Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ನೇಮಿಸಿದ ಸಬ್ಬತ್ ದಿನಗಳನ್ನು ನನ್ನ ಪರಿಶುದ್ಧ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂದು ನೀವು ತಿಳಿದುಕೊಳ್ಳುವಂತೆ ಅವು ನಿಮಗೂ ಮತ್ತು ನನಗೂ ಗುರುತಾಗಿರುವುವು” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ನೇಮಿಸಿದ ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಸರ್ವೇಶ್ವರ ಎಂದು ನೀವು ತಿಳಿದುಕೊಳ್ಳುವಂತೆ ಅವು ನಿಮಗೂ ನನಗೂ ಗುರುತಾಗಿರುವುವು’ ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾನು ನೇವಿುಸಿದ ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂದು ನೀವು ತಿಳುಕೊಳ್ಳುವಂತೆ ಅವು ನಿಮಗೂ ನನಗೂ ಗುರುತಾಗಿರುವವು ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ನೇಮಿಸಿದ ಸಬ್ಬತ್ ದಿವಸಗಳು ಮಹತ್ವವಾದವುಗಳೆಂದು ಎಣಿಸಿರಿ. ನನ್ನ ಮತ್ತು ನಿಮ್ಮ ಸಂಬಂಧಕ್ಕೆ ಅವು ಗುರುತುಗಳಾಗಿವೆ. ನಾನು ನಿಮ್ಮ ಕರ್ತನು. ನಾನೇ ನಿಮ್ಮ ದೇವರಾದ ಯೆಹೋವನೆಂದು ತಿಳಿದುಕೊಳ್ಳಲು ಇವುಗಳು ಸಾಕ್ಷಿಗಳಾಗಿವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನನ್ನ ಸಬ್ಬತ್ ದಿನಗಳನ್ನು ಪರಿಶುದ್ಧ ಮಾಡಿರಿ, ನಾನೇ ನಿಮ್ಮ ದೇವರಾದ ಯೆಹೋವ ದೇವರು ಎಂದು ಅವು ನಿಮಗೂ ನನಗೂ, ನೀವು ತಿಳಿಯುವ ಹಾಗೆ ಗುರುತುಗಳಾಗಿರುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:20
13 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ, ಯಾವ ಕೆಲಸವನ್ನೂ ಮಾಡದಿರಿ. ಸಬ್ಬತ್ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿರಿ; ನಿಮ್ಮ ಪೂರ್ವಿಕರಿಗೆ ನಾನು ಹೀಗೆ ಆಜ್ಞೆಮಾಡಿದೆನಲ್ಲಾ.


ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ, ಸ್ವಇಚ್ಛೆಯಂತೆ ನಡೆಯದೆ, ಸ್ವಕಾರ್ಯದಲ್ಲಿ ನಿರತರಾಗದೆ, ಹರಟೆಹರಟದೆ, ಯೆಹೋವನ ಸಬ್ಬತ್ ಎಂಬ ಪರಿಶುದ್ಧದಿನವು ಉಲ್ಲಾಸಕರವೂ, ಮಾನ್ಯವೂ ಆದದ್ದೆಂದು ಘನಪಡಿಸಿದರೆ,


ವ್ಯಾಜ್ಯವಾಡುವಾಗ ಅವರ ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಬೇಕು. ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್ತುಗಳನ್ನು ಪರಿಶುದ್ಧ ದಿನವೆಂದು ಆಚರಿಸಬೇಕು.


ಇದಲ್ಲದೆ ತಮ್ಮನ್ನು ಪರಿಶುದ್ಧ ಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ, ಅವರಿಗೂ ಗುರುತಾದ ಸಬ್ಬತ್ ದಿನಗಳನ್ನು ಅವರಿಗೆ ಗುರುತಾಗಿ ನೇಮಿಸಿದೆನು.


ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’” ಎಂದು ಹೇಳಿದನು.


ಯೆಹೋವನಾದ ನನ್ನ ನುಡಿ ಇದೇ, ನೀನು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು, ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿದರೆ,


ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.


ಈ ವಿಧಿಯನ್ನು ಕೈಕೊಳ್ಳುವ ಮನುಷ್ಯನು ಧನ್ಯನು; ಇದನ್ನೇ ಭದ್ರವಾಗಿ ಹಿಡಿದು, ಸಬ್ಬತ್ ದಿನವನ್ನು ಹೊಲೆಮಾಡದೆ ದೇವರ ದಿನವೆಂದು ಆಚರಿಸುತ್ತಾ ಯಾವ ಕೇಡಿಗೂ ಕೈಹಾಕದ ಮಾನವನು ಭಾಗ್ಯವಂತನು.


ಅವರು ತಮ್ಮ ಚೊಚ್ಚಲಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ, ಕೇವಲ ದುರಾವಸ್ಥೆಗೆ ತಂದೆನು.”


“ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವುದಕ್ಕೆ ನೆನಪಿನಲ್ಲಿಟ್ಟುಕೊಳ್ಳಬೇಕು.


ನೀನು ನನ್ನ ಪವಿತ್ರ ವಸ್ತುಗಳನ್ನು ಅಲಕ್ಷ್ಯಮಾಡಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿದ್ದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು