Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 2:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನು ಈ ಮಾತನ್ನು ಹೇಳುವಾಗ ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತನಾಡಿದಾತನ ನುಡಿಯನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರು ಈ ಮಾತನ್ನು ಹೇಳಿದ ಕೂಡಲೆ ದೇವರಾತ್ಮ ನನ್ನೊಳಗೆ ಸೇರಿ ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತಾಡಿದಾತನ ನುಡಿಯನ್ನು ಚೆನ್ನಾಗಿ ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನು ಈ ಮಾತನ್ನು ಹೇಳಿದ ಕೂಡಲೆ ದೇವರಾತ್ಮವು ನನ್ನೊಳಗೆ ಸೇರಿ ನಾನು ಎದ್ದುನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತಾಡಿದಾತನ ನುಡಿಯನ್ನು ಚೆನ್ನಾಗಿ ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆತನು ನನ್ನೊಂದಿಗೆ ಮಾತನಾಡುತ್ತಿರಲು, ಆತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಕಾಲೂರಿ ನಿಂತುಕೊಳ್ಳುವಂತೆ ಮಾಡಿತು. ಆತನು ನನ್ನೊಂದಿಗೆ ಮಾತಾಡುವುದು ನನಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಹೀಗೆ ಅವರು ನನ್ನ ಸಂಗಡ ಮಾತನಾಡುವಾಗ, ದೇವರಾತ್ಮರು ನನ್ನೊಳಗೆ ಪ್ರವೇಶಿಸಿ, ನನ್ನನ್ನು ನಿಂತುಕೊಳ್ಳುವಂತೆ ಮಾಡಿದರು. ಆಗ ಅವರು ನನ್ನೊಂದಿಗೆ ಮಾತನಾಡುವುದನ್ನು ಚೆನ್ನಾಗಿ ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 2:2
13 ತಿಳಿವುಗಳ ಹೋಲಿಕೆ  

ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿದ ಮೇಲೆ ಆತನು ನನಗೆ ಹೀಗೆ ಹೇಳಿದನು, “ನೀನು ಹೋಗಿ ನಿನ್ನ ಮನೆಯೊಳಗೆ ಅಡಗಿಕೋ.


ಆಮೇಲೆ ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಗಲಾಗಿ, “ಮಹಿಮೆಯುಳ್ಳ ಯೆಹೋವನಿಗೆ ಆತನ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ” ಎಂಬ ಮಹಾಶಬ್ದವು ನನ್ನ ಹಿಂದೆ ಕೇಳಿಸಿತು.


ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಶ್ವಾಸವು ಬಂದು ಆ ಶವಗಳಲ್ಲಿ ಪ್ರವೇಶಿಸಲು, ಅವರು ಕಾಲೂರಿ ನಿಲ್ಲುವರು. ಅವರನ್ನು ನೋಡಿದವರೆಲ್ಲರೂ ಭಯದಿಂದ ನಡುಗಿದರು.


ಅವನು ನನ್ನೊಡನೆ ಮಾತನಾಡುತ್ತಿರುವಲ್ಲಿ ನಾನು ಮೈಮರೆತು ಬೋರಲು ಬಿದ್ದಿದ್ದೆನು. ಆಗ ಅವನು ನನ್ನನ್ನು ಮುಟ್ಟಿ ನಿಲ್ಲಿಸಿ ನನಗೆ,


ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.


ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು.


ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ.


ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು, ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟುಹೋದನು.


ಇದಲ್ಲದೆ ಅವನು ಚೊರ್ಗಕ್ಕೂ, ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಯೆಹೋವನ ಆತ್ಮವು ಅವನನ್ನು ಪ್ರೇರೇಪಿಸುವುದಕ್ಕೆ ಪ್ರಾರಂಭಿಸಿತು.


ಆಗ ಯೆಹೋವನ ಆತ್ಮವು ನನ್ನಲ್ಲಿ ಆವೇಶ ಉಂಟುಮಾಡಿ, ಹೀಗೆ ಸಾರಬೇಕೆಂದು ಅಪ್ಪಣೆಯಾಯಿತು. ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನೀವು ಹೀಗೆ ಮಾತನಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ.


“ಈ ದಂಗೆಕೋರ ಮನೆತನದವರಿಗೆ ದೃಷ್ಟಾಂತವನ್ನು ತಿಳಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು