Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “‘ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು’ ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದರೆ ಇಸ್ರಯೇಲ್ ವಂಶದವರು ಮರುಭೂಮಿಯಲ್ಲಿ ನನ್ನ ವಿರುದ್ಧ ದಂಗೆಯೆದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ಧಿಕ್ಕರಿಸಿದರು. ಮುಖ್ಯವಾಗಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆಗ ನಾನು ‘ಮರುಭೂಮಿಯಲ್ಲಿರುವ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ ಇವರನ್ನು ಧ್ವಂಸಮಾಡುವೆನು’ ಎಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿಬಿದ್ದರು. ಕೈಕೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇವಿುಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಅವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ಆದರೆ ಇಸ್ರಾಯೇಲ್ ಜನರು ಮರುಭೂಮಿಯಲ್ಲಿಯೂ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ, ನನ್ನ ಅಪ್ಪಣೆಗಳನ್ನು ತಿರಸ್ಕರಿಸಿದರು. ಅವುಗಳಿಗೆ ವಿಧೇಯನಾಗುವವನು ಅವುಗಳಿಂದ ಜೀವಿಸುವನು. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿದು, ಅವರನ್ನು ಮರುಭೂಮಿಯಲ್ಲಿ ನಾಶಮಾಡುವೆನೆಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:13
43 ತಿಳಿವುಗಳ ಹೋಲಿಕೆ  

“ಆದರೆ ಆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು” ಅಂದುಕೊಂಡೆನು.


“‘ಅವರಾದರೋ ನನ್ನ ಮಾತನ್ನು ನಿರಾಕರಿಸಿ, ನನ್ನ ಮೇಲೆ ತಿರುಗಿ ಬಿದ್ದರು; ತಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ, ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತ ದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಅಂದುಕೊಂಡೆನು.


ಏಕೆಂದರೆ ನನ್ನ ಜನರು ನನ್ನ ಆಜ್ಞೆಗಳನ್ನು ಕೈಕೊಳ್ಳದೆ, ನನ್ನ ವಿಧಿಗಳನ್ನು ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿ, ತಮ್ಮ ಪೂರ್ವಿಕರ ವಿಗ್ರಹಗಳ ಮೇಲೆ ಕಣ್ಣುಹಾಕಿದ್ದರಿಂದ, ನಾನು ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ದೇಶ ದೇಶಗಳಿಗೆ ಚೆಲ್ಲಾಪಿಲ್ಲಿಯಾಗಿಸುವೆನು.” ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣಮಾಡಿದೆನು.


ಅನ್ಯದೇಶೀಯರಲ್ಲಿ ಯಾರು ಯೆಹೋವನೆಂಬ ನನ್ನನ್ನು ಅವಲಂಬಿಸಿ ಸೇವಿಸಿ ನನ್ನ ನಾಮವನ್ನು ಪ್ರೀತಿಸಿ ನನಗೆ ದಾಸರಾಗಿ ಸಬ್ಬತ್ ದಿನವನ್ನು ಹೊಲೆಮಾಡದೆ ನನ್ನ ದಿನವೆಂದು ಆಚರಿಸಿ ನನ್ನ ಒಡಂಬಡಿಕೆಯನ್ನು ಭದ್ರವಾಗಿ ಹಿಡಿಯುತ್ತಾರೋ


ಉದಾಹರಣೆಗೆ, ಹೋರೇಬಿನಲ್ಲಿ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದಿರಿ. ಆಗ ಆತನು ಬಲು ಸಿಟ್ಟುಗೊಂಡು ನಿಮ್ಮನ್ನು ಧ್ವಂಸ ಮಾಡಬೇಕೆಂದಿದ್ದನು.


ನೀವು ನನಗೆ ವಿರುದ್ಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಎಣಿಕೆಯಾದವರೆಲ್ಲರು ಅಂದರೆ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರೆಲ್ಲರೂ ಅರಣ್ಯದಲ್ಲಿಯೇ ಸಾಯುವರು.


ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ


ಆದಕಾರಣ ನೀನು ನನ್ನನ್ನು ತಡೆಯಬೇಡ. ನನ್ನ ಕೋಪಾಗ್ನಿ ಉರಿಯಲಿ, ಅವರನ್ನು ಭಸ್ಮಮಾಡಿಬಿಡುವೆನು. ತರುವಾಯ ನಿನ್ನಿಂದಲೇ ಒಂದು ಮಹಾ ಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.


ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.


ಯೆಹೋವನು ಇಂತೆನ್ನುತ್ತಾನೆ, “ಯೆಹೂದವು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿದರು. ಆತನ ವಿಧಿಗಳನ್ನು ಕೈಕೊಳ್ಳಲಿಲ್ಲ. ಅವರ ಪೂರ್ವಿಕರು ಹಿಂಬಾಲಿಸಿದ ಸುಳ್ಳುದೇವತೆಗಳು, ಇವರನ್ನು ದಾರಿ ತಪ್ಪುವಂತೆ ಮಾಡಿದವು.


ಏಕೆಂದರೆ ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತರಾಗಿ, ಅವರು ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದವರಾಗಿದ್ದರು.


ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು, ಆಜ್ಞೆಯನ್ನು ಭಯಭಕ್ತಿಯಿಂದ ಕೈಕೊಳ್ಳುವವನು ಸಫಲವನ್ನು ಹೊಂದುವನು.


ನನ್ನ ಬುದ್ಧಿವಾದವನ್ನು ಲಕ್ಷ್ಯಕ್ಕೆ ತಾರದೆ, ನನ್ನ ತಿದ್ದುಪಾಟನ್ನು ಬೇಡವೆಂದು ತಳ್ಳಿಬಿಟ್ಟಿದ್ದೀರಿ.


ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ, ನನ್ನ ದೃಷ್ಟಿಯಲ್ಲಿ ಅನೀತಿಯನ್ನು ಕೆಟ್ಟದ್ದಾಗಿರುವುದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿರುವೆ.


ನಾನು ಅವರನ್ನು ಐಗುಪ್ತದಿಂದ ಬಿಡಿಸಿದಂದಿನಿಂದ ಇಂದಿನ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರು. ನನಗೆ ಹೇಗೆ ಮಾಡಿದರೋ, ಹಾಗೆಯೇ ನಿನಗೂ ಮಾಡುತ್ತಾರೆ.


ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ.


ಇಸ್ಸಾಕಾರ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,300 ಮಂದಿ.


“ನೀವಿಬ್ಬರೂ ಸಮೂಹದವರಲ್ಲಿ ಇರದೆ ಬೇರೆ ನಿಲ್ಲಬೇಕು. ನಾನು ಒಂದು ಕ್ಷಣಮಾತ್ರದಲ್ಲಿ ಅವರನ್ನು ದಹಿಸಿಬಿಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಮತ್ತು ಆರೋನರು ಬೋರಲುಬಿದ್ದರು.


ಅವರು ಬಿಟ್ಟುಹೋದ ಸ್ವದೇಶವು ನಿರ್ಜನವಾಗಿ ಬಿದ್ದಿರುವಾಗ ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಅನುಭವಿಸಬೇಕು. ಅವರು ಯೆಹೋವನ ಆಜ್ಞೆ ಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣವೇ ತಮ್ಮ ಪಾಪದ ಫಲವನ್ನು ಅನುಭವಿಸಬೇಕಾಗಿರುವುದು.


ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನೆಯನ್ನು ಮೀರಿ ನಡೆದರೆ,


ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು.


ಧರ್ಮಶಾಸ್ತ್ರದ ನೀತಿಯನುಸಾರ, “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.


ನನ್ನ ಆಜ್ಞಾನಿಯಮಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾನಿಯಮಗಳ ಮೂಲಕ ಬದುಕುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು.


ನಿಮ್ಮ ಪೂರ್ವಿಕರು ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾಗಿದ್ದುದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.


ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.


‘ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.


ನಾನು ಐಗುಪ್ತದ ಅರಣ್ಯದಲ್ಲಿ ನಿಮ್ಮ ಪೂರ್ವಿಕರ ಸಂಗಡ ವಾದಿಸಿದಂತೆ, ನಿಮ್ಮ ಸಂಗಡಲೂ ವಾದಿಸುವೆನು” ಇದು ಕರ್ತನಾದ ಯೆಹೋವನ ನುಡಿ.


ನೀನು ನನ್ನ ಪವಿತ್ರ ವಸ್ತುಗಳನ್ನು ಅಲಕ್ಷ್ಯಮಾಡಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿದ್ದಿ.


ಇದನ್ನು ಮಾಡಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರ ಪಡಿಸಿ, ನಾನು ನೇಮಿಸಿದ ಸಬ್ಬತ್ ದಿನವನ್ನು ಅಪವಿತ್ರ ಮಾಡಿದ್ದಾರೆ.


ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದೀರಿ.


ಆಗ ನಾನು ಯೆಹೂದದ ಶ್ರೀಮಂತರಿಗೆ, “ನೀವು ಮಾಡುವುದು ಎಂಥ ದುಷ್ಕೃತ್ಯ, ನೀವು ಸಬ್ಬತ್ ದಿನವನ್ನು ಅಶುದ್ಧ ಮಾಡುತ್ತಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು