Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕೈಕೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅಲ್ಲಿ ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟೆನು. ನನ್ನ ವಿಧಿನಿಯಮಗಳನ್ನು ತಿಳಿಸಿದೆನು. ಅವುಗಳನ್ನು ಕೈಕೊಂಡು ನಡೆಯುವ ಎಲ್ಲರೂ ಜೀವಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು, ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:11
18 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರದ ನೀತಿಯನುಸಾರ, “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.


ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಇಂಥ ನ್ಯಾಯವಾದ ಆಜ್ಞಾವಿಧಿಗಳುಳ್ಳ ಈ ಧರ್ಮಶಾಸ್ತ್ರಕ್ಕೆ ಸಮಾನವಾದದ್ದು ಬೇರೆ ಯಾವ ಜನಾಂಗಕ್ಕೆ ಉಂಟು?


ನನ್ನ ಆಜ್ಞಾನಿಯಮಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾನಿಯಮಗಳ ಮೂಲಕ ಬದುಕುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು.


ಹಾಗೆಯೇ ಮೋಶೆಯ ಧರ್ಮಶಾಸ್ತ್ರಕ್ಕೆ ನಂಬಿಕೆಯು ಆಧಾರವಾಗಿಲ್ಲ, “ಅದರ ನೇಮಗಳನ್ನು ಆಚರಿಸುವವನೇ ಅವುಗಳ ಮೂಲಕ ಬದುಕುವನು” ಎಂದು ಬರೆದಿದೆ.


ಆತನು ಅವನಿಗೆ, “ನೀನು ಸರಿಯಾಗಿ ಉತ್ತರಕೊಟ್ಟಿರುವಿ, ಅದರಂತೆ ಮಾಡು, ಮಾಡಿದರೆ ನಿತ್ಯಜೀವಕ್ಕೆ ಬಾಧ್ಯನಾಗುವಿ” ಎಂದು ಹೇಳಿದನು.


“‘ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು’ ಅಂದುಕೊಂಡೆನು.


ಎಲ್ಲಾ ವಿಷಯಗಳನ್ನು ಕುರಿತು ಹೇಳಲು ಬಹಳ ಉಂಟು. ಮೊದಲನೇಯದಾಗಿ ದೈವೋಕ್ತಿಗಳು ಅವರ ವಶಕ್ಕೆ ಸಮರ್ಪಿಸಿ ಒಪ್ಪಿಸಲ್ಪಟ್ಟಿವೆ.


“ಆದರೆ ಆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು” ಅಂದುಕೊಂಡೆನು.


ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ಆ ದುಷ್ಟನು ತನ್ನ ಒತ್ತೆಯನ್ನು ಬಿಗಿಹಿಡಿಯದೆ, ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಅನ್ಯಾಯವನ್ನು ಮಾಡದೆ, ಜೀವಾಧಾರವಾದ ವಿಧಿಗಳನ್ನು ಅನುಸರಿಸಿ, ಸಕಲ ದುಷ್ಕರ್ಮಗಳಿಗೂ ದೂರನಾದರೆ ಸಾಯುವುದಿಲ್ಲ. ಖಂಡಿತವಾಗಿ ಬದುಕುವನು.


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ.


ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.


ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು, ಸತ್ಯಪರನಾಗಿಯೇ ನಡೆದರೆ ಇಂಥವನು ಸದ್ಧರ್ಮಿಯಾಗಿರುವುದರಿಂದ ಖಂಡಿತವಾಗಿ ಜೀವಿಸುವನು” ಇದು ಕರ್ತನಾದ ಯೆಹೋವನ ನುಡಿ.


ಅವನು ಮಾಡಿದ ಯಾವ ಪಾಪವೂ ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ; ನೀತಿನ್ಯಾಯಗಳನ್ನು ನಡೆಸುತ್ತಿದ್ದುದರಿಂದ ನಿಶ್ಚಯವಾಗಿ ಬದುಕುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು