Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ, ಉತ್ತಮ ನೈವೇದ್ಯಗಳನ್ನೂ, ಮೀಸಲಾದ ಎಲ್ಲವನ್ನೂ ಬರಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾಡಿನಲ್ಲಿ ಇಸ್ರಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧ ಬೆಟ್ಟದಲ್ಲೇ, ಇಸ್ರಯೇಲಿನ ಪರ್ವತಾಗ್ರದಲ್ಲೇ, ನನ್ನನ್ನು ಪೂಜಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದುದೆಲ್ಲವನ್ನೂ ಅಂಗೀಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದದೆಲ್ಲವನ್ನೂ ಬರಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಎತ್ತರವಾದ ನನ್ನ ಪವಿತ್ರಪರ್ವತಕ್ಕೆ ಜನರು ಬರಲೇಬೇಕು. ಅಲ್ಲಿ ಅವರು ನನ್ನ ಸೇವೆ ಮಾಡಲೇಬೇಕು. ಇಡೀ ಇಸ್ರೇಲ್ ಜನಾಂಗವು ತಮ್ಮ ದೇಶದಲ್ಲಿರುವುದು. ಅಲ್ಲಿ ನಾನು ಅವರನ್ನು ಸ್ವೀಕರಿಸಿಕೊಳ್ಳುವೆನು. ಅಲ್ಲಿ ನೀವು ನಿಮ್ಮ ಕಾಣಿಕೆಗಳನ್ನು ಪ್ರಥಮ ಫಲಗಳನ್ನು ಮತ್ತು ಎಲ್ಲಾ ಪವಿತ್ರ ಕಾಣಿಕೆಗಳನ್ನು ನನಗೆ ತರಬೇಕೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನನ್ನ ಪರಿಶುದ್ಧ ಪರ್ವತದಲ್ಲಿಯೇ, ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನದವರೆಲ್ಲರೂ, ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ, ನಿಮ್ಮ ಉತ್ತಮ ಅರ್ಪಣೆಗಳನ್ನೂ, ನಿಮ್ಮ ಕಾಣಿಕೆಗಳ ಪ್ರಥಮ ಫಲವನ್ನೂ, ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:40
29 ತಿಳಿವುಗಳ ಹೋಲಿಕೆ  

ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ, ಯಜ್ಞಗಳೂ ನನಗೆ ಮೆಚ್ಚಿಗೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.


ಆಗ ಯೆಹೂದದ ಮತ್ತು ಯೆರೂಸಲೇಮಿನ ನೈವೇದ್ಯವು, ಪೂರ್ವದಿನಗಳಲ್ಲಿ ಪುರಾತನ ಕಾಲದಲ್ಲಿ ಯೆಹೋವನಿಗೆ ಮೆಚ್ಚಿಕೆಯಾದಂತೆ ಆಗಿರುವುದು.


ಕೇದಾರಿನ ಹಿಂಡುಗಳೆಲ್ಲಾ ನಿನ್ನಲ್ಲಿ ಕೂಡುವವು; ನೆಬಾಯೋತಿನ ಟಗರುಗಳು ನೀನು ಮಾಡುವ ಯಜ್ಞಕ್ಕೆ ಅನುಕೂಲಿಸುವವು. ಅವು ನನ್ನ ಯಜ್ಞವೇದಿಯ ಮೇಲೆ ಸಮರ್ಪಕವಾಗಿ ಒಯ್ಯಲ್ಪಡುವವು; ಮಹಿಮೆಯಿಂದ ಕೂಡಿದ ನನ್ನ ಆಲಯವನ್ನು ಘನಪಡಿಸುವೆನು.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.


ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.


ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಿಂದ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನು” ಇದು ಕರ್ತನಾದ ಯೆಹೋವನ ನುಡಿ.


ನಾನು ಅದನ್ನು ಇಸ್ರಾಯೇಲಿನ ಉನ್ನತ ಪರ್ವತಾಗ್ರದಲ್ಲಿ ನೆಡಲು, ಅದು ಸೊಂಪಾದ ದೇವದಾರು ಮರವಾಗಿ ರೆಂಬೆಗಳನ್ನು ಹರಡಿ ಫಲಕೊಡುವುದು; ಅದರಲ್ಲಿ ಸಕಲವಿಧವಾದ ಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು.


ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ, ಒಂದೊಂದು ಸಬ್ಬತ್ ದಿನದಲ್ಲಿಯೂ, ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಆರಾಧಿಸುವುದಕ್ಕೆ ಬರುವರು” ಇದು ಯೆಹೋವನ ನುಡಿ.


ದೇವರಾತ್ಮನಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ಪರಲೋಕದೊಳಗಿಂದ, ದೇವರ ಬಳಿಯಿಂದ ಇಳಿದುಬರುವುದನ್ನು ನನಗೆ ತೋರಿಸಿದನು.


ಪರಲೋಕದಲ್ಲಿ ಒಂದು ಮಹಾ ಚಿಹ್ನೆಯು ಕಾಣಿಸಿತು. ಸ್ತ್ರೀಯೊಬ್ಬಳು ಸೂರ್ಯಭೂಶಿತಳಾಗಿದ್ದಳು. ಆಕೆಯ ಪಾದದಡಿಯಲ್ಲಿ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳಿಂದ ಮಾಡಿದ್ದ ಒಂದು ಕಿರೀಟವಿತ್ತು.


“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನನ್ನ ಜನರೇ, ನೀವು ನನ್ನ ಪವಿತ್ರಪರ್ವತದಲ್ಲಿ ನನ್ನ ದಂಡನೆಯ ಕಹಿ ಪಾನಮಾಡಿದ್ದಿರಿ. ನಿಮ್ಮ ಸುತ್ತಲಿರುವ ಸಕಲ ಜನಾಂಗಗಳೂ ಹೀಗೆ ನಿತ್ಯವಾಗಿ ಪಾನಮಾಡುವವು. ಹೌದು ಆ ರಾಜ್ಯಗಳು ಹೀಗೆ ಕುಡಿದು ಕಬಳಿಸಿ ಅಸ್ತಿತ್ವದಲ್ಲಿ ಇಲ್ಲದಂತೆ ಆಗುವವು.


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು.


ಯೆಹೋವನು ಹೀಗೆನ್ನುತ್ತಾನೆ, “ಇಸ್ರಾಯೇಲರು ಯೆಹೋವನ ಆಲಯಕ್ಕೆ ಶುದ್ಧಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತ ಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಲ್ಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧಪರ್ವತಕ್ಕೆ ಕರೆತರುವರು.


“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.


ಪ್ರಥಮ ಫಲವಾಗಿರುವ ಹಾಗೂ ಪವಿತ್ರಾತ್ಮವರವನ್ನು ಹೊಂದಿದ ನಾವೂ ಸಹ ದೇವರ ಮಕ್ಕಳ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತಿದ್ದೇ.


ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಡುತ್ತೇನೆ. ನಿನ್ನ ದೇವರಾದ ಯೆಹೋವನು ನಿನಗೆ ಪ್ರಸನ್ನನಾಗಲಿ” ಎಂದು ಹೇಳಿದನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನೇ ಎತ್ತರವಾದ ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ತೆಗೆದು ಅದನ್ನು ನೆಡುವೆನು; ತುಟ್ಟತುದಿಯ ಚಿಗುರುಗಳಲ್ಲಿ ಅತಿ ಕೋಮಲವಾದದ್ದನ್ನು ಚಿವುಟಿ ತಂದು, ಉನ್ನತೋನ್ನತವಾದ ಪರ್ವತದ ಮೇಲೆ ನೆಡುವೆನು.


“‘ನೀನು ರೆಕ್ಕೆತೆರೆದು ನೆರಳು ನೀಡುವ ಕೆರೂಬಿಯಾಗಿದ್ದೆ; ನಾನು ನಿನ್ನನ್ನು ದೇವರ ಪರಿಶುದ್ಧ ಪರ್ವತದಲ್ಲಿ ನೆಲೆಗೊಳಿಸಿದೆನು; ನೀನು ಅಮೂಲ್ಯ ರತ್ನಗಳ ಕೆಂಡದ ಮಧ್ಯದಲ್ಲಿ ವಿಹಾರ ಮಾಡುತ್ತಿದ್ದೆ.


ಯೆಹೋವನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದನೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣದ ಕಡೆ ಆ ಪರ್ವತದ ಮೇಲೆ ಪಟ್ಟಣದಂತಿರುವ ಕಟ್ಟಡಗಳು ಕಾಣಿಸಿತು.


“ಇದೇ ಆ ಆಲಯದ ನಿಯಮವಾಗಿದೆ. ಆ ಪರ್ವತದ ಮೇಲೆಯೂ ಮತ್ತು ಅದರ ಸುತ್ತುಮುತ್ತಲಿನ ಪ್ರದೇಶವೆಲ್ಲಾ ಅತಿ ಪರಿಶುದ್ಧವಾಗಿರಬೇಕು. ಇಗೋ, ಆ ಆಲಯದ ನಿಯಮವು ಇದೇ.


“ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೆ ಈಡಾಗುವವು; ಆಗ ತಮ್ಮ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು