Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 2:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ನನಗೆ, “ನರಪುತ್ರನೇ, ಎದ್ದು ನಿಂತುಕೋ, ನಿನ್ನ ಸಂಗಡ ಮಾತನಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ನನಗೆ, “ನರಪುತ್ರನೇ, ಎದ್ದು ನಿಲ್ಲು; ನಿನ್ನ ಸಂಗಡ ಮಾತಾಡಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆತನು ನನಗೆ - ನರಪುತ್ರನೇ, ಎದ್ದು ನಿಂತುಕೋ, ನಿನ್ನ ಸಂಗಡ ಮಾತಾಡುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಸ್ವರವು, “ನರಪುತ್ರನೇ, ಎದ್ದೇಳು ನಾನು ನಿನ್ನೊಂದಿಗೆ ಮಾತನಾಡುತ್ತೇನೆ” ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ನನಗೆ, “ಮನುಷ್ಯಪುತ್ರನೇ, ಎದ್ದು ನಿಲ್ಲು, ನಿನ್ನ ಸಂಗಡ ಮಾತನಾಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 2:1
32 ತಿಳಿವುಗಳ ಹೋಲಿಕೆ  

ಆಗ ಅವರು ನನಗೆ, “ದಾನಿಯೇಲನೇ, ಅತಿಪ್ರಿಯನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು; ನಿಂತುಕೋ, ಈಗ ನಿನ್ನ ಬಳಿಗೇ ಕಳುಹಿಸಲ್ಪಟ್ಟಿದ್ದೇನೆ” ಎಂದು ಹೇಳಿದನು. ಹೇಳಿದ ಕೂಡಲೆ ನಾನು ನಡುಗುತ್ತಾ ನಿಂತುಕೊಂಡೆನು.


“ನರಪುತ್ರನೇ, ನೀನು ಒಂದು ಇಟ್ಟಿಗೆಯನ್ನು ತೆಗೆದುಕೊಂಡು ನಿನ್ನ ಮುಂದಿಟ್ಟುಕೊಂಡು, ಅದರ ಮೇಲೆ ಯೆರೂಸಲೇಮ್ ಪಟ್ಟಣದ ನಕ್ಷೆಯನ್ನು ಬರೆ.


“ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.


“ನರಪುತ್ರನೇ, ಹದವಾದ ಖಡ್ಗವನ್ನು ತೆಗೆದುಕೊಂಡು, ಕ್ಷೌರಿಕನ ಕತ್ತಿಯನ್ನಾಗಿ ಉಪಯೋಗಿಸಿ ನಿನ್ನ ತಲೆಯನ್ನೂ, ಗಡ್ಡವನ್ನೂ ಬೋಳಿಸಿಬಿಟ್ಟು, ತಕ್ಕಡಿಯನ್ನು ತಂದು ಅದರಿಂದ ತೂಗಿ ಆ ಕೂದಲನ್ನು ಭಾಗ ಮಾಡು.


ಆಮೇಲೆ ಆತನು ನನಗೆ ಹೀಗೆಂದನು, “ನರಪುತ್ರನೇ, ನೀನು ಇಸ್ರಾಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ಹೇಳು.


ಆತನು ನನಗೆ, “ನರಪುತ್ರನೇ, ನಿನಗೆ ಸಿಕ್ಕಿದ ಈ ಸುರುಳಿಯನ್ನು ತಿನ್ನು; ಅನಂತರ ನೀನು ಹೋಗಿ (ಇದರಲ್ಲಿನ ಸಂಗತಿಗಳನ್ನು) ಇಸ್ರಾಯೇಲ್ ವಂಶದವರಿಗೆ ಸಾರು” ಎಂದು ಅಪ್ಪಣೆಕೊಟ್ಟನು.


ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವುದು” ಎಂದು ಹೇಳಿದನು.


ನೀನು ಎದ್ದು, ನಿಂತುಕೋ. ನಿನ್ನನ್ನು ನನ್ನ ಸೇವಕನಾಗಿಯೂ, ಸಾಕ್ಷಿಯಾಗಿಯೂ ನೇಮಿಸುವುದಕ್ಕೋಸ್ಕರ ನಿನಗೆ ಕಾಣಿಸಿಕೊಂಡಿದ್ದೇನೆ. ಈಗಲೂ, ಮುಂದೆಯೂ ನಿನಗೆ ತೋರಿಸಲಿರುವ ದರ್ಶನಗಳಲ್ಲಿಯೂ, ನಿನಗೆ ಕಾಣಿಸಿಕೊಂಡದ್ದನ್ನು ಕುರಿತು ನೀನು ನನ್ನ ಸಾಕ್ಷಿಯಾಗಿರಬೇಕು.


“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ಪರಲೋಕದಿಂದ ಇಳಿದು ಬಂದವನೇ, ಅಂದರೆ, ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.


ಆದರೆ ಯೇಸು ಹತ್ತಿರಕ್ಕೆ ಬಂದು ಅವರನ್ನು ಮುಟ್ಟಿ, “ಏಳಿರಿ ಹೆದರಬೇಡಿರಿ” ಅಂದನು.


ಆ ಮೇಲೆ ಆ ಪುರುಷನು ನನಗೆ, “ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು, “ಎನ್ನೊಡೆಯನೇ, ಮಾತನಾಡು; ನನ್ನನ್ನು ಬಲಗೊಳಿಸಿದ್ದೀ”


ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬರಲು, ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು. ನನಗೆ ಅವನು, “ನರಪುತ್ರನೇ, ಇದು ಮನದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು” ಎಂದು ಹೇಳಿದನು.


ಆತನು ನನಗೆ “ನರಪುತ್ರನೆ, ಈ ಎಲುಬುಗಳಿಗೆ ಜೀವವು ಬರಬಹುದೋ?” ಎಂದು ಕೇಳಲು ನಾನು, “ಕರ್ತನಾದ ಯೆಹೋವನೇ, ನೀನೇ ಬಲ್ಲೆ” ಎಂದು ಉತ್ತರಕೊಟ್ಟೆನು.


“ನರಪುತ್ರನೇ, ಇಸ್ರಾಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನನ್ನನ್ನು ಪ್ರಶ್ನೆ ಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ, ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ’” ಇದು ಕರ್ತನಾದ ಯೆಹೋವನ ನುಡಿ.


“ನರಪುತ್ರನೇ, ನೀನು ಇಸ್ರಾಯೇಲ್ ವಂಶದವರಿಗೆ ಈ ಸಾಮ್ಯವನ್ನು ಒಗಟಾಗಿ ಹೇಳು,


“ನರಪುತ್ರನೇ, ನೀನು ಯೆರೂಸಲೇಮಿಗೆ ಅದರ ಅಸಹ್ಯಕಾರ್ಯಗಳನ್ನು ತಿಳಿಯಪಡಿಸಿ ಹೀಗೆ ನುಡಿ,


“ನರಪುತ್ರನೇ, ದ್ರಾಕ್ಷಿಯ ಗಿಡವು ಉಳಿದ ಗಿಡಗಳಿಗಿಂತ ಎಷ್ಟು ಹೆಚ್ಚು? ವನವೃಕ್ಷಗಳಲ್ಲಿ ದ್ರಾಕ್ಷಾಲತೆಯ ವಿಶೇಷವೇನು?


“ನರಪುತ್ರನೇ, ಅಪರಾಧವನ್ನು ನಡೆಸಿ ನನ್ನ ವಿರುದ್ಧವಾಗಿ ಪಾಪಮಾಡಿದ ದೇಶದ ಮೇಲೆ ನಾನು ಕೈಯೆತ್ತಿ, ಅದರ ಆಹಾರ ಸರಬರಾಜನ್ನು ತೆಗೆದುಬಿಟ್ಟು, ಕ್ಷಾಮವನ್ನು ಬರಮಾಡಿ, ಜನರನ್ನು, ಪಶುಗಳನ್ನು ಅದರೊಳಗಿಂದ ನಿರ್ಮೂಲ ಮಾಡುತ್ತೇನೆ.


“ನರಪುತ್ರನೇ, ಇವರು ತಮ್ಮ ವಿಗ್ರಹಗಳನ್ನು, ಮನಸ್ಸಿನಲ್ಲಿ ನೆಲೆಗೊಳಿಸಿ, ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಇಲ್ಲ.”


“ನರಪುತ್ರನೇ, ಪ್ರವಾದನೆ ಮಾಡಿ, ಸ್ವಕಲ್ಪಿತವಾದುದನ್ನೇ ಸಾರುತ್ತಲಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತಾ ಹೀಗೆ ಹೇಳು, ‘ಯೆಹೋವನ ವಾಕ್ಯವನ್ನು ಕೇಳಿರಿ.


“ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೆ ಹೊರಡು ಅಂದರೆ ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿ ವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು.


“ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ, ‘ಪ್ರಳಯವು, ಪೂರ್ಣ ಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ.’


ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಹೃದಯದಲ್ಲಿಟ್ಟುಕೋ.


ಇದಲ್ಲದೆ ಆತನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತನ್ನು ಕೇಳು; ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿದೆರೆದು ತಿಂದುಬಿಡು” ಅಂದನು.


“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.


ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಏಕೆ ಸ್ಮರಿಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?


ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನನ್ನ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ; ಈ ದಿನದವರೆಗೆ ಅವರೂ, ಅವರ ಪೂರ್ವಿಕರೂ ನನ್ನ ವಿರುದ್ಧವಾಗಿ ಪಾಪಮಾಡುತ್ತಲೇ ಇದ್ದಾರೆ.


ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲೂ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡಾಗ ನಾನು ಅಡ್ಡಬಿದ್ದೆ; ಮಾತನಾಡುವಾತನ ವಾಣಿಯನ್ನು ಕೇಳಿದೆ.


ಆ ಪುರುಷನು ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ. ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ಇಲ್ಲಿಗೆ ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ವಂಶದವರಿಗೆ ಪ್ರಕಟಿಸು” ಎಂದು ಹೇಳಿದನು.


ಆಗ ಆ ಪುರುಷನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಸರ್ವಾಂಗಹೋಮಕ್ಕೂ, ರಕ್ತವೆರಚುವ ಸಂಸ್ಕಾರಕ್ಕೂ ಯಜ್ಞವೇದಿಯನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಗೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು