲೇಮಿಗೆ ಬಂದು ಅವನನ್ನು ಪಟ್ಟದಿಂದ ತೆಗೆದುಹಾಕಿ, ಯೆಹೂದ್ಯರು ತನಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.


ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನ ವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಾಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತಗ್ರಂಥದಲ್ಲಿ ಬರೆದಿರುತ್ತವೆ.


‘ಆಹಾ, ನಿನ್ನ ತಾಯಿಯು ಸಿಂಹಗಳ ಮಧ್ಯೆ ಸಿಂಹಿಣಿ, ಸಾಕಿದಳು ತನ್ನ ಮರಿಗಳನ್ನು, ಯುವ ಸಿಂಹಗಳ ನಡುವೆ ವಾಸಿಸಿ.


“ನರಪುತ್ರನೇ, ನೀನು ತೂರಿನ ಅರಸನ ವಿಷಯದಲ್ಲಿ ಶೋಕ ಗೀತೆಯನ್ನು ಹಾಡು, ಅವನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಸರ್ವಸುಲಕ್ಷಣ ಶಿರೋಮಣಿ, ಪೂರ್ಣಜ್ಞಾನಿ, ಪರಿಪೂರ್ಣಸುಂದರಿ.


“ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ವಿಷಯವಾಗಿ ಶೋಕ ಗೀತೆಯನ್ನು ಹಾಡಿ ಅವನಿಗೆ ಹೀಗೆ ನುಡಿ, ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು, ನೀರನ್ನು ನಿನ್ನ ಕಾಲುಗಳಿಂದ ಕಲಕಿ, ಜನಾಂಗಗಳ ಹೊಳೆಗಳನ್ನೂ ತುಳಿದು ಬದಿಮಾಡಿದೆ.’”


ಇಸ್ರಾಯೇಲ್ ವಂಶದವರೇ, ನಾನು ನಿಮ್ಮ ವಿಷಯದಲ್ಲಿ ಶೋಕಗೀತವಾಗಿ ಹಾಡುವ ಈ ಮಾತನ್ನು ಕೇಳಿರಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು