Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 “ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಖಂಡಿತ ನೆರವೇರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ‘ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರ, ಕಲ್ಲುಗಳ ವಿಗ್ರಹಗಳನ್ನು ಪೂಜಿಸುವೆವು’ ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆ ಎಷ್ಟು ಮಾತ್ರವೂ ನೆರವೇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟುಮಾತ್ರವೂ ಸಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನಾವು ಮರದ ಮತ್ತು ಕಲ್ಲಿನ ವಸ್ತುಗಳನ್ನು ಪೂಜಿಸುತ್ತಾ ಇತರ ಜನಾಂಗಗಳಂತೆ ಇರೋಣ ಎಂದು ನೀವು ಯೋಚಿಸುತ್ತಲೇ ಇರುತ್ತೀರಿ. ನಿಮ್ಮ ಮನಸ್ಸುಗಳಲ್ಲಿರುವ ಈ ಆಲೋಚನೆಯು ಎಂದಿಗೂ ನೆರವೇರುವುದಿಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 “ ‘ “ನಾವು ಇತರ ಜನಾಂಗಗಳ ಹಾಗೆ ಮತ್ತು ಇತರ ದೇಶಗಳವರ ಹಾಗೆ ಇದ್ದು ಮರಕ್ಕೂ ಕಲ್ಲಿಗೂ ಸೇವೆ ಮಾಡುತ್ತೇವೆಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟು ಮಾತ್ರಕ್ಕೂ ನೆರವೇರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:32
19 ತಿಳಿವುಗಳ ಹೋಲಿಕೆ  

ಆಗ ಯೆಹೋವನ ಆತ್ಮವು ನನ್ನಲ್ಲಿ ಆವೇಶ ಉಂಟುಮಾಡಿ, ಹೀಗೆ ಸಾರಬೇಕೆಂದು ಅಪ್ಪಣೆಯಾಯಿತು. ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನೀವು ಹೀಗೆ ಮಾತನಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ.


ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವುದಿಲ್ಲ ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ನಾವೂ ಮತ್ತು ನಮ್ಮ ಪೂರ್ವಿಕರೂ ನಮ್ಮ ಅರಸರೂ, ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.


ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.


ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದರು.


ನಾನು ಕುಳಿತುಕೊಳ್ಳುವುದು, ಏಳುವುದು ನಿನಗೆ ಗೊತ್ತಿದೆ, ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತಿ.


ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ, ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ, ಕೇಳಲಾರದೆ, ತಿನ್ನಲಾರದೆ, ವಾಸನೆ ಗ್ರಹಿಸಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವವು ಮತ್ತು ನೀನು ಕೆಟ್ಟ ಯೋಚನೆಯನ್ನು ಮಾಡುವಿ.


ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?


ನಾನು ನಿಮ್ಮನ್ನು ಈ ಸ್ಥಳದಲ್ಲಿ ದಂಡಿಸುವೆನು ಎಂಬುದಕ್ಕೆ ಒಂದು ಗುರುತು ಕಾಣುವುದು; ನನ್ನ ಮಾತುಗಳು ಈಡೇರಿ ನಿಮಗೆ ಕೇಡನ್ನು ಉಂಟುಮಾಡುವೆನು ಎಂಬುದಾಗಿ ಅದರಿಂದಲೇ ನಿಮಗೆ ತಿಳಿದುಬರುವುದು.


ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದರು, ಏಕೆಂದರೆ ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು.


ಅವನಿಗೆ, “ನೀನಂತೂ ಮುದುಕನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುತ್ತಿಲ್ಲ. ಆದ್ದರಿಂದ ಬೇರೆ ಎಲ್ಲಾ ಜನಾಂಗಗಳಿಗೆ ಇರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿಕೊಡು. ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ” ಅಂದರು.


ಆ ಜನಾಂಗಗಳಲ್ಲಿ ನಡೆಯುವ ಅಸಹ್ಯವಾದ ಆಚಾರಗಳನ್ನೂ ಹಾಗು ಅವರು ಮರ, ಕಲ್ಲು, ಬೆಳ್ಳಿ ಮತ್ತು ಬಂಗಾರ ಇವುಗಳಿಂದ ಮಾಡಿಕೊಂಡು ಪೂಜಿಸುವ ಬೊಂಬೆಗಳನ್ನೂ ನೋಡಿದ್ದೀರಿ.


ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು. ಅಲ್ಲಿ ನಿಮಗಾಗಲಿ ಅಥವಾ ನಿಮ್ಮ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ಮತ್ತು ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯುವನು; ಅಲ್ಲಿ ನೀವು ಮರದ ದೇವರುಗಳನ್ನೂ ಮತ್ತು ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.


ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.


“ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ” ಎಂದೆನು, ಆದರೆ ನೀನು, “ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು” ಅಂದುಕೊಂಡಿದ್ದಿ.


ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.


ನನ್ನ ಜನರು ತಮ್ಮ ಮರದ ತುಂಡನ್ನು ಹಿಡಿದು ಕಣಿಕೇಳುತ್ತಾರೆ, ಅವರು ಮರದ ತುಂಡಿನಿಂದ ಪರಿಹಾರ ನಿರೀಕ್ಷಿಸುತ್ತಾರೆ. ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು